ಮೊಳಕೆ ಕಾಳು ಬಳಸಿ ಆರೋಗ್ಯ ವೃದ್ಧಿಸಿ

ಪ್ರೋಟೀನ್‌ ಹೆಚ್ಚಾಗಿದ್ದು ಕ್ಯಾಲೋರಿ ಅಂಶ ಕಡಿಮೆ ಇರುವುದರಿಂದ ಹೊಟ್ಟೆ ತುಂಬಿದ ಅನುಭವ ಕೊಡುತ್ತದೆ.

Team Udayavani, Nov 11, 2020, 11:34 AM IST

ಮೊಳಕೆ ಕಾಳು ಬಳಸಿ ಆರೋಗ್ಯ ವೃದ್ಧಿಸಿ

ಆರೋಗ್ಯವೃದ್ಧಿಗೆ ನಾನಾ ರೀತಿಯ ಕಸರತ್ತು ಮಾಡುವುದು ಅಗತ್ಯ. ಇದರೊಂದಿಗೆ ಆಹಾರದಲ್ಲೂ ಒಂದಷ್ಟು ಬದಲಾವಣೆ ಬೇಕಾಗುತ್ತದೆ. ಆಗ ಮಾತ್ರ ಉತ್ತಮ ಆರೋಗ್ಯ, ದೇಹಪ್ರಕೃತಿ ನಮ್ಮದಾಗುವುದು. ಉತ್ತಮ ಆರೋಗ್ಯದಲ್ಲಿ ಮೊಳಕೆ ಕಾಳು  ಪ್ರಮುಖ ಪಾತ್ರವಹಿಸುತ್ತದೆ.

ಅದರಲ್ಲೂ ಬೆಳಗ್ಗಿನ ಜಾವ ಖಾಲಿ ಹೊಟ್ಟೆಯಲ್ಲಿ ಮೊಳಕೆ ಕಾಳುಗಳನ್ನು ಸೇವಿಸುವುದರಿಂದ ಅನೇಕ ಲಾಭಗಳಿವೆ. ಇವು ದೇಹಕ್ಕೆ ಬೇಕಾದ ಪೌಷ್ಟಿಕಾಂಶ ವನ್ನು ಒದಗಿಸುವುದು ಮಾತ್ರವಲ್ಲದೆ ದಿನ ವಿಡೀ ಉಲ್ಲಾಸದಿಂದ ಇರಲು ಸಹಾಯ ಮಾಡುತ್ತದೆ. ಮೊಳಕೆ ಬರಿಸಿದ ಹಸಿ ಕಾಳುಗಳಲ್ಲಿ ಬ್ಯಾಕ್ಟೀರಿಯಾ ಪ್ರಮಾಣ ಜಾಸ್ತಿ ಇರುವುದರಿಂದ ಬೇಯಿಸಿ ತಿನ್ನುವುದು ಉತ್ತಮ.

ಡಯಟ್‌ನವರಿಗೆ ಉತ್ತಮ
ಬೆಳಗ್ಗೆ ಮೊಳಕೆ ಕಾಳುಗಳನ್ನು ತಿನ್ನುವುದಿಂದ ದೇಹಕ್ಕೆ ಬೇಕಾಗುವ ಪೌಷ್ಟಿಕಾಂಶ ದೊರೆತು ಮೆಟಾ ಬೊಲಿಸಮ್‌ ಹೆಚ್ಚಾಗಿ ಕೊಬ್ಬು ಕರಗಲು ಸಹಾಯ ಮಾಡುತ್ತದೆ. ಇದರಲ್ಲಿ ಫೈಬರ್‌, ಪ್ರೋಟೀನ್‌ ಹೆಚ್ಚಾಗಿದ್ದು ಕ್ಯಾಲೋರಿ ಅಂಶ ಕಡಿಮೆ ಇರುವುದರಿಂದ ಹೊಟ್ಟೆ ತುಂಬಿದ ಅನುಭವ ಕೊಡುತ್ತದೆ.

ಹಸಿವನ್ನು ನಿಯಂತ್ರಿಸಿ ಆರೋಗ್ಯವಾಗಿರಲು ಸಹಕಾರಿ. ಇದನ್ನು ಅನುಕ್ರಮವಾಗಿ ಪ್ರತಿನಿತ್ಯ ಒಂದೇ ಸಮಯದಲ್ಲಿ ತೆಗೆದುಕೊಳ್ಳುವುದರಿಂದ ರಕ್ತದ ಕಣಗಳು ಶುದ್ಧವಾಗುತ್ತದೆ. ಅಲ್ಲದೆ ಚರ್ಮವನ್ನು ಕಾಂತಿಯಕ್ತವಾಗಿ ಮಾಡುತ್ತದೆ. ವೃದ್ಧಾಪ್ಯದ ಲಕ್ಷಣಗಳು ಬೇಗ ಬಾರದಂತೆ ನೋಡಿಕೊಳ್ಳುತ್ತದೆ.

ಮೊಳಕೆ ಬರಿಸಿದ ಹೆಸರು ಕಾಳು
ಇದರಲ್ಲಿ ವಿಟಮಿನ್‌ ಸಿ ಅಧಿಕವಾಗಿದ್ದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಹಲವಾರು ಸೋಂಕು ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಫ್ರೀ ರಾಡಿಕಲ್ ‌ ನಿಂದ ರಕ್ಷಿಸುತ್ತದೆ. ಫ್ರೀ ರಾಡಿಕಲ್ ಕಲ್‌ ಅನ್ನು ಆ್ಯಂಟಿ ಆಕ್ಸಿಡೆಂಟ್‌ಗಳು  ತಟಸ್ಥಗೊಳಿಸದೇ ಇದ್ದರೆ ಅದು ಆರೋಗ್ಯಕರ ಕೋಶಗಳ ಮೇಲೆ ದಾಳಿ ಮಾಡುವುದು.

ರಕ್ತ ಸಂಚಾರವನ್ನು ಸುಗಮಗೊಳಿಸಿ ದೇಹದ ವಿವಿಧ ಅಂಗಾಂಶ ಹಾಗೂ ಕೋಶಗಳಿಗೆ ಆಮ್ಲಜನಕವು ಸರಬರಾಜು ಆಗಲು ನೆರವಾಗುತ್ತದೆ. ಹಾಲಿನಲ್ಲಿರುವಷ್ಟು ಪೋಷಕಾಂಶ ಮೊಳಕೆ ಕಾಳಿನಲ್ಲಿ ದೊರೆಯುವುದರಿಂದ ಮೂಳೆಗಳು ಗಟ್ಟಿಗೊಳ್ಳುತ್ತವೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರಲ್ಲೂ ಜೀರ್ಣಕ್ರಿಯೆಯ ಸಮಸ್ಯೆ ಇರುತ್ತದೆ.

ಅಂಥವರು ಮೊಳಕೆಕಾಳುಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದು ಬಿಸಿ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ. ಇದನ್ನು ಸಂಜೆ ತಿನ್ನುವುದು ಕೂಡ ಉತ್ತಮ. ಹೆಸರುಕಾಳು ಮಾತ್ರವಲ್ಲ ಮಡಕೆ ಕಾಳು, ಹುರುಳಿ ಕಾಳುಗಳಲ್ಲಿ ಯಾವುದಾದರನ್ನು ಪ್ರತಿ ನಿತ್ಯ ಸೇವಿಸುವುದರಿಂದ ಆರೋಗ್ಯ ಉತ್ತಮವಾಗಿರಿಸಿಕೊಳ್ಳಬಹುದು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.