ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ


Team Udayavani, Nov 11, 2020, 4:55 PM IST

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಮಂಡ್ಯ: ಗೋದಾಮುಗಳಲ್ಲಿ ಕೊಳೆಯುತ್ತಿರುವ  ಆಹಾರ ಧಾನ್ಯಗಳ ರಕ್ಷಣೆಗೆ ಸೂಕ್ತ ಕ್ರಮ, ಬಿಸಿಯೂಟ ಫ‌ಲಾನುಭವಿಗಳಿಗೆ ಸಮರ್ಪಕ ಧಾನ್ಯ ವಿತರಣೆ ಹಾಗೂ ಅಗತ್ಯ ವಸ್ತುಗಳಬೆಲೆ ಏರಿಕೆ ಖಂಡಿಸಿ ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಅಗತ್ಯವಸ್ತುಗಳಾದ ಈರುಳ್ಳಿ, ಬೆಳ್ಳುಳ್ಳಿ, ಟೊಮೆಟೋ, ಗ್ಯಾಸ್‌ ಸಿಲಿಂಡರ್‌ ಸೇರಿ ವಿವಿಧ ವಸ್ತುಗಳನ್ನಿಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಅಲ್ಲದೇ,ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆ ಆಗಿರುವುದರಿಂದ ಹಿಂದೆ ಸೌದೆ ಒಲೆಯಲ್ಲಿ ಆಹಾರ ತಯಾರಿಸುವ ಸ್ಥಿತಿಗೆ ಕೇಂದ್ರ ಸರ್ಕಾರ ಬಡವರ ಮೇಲೆ ಪ್ರಹಾರ ನಡೆಸಲು ಮುಂದಾಗಿದೆ ಎಂದು ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಕ್ರಮ ಕೈಗೊಳ್ಳಿ: ಕೋವಿಡ್ ದಿಂದ ಲಾಕ್‌ಡೌನ್‌ಸಂದರ್ಭದಲ್ಲಿ ಸಾಕಷ್ಟು ಮಂದಿ ಉದ್ಯೋಗಕಳೆದು ಕೊಂಡರು. ಆರ್ಥಿಕವಾಗಿ ಸಂಕಷ್ಟ ಎದುರಾಯಿತು. ಅಲ್ಲದೆ, ಶಾಲಾ, ಅಂಗನವಾಡಿ ಕೇಂದ್ರಗಳನ್ನು ತೆರೆಯದ ಪರಿಣಾಮ ಮಕ್ಕಳು ಬಿಸಿಯೂಟದಿಂದ ವಂಚಿತವಾದವು. ಇದು ಸರ್ಕಾರಕ್ಕೆ ಗೊತ್ತಿದ್ದರೂ ಆಹಾರ ಧಾನ್ಯಗಳನ್ನು ಮನೆ ಪೂರೈಸದೆ ನಿಲ್ಲಿಸಿದೆ. ಇದರಿಂದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಗೋದಾಮುಗಳಲ್ಲಿ ಅಪಾರ ಪ್ರಮಾಣದ ಆಹಾರ ಧಾನ್ಯ ಕೊಳೆತುನಾರುತ್ತಿದೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾನವೀಯತೆ ಇಲ್ಲ:  43258 ಟನ್‌ ಅಕ್ಕಿ, 1716ಟನ್‌ ಗೋಧಿ, 12,046 ಟನ್‌ ತೊಗರಿಬೇಳೆ, ಖಾದ್ಯ ತೈಲ ಮನುಷ್ಯರ ಬಳಕೆಗೆ ಯೋಗ್ಯವಲ್ಲದ ಸ್ಥಿತಿ ತಲುಪಿವೆ. ಇದು ಮಾನವ ನಿರ್ಮಿತ ದುರಂತ. ಗೋದಾಮುಗಳಲ್ಲಿ ಆಹಾರಧಾನ್ಯ ಸಂಗ್ರಹ ವಿದ್ದೂ ವಿತರಿಸದಂತೆ ತಡೆ ಹಿಡಿದ ಆರ್ಥಿಕ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಉಪಯೋಗಕ್ಕೆ ಬಳಸಬಹುದಾದ ಧಾನ್ಯಗಳನ್ನು ಅಗತ್ಯವಿರುವವರಿಗೆ ಹೆಚ್ಚುವರಿ ವಿತರಿಸಬೇಕು ಎಂದು ಒತ್ತಾಯಿಸಿದರು.

ಸುಗ್ರಿವಾಜ್ಞೆ ಹಿಂಪಡೆಯಿರಿ: ತಕ್ಷಣವೇ ಕೇರಳ ಮಾದರಿಯಲ್ಲಿ ಮಧ್ಯಾಹ್ನದ ಬಿಸಿಯೂಟದ ಎಲ್ಲಾ ಫ‌ಲಾನುಭವಿಗಳಿಗೂ ತಾರತಮ್ಯವಿಲ್ಲದೆ ಹಂಚ ಬೇಕು. ಘೋಷಣೆಗೆ ಮತ್ತು ಪ್ರಚಾರಕ್ಕೆ ಕೆಲವೆಡೆ ಹಂಚಿಬಿಟ್ಟ ಹಿಂದಿನ ಅನುಭವ ಮರುಕಳಿಸದಂತೆ ಎಚ್ಚರ ವಹಿಸಬೇಕು. ವಿದ್ಯುತ್‌ದರ, ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು. ಕೃಷಿ ಸುಗ್ರಿವಾಜ್ಞೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಅಖೀಲ ಭಾರತ ಜನವಾದಿ ಸಂಘಟನೆರಾಜ್ಯಾಧ್ಯಕ್ಷೆ ದೇವಿ, ಜಿಲ್ಲಾಧ್ಯಕ್ಷೆ ಶೋಭಾ, ಮಂಜುಳಾ, ಸುಶೀಲಾ, ಡಿ.ಕೆ.ಲತಾ, ಪ್ರೇಮಾ, ಜಯಶೀಲಾ, ಸುಮಿತ್ರಾ ಮತ್ತಿತರರಿದ್ದರು.

ಶಾಲೆ, ಅಂಗನವಾಡಿ ಕೇಂದ್ರಗಳನ್ನು ಬಂದ್‌ ಮಾಡಿದ್ದರಿಂದ ಮಕ್ಕಳು ಬಿಸಿಯೂಟದಿಂದ ವಂಚಿತರಾಗಿವೆ. ಇತ್ತ ಆಹಾರ ಧಾನ್ಯ ಗೋದಾಮುಗಳಲ್ಲಿ ಹುಳು ಹಿಡಿಯುತ್ತಿವೆ.ಕೂಡಲೇ ಸರ್ಕಾರ ಎಚ್ಚೆತ್ತು ಬಿಸಿಯೂಟಯೋಜನೆ ಫ‌ಲಾನುಭವಿಗಳಿಗೆ ಆಹಾರವಿತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು. ದೇವಿ, ರಾಜ್ಯಾಧ್ಯಕ್ಷೆ, ಅಖೀಲ ಭಾರತ ಜನವಾದಿ ಸಂಘಟನೆ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.