ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ


Team Udayavani, Nov 12, 2020, 1:17 PM IST

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ ಅಂದರೆ ಅದು ಯುವ ಹಾಗೂ ಪ್ರತಿಭಾನ್ವಿತ ಆಟಗಾರರ ಸಾಮರ್ಥ್ಯ ಪ್ರದರ್ಶನಕ್ಕೊಂದು ವೇದಿಕೆ. ಅನಾಮಧೇಯ ಕ್ರಿಕೆಟಿಗರೆಲ್ಲ ನಿರೀಕ್ಷೆಗೂ ಮಿಗಿಲಾದ ಪ್ರದರ್ಶನ ನೀಡುವುದು, ರಾಷ್ಟ್ರೀಯ ತಂಡವನ್ನು ಪ್ರವೇಶಿಸುವುದು, ಇಲ್ಲವೇ ದೇಶಿ ಕ್ರಿಕೆಟ್‌ನಲ್ಲಿ ಸಾಮರ್ಥ್ಯ ಸಾಬೀತುಪಡಿಸುವುದೆಲ್ಲ ಐಪಿಎಲ್ ಆರಂಭದಿಂದಲೂ ಕಂಡುಬಂದಿದೆ.

ಅರಬ್‌ ನಾಡಿನಲ್ಲಿ ನಡೆದ 2020ರ ಐಪಿಎಲ್‌ ಪಂದ್ಯಾವಳಿ ಕೂಡ ಇದಕ್ಕೆ ಹೊರತಾಗಿಲ್ಲ. ಹಾಗೆ ನೋಡಹೋದರೆ ಇಲ್ಲಿ ಎಂದಿಗಿಂತ ಹೆಚ್ಚಿನ ಸಂಖ್ಯೆಯ ಯುವ ಪ್ರತಿಭೆಗಳು ಹೊರಹೊಮ್ಮಿದವೆಂದೇ ಹೇಳಬೇಕು. ಇವರಲ್ಲಿ ಐವರು ಇಲ್ಲಿದ್ದಾರೆ.

ಬ್ಯಾಟಿಂಗ್‌ ಪರಾಕ್ರಮಿ ಪಡಿಕ್ಕಲ್‌

ನೀಳಕಾಯದ ಎಡಗೈ ಆರಂಭಕಾರ ದೇವದತ್ತ ಪಡಿಕ್ಕಲ್‌ ಈ ಬಾರಿ ಎಲ್ಲರನ್ನೂ ಮೋಡಿಗೈದ ಕ್ರಿಕೆಟಿಗ. ಕೇವಲ ಕೊಹ್ಲಿ, ಎಬಿಡಿ ಅವರನ್ನೇ ನಂಬಿ ಕುಳಿತ್ತಿದ್ದ ಆರ್‌ಸಿಬಿ ಬ್ಯಾಟಿಂಗ್‌ ಸರದಿಗೆ ಹೊಸ ಶಕ್ತಿ ತುಂಬಿದ ಆಟಗಾರ. ಸಾಧನೆಯಲ್ಲಿ ಇವರಿಬ್ಬರನ್ನೂ ಮೀರಿಸಿದ ಪಡಿಕ್ಕಲ್‌ 5 ಅರ್ಧ ಶತಕ, 473 ರನ್‌ ಬಾರಿಸಿ ಟೀಮ್‌ ಇಂಡಿಯಾದ ಭವಿಷ್ಯದ ಆರಂಭಕಾರನಾಗುವ ಎಲ್ಲ ಸಾಧ್ಯತೆಗಳನ್ನು ತೆರೆದಿಟ್ಟಿದ್ದಾರೆ.

ಇದನ್ನೂ ಓದಿ:ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿಶನ್‌; ಕೀಪರ್‌ ಕಂ ಸ್ಟ್ರೋಕ್‌ ಮೇಕರ್‌

ಮುಂಬೈಯ ಕೀಪರ್‌ ಹಾಗೂ ಎಡಗೈ ಆಟಗಾರನಾಗಿರುವ ಇಶಾನ್‌ ಕಿಶನ್‌ ಹಿಂದಿನ ಋತುಗಳಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫ‌ಲರಾಗಿದ್ದರು. ಆದರೆ ಈ ಬಾರಿ 483 ರನ್‌ ಪೇರಿಸಿ ಪ್ರಚಂಡ ಪ್ರದರ್ಶನ ನೀಡಿದ್ದಾರೆ. ಜತೆಗೆ “ಸಿಕ್ಸರ್‌ ಕಿಂಗ್‌’ ಕೂಡ ಎನಿಸಿದ್ದಾರೆ. ಧೋನಿ ನಿವೃತ್ತಿ, ಪಂತ್‌ ವೈಫ‌ಲ್ಯವನ್ನೆಲ್ಲ ಪರಿಗಣಿಸುವಾಗ ಇಶಾನ್‌ ಕಿಶನ್‌ ಭಾರತ ತಂಡವನ್ನು ಪ್ರವೇಶಿಸುವ ದಿನ ದೂರ ಇಲ್ಲ ಎಂದೇ ಹೇಳಬೇಕು

ಯಾರ್ಕರ್‌ ಮೆಶಿನ್‌ ನಟರಾಜನ್‌

ತಮಿಳುನಾಡಿನ ಟಿ. ನಟರಾಜನ್‌ ಈ ಐಪಿಎಲ್‌ ಕಂಡ ಅತ್ಯಂತ ಅಪಾಯಕಾರಿ ಬೌಲರ್‌. ಸೀಸನ್‌ನಲ್ಲಿ ಅತ್ಯಧಿಕ ಯಾರ್ಕರ್‌ ಎಸೆದ ದಾಖಲೆ ಇವರದು. ಎಡಗೈ ಬೌಲರ್‌ ಆದ ಕಾರಣ ಸ್ಕೋಪ್‌ ಜಾಸ್ತಿ. ಸನ್‌ರೈಸರ್ ತಂಡದ ಪ್ಲೇ ಆಫ್ ಪ್ರವೇಶದಲ್ಲಿ ನಟರಾಜನ್‌ ಪಾತ್ರ ಮಹತ್ವದ್ದು. ಈಗಾಗಲೇ ಆಸ್ಟ್ರೇಲಿಯ ಪ್ರವಾಸಕ್ಕಾಗಿ ಆರಿಸಲಾದ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮ್ಯಾಚ್‌ ವಿನ್ನರ್‌ ಋತುರಾಜ್‌

ಋತುರಾಜ್‌ ಗಾಯಕ್ವಾಡ್‌ ಸರಣಿ ಯನ್ನು ಸಕಾರಾತ್ಮಕವಾಗಿ ಆರಂಭಿಸದೇ ಇರ ಬಹುದು, ಆದರೆ ಕೋವಿಡ್ ಗೆದ್ದ ಈ ಬ್ಯಾಟ್ಸ್‌ಮನ್‌ ಬಳಿಕ ಪಂದ್ಯವನ್ನೂ ಗೆಲ್ಲಿಸಬಲ್ಲೆ ಎಂಬುದನ್ನು ನಿರೂಪಿಸಿದ್ದು ಮಾತ್ರ ಸುಳ್ಳಲ್ಲ. ಚೆನ್ನೈಬೇಗನೇ ರಿಟರ್ನ್ ಟಿಕೆಟ್‌ ಪಡೆದರೂ ಗಾಯಕ್ವಾಡ್‌ ಕೊನೆಯ 3 ಪಂದ್ಯಗಳನ್ನು ಗೆಲ್ಲಿಸಿ, ತಂಡದ ಕೊನೆಯ ಸ್ಥಾನದ ಅವಮಾನವನ್ನು ತಪ್ಪಿಸಿದ್ದನ್ನು ಮರೆಯುವಂತಿಲ್ಲ.

ಮೋಡಿಗೈದ ತೆವಾಟಿಯಾ

ಈ ಬಾರಿ ಎಲ್ಲ ಕ್ರಿಕೆಟ್‌ ಅಭಿಮಾನಿಗಳನ್ನೂ ಮೋಡಿಗೈದ ಒಂದು ಹೆಸರೆಂದರೆ ರಾಹುಲ್‌ ತೆವಾಟಿಯಾ. ರಾಜಸ್ಥಾನ್‌ನ ಈ ಲೆಗ್‌ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ ಕೆಳ ಕ್ರಮಾಂಕದಲ್ಲಿ ಬಂದು ಹೊಡಿಬಡಿ ಆಟದ ಮೂಲಕ ಎದುರಾಳಿಗಳನ್ನು ಬೆಚ್ಚಿಬೀಳಿಸಿದರು. ಪಂಜಾಬ್‌ ವಿರುದ್ಧ ಸಿಡಿದು ನಿಂತು ಏಕಾಂಗಿಯಾಗಿ ಪಂದ್ಯವನ್ನು ಗೆಲ್ಲಿಸಿಕೊಟ್ಟ ಬಳಿಕ ತೆವಾಟಿಯಾ ಹೆಸರು ಮನೆಮಾತಾಗಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.