ಶತಕ ದಾಟಿದ ವಿವಿ ಸಾಗರ ನೀರಿನ ಮಟ್ಟ
ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಂತಸ
Team Udayavani, Nov 12, 2020, 5:25 PM IST
ಹಿರಿಯೂರು: ತಾಲೂಕಿನ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ 100 ಅಡಿ ದಾಟಿದ್ದು, ಬರಗಾಲದಿಂದಬೇಸತ್ತಿದ್ದ ಅಚ್ಚುಕಟ್ಟು ಪ್ರದೇಶದ ರೈತರ ಮುಖದಲ್ಲಿ ಸಂತಸ ಮೂಡಿಸಿದೆ.
ವಾಣಿವಿಲಾಸ ಜಲಾಶಯದಲ್ಲಿ ನೀರು ಸಂಗ್ರಹ ಕಾರ್ಯ ಸುಮಾರು1911ರಿಂದಲೇ ಆರಂಭವಾಗಿದೆ.ಜಲಾಶಯ ನಿರ್ಮಾಣಗೊಂಡಮೊದಲ ವರ್ಷವೇ 109.66 ಅಡಿ ನೀರು ಸಂಗ್ರಹವಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಸುಮಾರು 57 ಬಾರಿ ಜಲಾಶಯದ ನೀರಿನ ಮಟ್ಟ 100 ಅಡಿದಾಟಿದೆ ಎಂದು ಹೇಳಲಾಗಿದೆ. ಕಳೆದ ವರ್ಷ ಇದೇ ವೇಳೆಯಲ್ಲಿ ನೀರಿನಮಟ್ಟ 93.40 ಅಡಿ ಇತ್ತು. ಪ್ರಸಕ್ತ ವರ್ಷ 102 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟ 130 ಅಡಿಇದ್ದು, ಇದುವರೆಗೆ ಒಮ್ಮೆ ಮಾತ್ರ 1933ರಲ್ಲಿ ಭರ್ತಿಯಾಗಿದೆ. ಈವರೆಗೆ11 ಬಾರಿ 120 ಅಡಿಗಿಂತ ಹೆಚ್ಚು ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ.
ಪ್ರಸಕ್ತ ವರ್ಷ ಮಳೆ ನೀರಿನ ಜೊತೆಗೆ ಭದ್ರಾ ನೀರು ಹರಿದು ಬರುತ್ತಿರುವ ಕಾರಣ ನಿಧಾನವಾಗಿ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಏರುತ್ತಿದೆ. ಶಾಂತಿಪುರ ಮತ್ತು ಬೆಟ್ಟದ ತಾವರೆಕೆರೆ ಬಳಿ ಲಿಫ್ಟ್ಗಳಲ್ಲಿ ಎರಡು ಪಂಪ್ ಗಳನ್ನು ಚಾಲೂ ಮಾಡಿ, ಮಾರ್ಚ್ ವರೆಗೆ ಹರಿಸಿದಲ್ಲಿ ನೀರಿನ ಮಟ್ಟ 115 ಅಡಿ ತಲುಪುವ ಸಾಧ್ಯತೆ ಇದೆ. ಇದರಿಂದಾಗಿ ತಾಲೂಕಿನಲ್ಲಿ ಕೃಷಿ ಚಟುವಟಿಕೆ ಮತ್ತೆ ಚಿಗುರೊಡೆದಿದೆ. ಅಚ್ಚುಕಟ್ಟು ಪ್ರದೇಶದ ರೈತರು ತಮ್ಮಕೃಷಿ ಭೂಮಿಯಲ್ಲಿ ಮತ್ತೆ ಅಡಿಕೆ, ತೆಂಗು ಸಸಿಗಳನ್ನು ನೆಡುವ ಮೂಲಕ ತೋಟಗಾರಿಕೆ ಬೆಳೆ ಬೆಳೆಯಲು ಉತ್ಸುಕರಾಗಿದ್ದಾರೆ.
ಕಳೆದ ವರ್ಷ ಡೆಡ್ ಸ್ಟೋರೇಜ್ಗೂ ಇಳಿದಿತ್ತು : ಪ್ರಥಮ ಬಾರಿಗೆ ಜಲಾಶಯದ ನೀರಿನ ಮಟ್ಟ 2019ರ ಜೂನ್ ತಿಂಗಳಲ್ಲಿ ಡೆಡ್ ಸ್ಟೋರೇಜ್ಗೆ ಅಂದರೆ 60 ಅಡಿ ಆಳಕ್ಕೆ ಇಳಿದಿತ್ತು. ನಂತರ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಹಿಂಗಾರು ಮಳೆ ಉತ್ತಮವಾಗಿ ಆಗಿದ್ದರಿಂದ ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ಪರ್ಯಾಯ ಮಾರ್ಗ ನಿರ್ಮಿಸಿ ನೀರು ಹರಿಸಿದ್ದರಿಂದ ಕಳೆದ ಬಾರಿ ಸಹ ನೀರಿನ ಮಟ್ಟ 102 ಅಡಿ ತಲುಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ