ಸಚಿವ ಸಂಪುಟ ವಿಸ್ತರಣೆ ಬದಲು ಪುನರ್ ರಚನೆಯಾಗಲಿ: ಮಾಲೀಕಯ್ಯ ಗುತ್ತೇದಾರ
Team Udayavani, Nov 13, 2020, 12:26 PM IST
ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಬದಲು ಪುನಾರಚನೆ ಮಾಡುವುದು ಸೂಕ್ತವಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ವಿ ಗುತ್ತೇದಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆಯಾದರೆ ಎಲ್ಲರಿಗೂ ಅವಕಾಶ ದೊರೆಯುತ್ತದೆ. ಈಗಾಗಲೇ ಸಚಿವರಾದವರು ಹೊಸಬರಿಗೆ ಸಚಿವರಾಗಲು ಸಹಕರಿಸಬೇಕು ಎಂದರು.
ಸರ್ಕಾರ ರಚನೆಯಾಗುವಲ್ಲಿ ಹಲವರ ತ್ಯಾಗ, ಶ್ರಮ ಅಡಗಿದೆ. ಹೀಗಾಗಿ ಪಕ್ಷಕ್ಕೆ ಬಂದವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಬೇಕಿದೆ. ಜತೆಗೆ ಪಕ್ಷಕ್ಕಾಗಿ ದುಡಿದವರಿಗೂ ಗುರುತಿಸಬೇಕಿದೆ. ಹೀಗಾಗಿ ಸಂಪುಟ ವಿಸ್ತರಣೆ ಬದಲು ಪುನಾರಚನೆಯಾಗಬೇಕೆಂದರು.
ಒಬ್ಬೊಬ್ಬ ಸಚಿವ ರಿಗೆ ಎರಡೆರಡು ಜಿಲ್ಲೆಗಳ ಉಸ್ತುವಾರಿ ಇರುವುದರಿಂದ ಜೊತೆಗೆ ಕೋವಿಡ್ ದಂತಹ ಸಂಕಷ್ಟ ಸ್ಥಿತಿ ಇರುವುದರಿಂದ ಆಡಳಿತ ಇನ್ನಷ್ಟು ಚುರುಕುಗೊಳ್ಳಬೇಕಿದೆ. ಹೀಗಾಗಿ ಕಲಬುರಗಿ ಸೇರಿ ಇತರ ಜಿಲ್ಲೆಗಳಿಗೆ ಎರಡೆರಡು ಜಿಲ್ಲೆಗಳ ಉಸ್ತುವಾರಿ ಹೊಂದಿರುವುದನ್ನು ಬಿಡುಗಡೆಗೊಳ್ಳುವುದು ಸಹ ಸೂಕ್ತವಾಗಿದೆ ಎಂದು ಇದೇ ಸಂದರ್ಭದಲ್ಲಿ ಗುತ್ತೇದಾರ ಹೇಳಿದರು.
ನನಗಂತತೂ ಮಂತ್ರಿಯಾಗುವ ಆಸೆಯಿಲ್ಲ. ಭಿಕ್ಷೆ ಬೇಡಲ್ಲ. ಕೊಟ್ಟಿದ್ದನ್ನು ಪಡೆಯುವೆ. ಪಕ್ಷದ ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಬಿಜೆಪಿಯದ್ದಾಗಿದೆ ಎಂದರು.
ಕೋವಿಡ್ ದಾಳಿಯಿಂದ ಸಾವಿನ ಬಾಗಿಲಿಗೆ ಹೋಗಿ ಬರಲಾಗಿದೆ. ನಾಲ್ಕೈದು ದಿನ ಪುನರ್ಜನ್ಮದ ಅನುಭವವಾಯಿತು. ಈಗ ಸ್ವಲ್ಪ ಆರಾಮವಾಗಿದೆ ಎಂದು ಅನುಭವಗಳನ್ನು ಮಾಲೀಕಯ್ಯ ವಿ. ಗುತ್ತೇದಾರ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್
Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ
Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ