ಚಳಿಗಾಲ: ಮಕ್ಕಳ ಆಹಾರದಲ್ಲಿರಲಿ ಎಚ್ಚರ

ಕಿವಿಯ ಸೋಂಕು, ಚರ್ಮದ ತೊಂದರೆ, ಅಸ್ತಮಾ ತೊಂದರೆ ಹೆಚ್ಚಾಗಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತದೆ.

Team Udayavani, Nov 13, 2020, 12:58 PM IST

ಚಳಿಗಾಲ: ಮಕ್ಕಳ ಆಹಾರದಲ್ಲಿರಲಿ ಎಚ್ಚರ

ಮಕ್ಕಳು ಮತ್ತು ವೃದ್ಧರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹೀಗಾಗಿ ವಾತಾವರಣದಲ್ಲಾಗುವ ಸಣ್ಣಪುಟ್ಟ ಬದಲಾವಣೆಗಳೂ ಇವರ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಅಲ್ಲದೇ ಸುಲಭವಾಗಿ ವೈರಸ್‌ ದಾಳಿಗೆ ತುತ್ತಾಗುವಂತೆ ಮಾಡುತ್ತದೆ. ಹೀಗಾಗಿಯೇ ಚಳಿಗಾಲರಂಭವಾಗುತ್ತಿದ್ದಂತೆ ಶೀತ, ಫ್ಲೂ, ನ್ಯುಮೋನಿಯಾ, ಕಿವಿಯ ಸೋಂಕು, ಚರ್ಮದ ತೊಂದರೆ, ಅಸ್ತಮಾ ತೊಂದರೆ ಹೆಚ್ಚಾಗಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತದೆ.ಹೀಗಾಗಿ ಚಳಿಗಾಲದಲ್ಲಿ ಮಕ್ಕಳ ಆಹಾರದ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸುವುದು ಮುಖ್ಯ.

ಉಪ್ಪು, ಎಣ್ಣೆ
ಚಳಿಗಾಲದಲ್ಲಿ ಮಕ್ಕಳ ಆಹಾರದಲ್ಲಿ ಉಪ್ಪು ಮತ್ತು ಎಣ್ಣೆಯ ಅಂಶ ಅತ್ಯಂತ ಕನಿಷ್ಠ ಪ್ರಮಾಣದಲ್ಲಿರಲಿ. ಇವುಗಳು ಹೆಚ್ಚಾದರೆ ಕೆಲವೊಂದು ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ.

ಸಕ್ಕರೆ, ಕ್ಯಾಂಡಿ
ಮಕ್ಕಳಿಗೆ ಪ್ರಿಯವಾಗುವ ಕ್ಯಾಂಡಿ, ಸಕ್ಕರೆ ಹೆಚ್ಚಿರುವ ಆಹಾರಗಳು ದೇಹದಲ್ಲಿ ಬಿಳಿ ರಕ್ತದ ಕಣಗಳು ಕಡಿಮೆಯಾಗುವಂತೆ ಮಾಡುತ್ತದೆ ಮಾತ್ರವಲ್ಲ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕುಂದುವಂತೆ ಮಾಡುತ್ತದೆ. ಇದರಿಂದ ಮಕ್ಕಳು ಬಹುಬೇಗನೆ ವೈರಸ್‌, ಬ್ಯಾಕ್ಟೀರಿಯಾಗಳ ಸೋಂಕಿಗೆ ತುತ್ತಾಗುತ್ತಾರೆ.

ಡೈರಿ ಉತ್ಪನ್ನಗಳು
ಇವುಗಳಲ್ಲಿ ಪ್ರಾಣಿಜನ್ಯ ಪ್ರೋಟೀನ್‌ಗಳು ಅಧಿಕವಾಗಿರುತ್ತದೆ. ಇದು ಜೊಲ್ಲು ಮತ್ತು ಕಫ‌ ಹೆಚ್ಚಲು ಕಾರಣವಾಗುತ್ತದೆ. ಅಲ್ಲದೇ ಮಕ್ಕಳಿಗೆ ಆಹಾರ ನುಂಗಲು ಕಷ್ಟವಾಗಬಹುದು. ಹೀಗಾಗಿ ಚೀಸ್‌, ಕ್ರೀಮ್‌, ಕ್ರೀಮ್‌ ಬೆರೆಸಿದ ಸೂಪ್‌, ಹೆಚ್ಚು ಗಾಢವಾದ ಡೈರಿ ಉತ್ಪನ್ನಗಳು ಮಕ್ಕಳಿಗೆ ನೀಡದೇ ಇರುವುದು ಉತ್ತಮ.
ಹಾಲು, ಬೆಣ್ಣೆ, ಮೊಸರು, ಒಮೆಗಾ3 ಕೊಬ್ಬಿನಾಮ್ಲಗಳು ಆರೋಗ್ಯ ವೃದ್ಧಿಸಿದರೂ ಮಕ್ಕಳಲ್ಲಿ ಕಫ‌, ಜೊಲ್ಲು ರಸ ಹೆಚ್ಚಿಸುತ್ತವೆ. ಪ್ರಾಣಿಜನ್ಯ ಆಹಾರಗಳಿಂದ ಮಕ್ಕಳನ್ನು ದೂರವಿಡುವುದು ಉತ್ತಮ.

ಮೆಯೊನೈಸ್‌
ದೇಹದಲ್ಲಿ ಅಲರ್ಜಿಯ ವಿರುದ್ಧ ಹೋರಾಡಲು  ಸಹಾಯಕವಾದ ಹಿಸ್ಟಮಿನ್‌ ಮಯೋನ್ನೀಸ್‌ನಲ್ಲಿ ಅಧಿಕವಾಗಿರುತ್ತದೆ. ಆದರೆ ಚಳಿಗಾಲದಲ್ಲಿ ಇದನ್ನು ಸೇವಿಸುವುದರಿಂದ ಕಫ‌ ಹೆಚ್ಚುತ್ತದೆ. ಇದರಿಂದ ಕೆಮ್ಮು ಉಂಟಾಗುತ್ತದೆ. ಹಿಸ್ಟಮೈನ್‌ ಹೆಚ್ಚಾಗಿ ಟೊಮ್ಯಾಟೊ, ಬೆಣ್ಣೆಹಣ್ಣು, ಬಿಳಿಬದನೆ, ಮಯೋನ್ನೀಸ್‌, ಅಣಬೆ, ಶಿರ್ಕಾ, ಮಜ್ಜಿಗೆ, ಉಪ್ಪಿನಕಾಯಿ, ಹುದುಗು ಬರಿಸಿದ ಮತ್ತು ಕೃತಕ ಆಹಾರಗಳಲ್ಲಿರುತ್ತದೆ.

ಮಾಂಸಾಹಾರ
ಮಾಂಸದಲ್ಲಿ ಪ್ರೋಟೀನ್‌ ಪ್ರಮಾಣ ಅಧಿಕವಾಗಿರುತ್ತದೆ. ಇದು ಮಕ್ಕಳಲ್ಲಿ ಕಫ‌ದ ಸಾಂದ್ರತೆಯನ್ನು ಹೆಚ್ಚು ಮಾಡುತ್ತದೆ. ಇದರಿಂದ ಗಂಟಲಲ್ಲಿ ಕೆರೆತ, ಕೆಮ್ಮು ಆರಂಭವಾಗುತ್ತದೆ. ಸಂಸ್ಕರಿಸಿದ ಮಾಂಸ, ಮೊಟ್ಟೆ ಮಕ್ಕಳಿಗೆ ಚಳಿಗಾಲದಲ್ಲಿ ಸೂಕ್ತವಲ್ಲ. ಇದರ ಬದಲು ಮೀನು, ಸಾವಯವ ಮಾಂಸಗಳನ್ನು ಅಲ್ಪ ಪ್ರಮಾಣದಲ್ಲಿ ನೀಡಬಹುದು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.