ಅಕ್ರಮವಾಗಿ ಅರಣ್ಯ ಪ್ರವೇಶಿಸಿದ್ದ ಮೂವರ ಬಂಧನ: 2 ನಾಡಬಂದೂಕು, ಮುದ್ದುಗುಂಡು ವಶ
Team Udayavani, Nov 13, 2020, 2:05 PM IST
ಹನೂರು (ಚಾಮರಾಜನಗರ) : ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿ ಬೇಟೆಗೆ ಹೊಂಚು ಹಾಕುತ್ತಿದ್ದ 3 ಜನರನ್ನು ಬಂಧಿಸುವಲ್ಲಿ ಕಾವೇರಿ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ತಾಲೂಕಿನ ಗಡಿಯಂಚಿನ ಆತೂರು ಗ್ರಾಮದ ಅಯ್ಯನ್, ಮಾರೀಮುತ್ತು ಮತ್ತು ಶಿವಕುಮಾರ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಈ 3 ಜನರ ತಂಡ ಅಕ್ರಮವಾಗಿ ಗೋಪಿನಾಥಂ ವಿಭಾಗದ ಮೇಟಗಲು ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದಾರೆ.
ಇದನ್ನು ಗಮನಿಸಿದ ಗುಂಡಪಟ್ಟಿ ಕಳ್ಳಬೇಟೆ ತಡೆ ಶಿಬಿರ ಮತ್ತು ಪುಂಗಂ ಗಸ್ತಿನ ಅರಣ್ಯ ರಕ್ಷಕ ಚಂದ್ರಶೇಖರ್ ಕಂಬಾರ ಗಸ್ತಿನಲ್ಲಿರುವಾಗ ಈ ತಂಡವನ್ನು ಪತ್ತೆ ಹಚ್ಚಿ ಬಂಧನಕ್ಕೊಳಪಡಿಸಿದ್ದಾರೆ. ಈ ವೇಳೆ ಬಂಧಿತರಿಂದ 2 ನಾಡಬಂದೂಕು, 1 ಹೋಂಡಾ ಶೈನ್ ದ್ವಿಚಕ್ರ ವಾಹನ, 2 ಕತ್ತಿ, ತಲೆ ಬ್ಯಾಟರಿ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಳಿಕ ಇವರನ್ನು ವಿಚಾರಣೆಗೊಳಪಡಿಸಿದಾಗ ಈ ಹಿಂದೆ ಜಿಂಕೆ ಬೇಟೆಯಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಅರಣ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ