ಕೇರಳ ಸಿಪಿಎಂ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೊಡಿಯೇರಿ ಬಾಲಕೃಷ್ಣನ್ ರಾಜೀನಾಮೆ?
Team Udayavani, Nov 13, 2020, 5:40 PM IST
ತಿರುವನಂತಪುರ: ಕೇರಳ ಸಿಪಿಎಂ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕೊಡಿಯೇರಿ ಬಾಲಕೃಷ್ಣ ನ್ ರಾಜೀನಾಮೆ ನೀಡಿದ್ದಾರೆ. ಮುಂದಿನ ತಿಂಗಳು ದೇವರ ಸ್ವಂತ ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ, ಮುಂದಿನ ಏಪ್ರಿಲ್-ಮೇ ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ, ಬೆಂಗಳೂರು ಡ್ರಗ್ಸ್ ಪ್ರಕರಣದಲ್ಲಿ ಅವರ ಪುತ್ರ ಬಿನೀಶ್ ಕೊಡಿಯೇರಿ ಬಂಧನವಾಗಿರುವಂತೆಯೇ ಬಾಲಕೃಷ್ಣನ್ ಶುಕ್ರವಾರ ಹುದ್ದೆ ತೊರೆದಿದ್ದಾರೆ.
ದೀರ್ಘ ಕಾಲದಿಂದ ಅನಾರೋಗ್ಯಪೀಡಿತರಾಗಿರುವ ತಾವು ಚಿಕಿತ್ಸೆಯ ಕಾರಣದಿಂದ ಹುದ್ದೆ ತೊರೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ನಿರ್ಧಾರವನ್ನು ಮನ್ನಿಸುವುದಾಗಿ ಸಿಪಿಎಂ ಹೇಳಿದರೂ ಕೊಡಿಯೇರಿ ನಿರ್ಧಾರ ಭಾರಿ ಸವಾಲುಗಳನ್ನು ತಂದೊಡ್ಡಲಿದೆ.
ಎಲ್ಡಿಎಫ್ ಸಂಚಾಲಕ ಎ.ವಿಜಯರಾಘವನ್ ಅವರಿಗೆ ಕೊಡಿಯೇರಿ ನಿಭಾಯಿಸುತ್ತಿರುವ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಇದನ್ನೂ ಓದಿ:ಪ್ರತೀಕಾರ: ಗಡಿಯಲ್ಲಿ ಮತ್ತೆ ಅಟ್ಟಹಾಸ-ಭಾರತೀಯ ಸೇನೆಯ ದಾಳಿಗೆ ಎಂಟು ಪಾಕ್ ಸೈನಿಕರು ಸಾವು
ಬಿನೀಶ್ ಬಂಧನ ಮತ್ತು ಕಳೆದ ವಾರ ಕೇಂದ್ರ ಸಂಸ್ಥೆಗಳಿಂದ ತಿರುವನಂತಪುರದಲ್ಲಿರುವ ನಿವಾಸದ ಮೇಲೆ ದಾಳಿ ನಡೆದ ಬಳಿಕ ಕೊಡಿಯೇರಿ ಅವರನ್ನು ಪಕ್ಷದಲ್ಲಿ ರಕ್ಷಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಕೇರಳ ಪೊಲೀಸರು ಕೇಂದ್ರ ತನಿಖಾ ಸಂಸ್ಥೆಗಳಿಗೆ ಸಹಕರಿಸದೇ ಇದ್ದದ್ದೂ ಪ್ರಶ್ನೆಗೆ ಕಾರಣವಾಗಿತ್ತು. ಬಾಲಕೃಷ್ಣನ್ರ ಹಿರಿಯ ಪುತ್ರ ಬಿನೊಯ್ ಮುಂಬೈನ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೂ ಗುರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ