ಆತ್ಮ ನಿರ್ಭರ ದೀಪಾವಳಿ; ಪರಿಸರ ಸ್ನೇಹಿ ಬೆಳಕಿನ ಹಬ್ಬದತ್ತ ಚಿತ್ತ


Team Udayavani, Nov 14, 2020, 5:43 AM IST

Atnanir

ಸಾಂದರ್ಭಿಕ ಚಿತ್ರ

ಮಣಿಪಾಲ: ಕೇಂದ್ರ ಸರಕಾರದ ಆತ್ಮ ನಿರ್ಭರ ಭಾರತ ಕಲ್ಪನೆಯಲ್ಲಿ ಕರಾವಳಿಯ ಹಲವು ಕಡೆಗಳಲ್ಲಿ ಪರಿಸರ ಸ್ನೇಹಿ ಹಣತೆಗಳು ಸಿದ್ಧವಾಗಿವೆ. ಈ ಬಾರಿ ವಿಶೇಷವಾಗಿ ಸೆಗಣಿಯಿಂದ ತಯಾರಿಸಿದ ಹಣತೆಗಳು ಮಾರುಕಟ್ಟೆಗೆ ಬಂದಿವೆ. ಇನ್ನು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಪಟಾಕಿ ರಹಿತವಾದ ಹಸುರು ದೀಪಾವಳಿ ಆಚರಿಸಲು ಜನರು ಹೆಚ್ಚಿನ ಒಲವು ಹೊಂದಿದ್ದಾರೆ. ಈ ಹಿಂದೆ ಇದ್ದಂತಹ ಚೀನಿ ವಸ್ತುಗಳ ಅಬ್ಬರ ತೀರಾ ಕಡಿಮೆಯಾಗಿದೆ.

ಸೆಗಣಿ ಮಿಶ್ರಿತ ಹಣತೆ
ದೀಪಾವಳಿ ಅಂದರೆ ಬೆಳಕೇ ಪ್ರಾಧಾನ್ಯ. ಇತ್ತೀಚೆಗಿನ ವರ್ಷಗಳಲ್ಲಿ ಜನರು ಮಣ್ಣಿನ ಹಣತೆಗಳನ್ನು ಹೆಚ್ಚಾಗಿ ಬಳಸಲಾರಂಭಿಸಿದ್ದಾರೆ. ಈ ಬಾರಿ ಅದಕ್ಕೆ ಹೊಸದಾಗಿ ಸೇರ್ಪಡೆಯಾಗಿರುವುದು ಸೆಗಣಿಯಿಂದ ನಿರ್ಮಿಸಿದ ಹಣತೆ. ದೇಶದೆಲ್ಲೆಡೆಯಂತೆ ಕರಾವಳಿಯ ಎಲ್ಲ ಕಡೆಯೂ ಈ ಬಾರಿ ಸೆಗಣಿ ಮಿಶ್ರಿತ ಹಣತೆ ಮಾರುಕಟ್ಟೆಗೆ ಬಂದಿದೆ. ವಿವಿಧ ಸಂಘ ಸಂಸ್ಥೆಗಳು, ಶಾಲೆ, ಕಾಲೇಜಿನ ಮಕ್ಕಳು ಹೀಗೆ ಹಲವಾರು ಮಂದಿ ಈ ಬಾರಿ ಸೆಗಣಿಯ ಹಣತೆ ನಿರ್ಮಿಸಿ ಮಾರುಕಟ್ಟೆಗೆ ಒದಗಿಸಿದ್ದಾರೆ. ಶೇ.70ರಷ್ಟು ಗೋಮಯ ಹಾಗೂ ಶೇ.30 ಮಣ್ಣು ಅಥವಾ ಇತರ ಪರಿಸರ ಪೂರಕ ವಸ್ತುಗಳನ್ನು ಬಳಸಿಕೊಂಡು ತಯಾರಿಸಲಾಗುತ್ತದೆ. ಇದು ನೀರಿನಲ್ಲಿ ತೇಲುತ್ತದೆ. ಕೆಲವು ದೀಪಗಳನ್ನು ಒಮ್ಮೆಗೆ ಮಾತ್ರ ಬಳಸಬಹುದಾಗಿದ್ದರೆ, ಇನ್ನು ಕೆಲವನ್ನು 5, 6 ಬಾರಿ ಹಚ್ಚಬಹುದಾಗಿದೆ. 50 ರೂ. ಪ್ಯಾಕೆಟ್‌ನಲ್ಲಿ 10ರಿಂದ 12 ಹಣತೆಗಳಿರುತ್ತವೆ. ದ.ಕ.. ಉಡುಪಿಯ ಹೆಚ್ಚಿನ ಅಂಗಡಿಗಳಲ್ಲಿ ಇದು ಲಭ್ಯವಿದ್ದು, ತಾತ್ಕಾಲಿಕ ಪಟಾಕಿ ಮಾರಾಟ ಅಂಗಡಿಗಳಲ್ಲೂ ಕೆಲವರು ಮಾರಾಟಕ್ಕೆ ಇರಿಸಿದ್ದಾರೆ. ಪರಿಸರ ಪೂರಕ ದೀಪಾವಳಿಯ ನಿಟ್ಟಿನಲ್ಲಿ ಇದೊಂದು ಹೊಸ ಹೆಜ್ಜೆ.

ಅಷ್ಟಪಟ್ಟಿ ಗೂಡುದೀಪ‌
ದೀಪಾವಳಿಯ ಇನ್ನೊಂದು ವಿಶೇಷ ಸ್ಥಳೀಯವಾಗಿ ತಯಾರಿಸಲಾಗಿರುವ ಅಷ್ಟಪಟ್ಟಿ ಗೂಡುದೀಪ. ಚೀನ ವಸ್ತುಗಳಿಗೆ ಬಹಿಷ್ಕಾರ ಹಿನ್ನೆಲೆಯಲ್ಲಿ ಈ ಬಾರಿ ಸಾಂಪ್ರದಾಯಿಕ ಆಕಾಶಬುಟ್ಟಿಗಳಿಗೆ ಬೇಡಿಕೆ ಹೆಚ್ಚಿದೆ. ಕರಾವಳಿಯ ಪ್ರಸಿದ್ಧ ಅಷ್ಟಪಟ್ಟಿ ಗೂಡುದೀಪಗಳಿಗೆ ಉತ್ತಮ ಬೇಡಿಕೆ ಬಂದಿದ್ದು, ಹೆಚ್ಚಿನವರು ಇದನ್ನು ಕೇಳಿ ಪಡೆಯುತ್ತಿದ್ದಾರೆ. ಹಿಂದೊಮ್ಮೆ ಮನೆಯಲ್ಲಿ ಮಾಡಿದ್ದವರು ಈಗ ಮತ್ತೂಮ್ಮೆ ಗೂಡುದೀಪ ತಯಾರಿಸಿ ಹಬ್ಬಕ್ಕೆ ದೇಶೀಯತೆಯ ಮೆರುಗನ್ನು ತಂದಿದ್ದಾರೆ. ಈ ಬಾರಿ ಕೆಲವೇ ಕೆಲವರು ಪ್ಲಾಸ್ಟಿಕ್‌ ಮಾದರಿಯ ವಸ್ತುಗಳಿಂದ ರಚಿಸಿದ ಗೂಡುದೀಪಗಳನ್ನು ಮಾರಾಟಕ್ಕೆ ಇಟ್ಟಿದ್ದರೂ ಅದಕ್ಕೆ ಬೇಡಿಕೆಯೇ ಇರಲಿಲ್ಲ.

ವಾತಾವರಣ ಶುದ್ಧ
ಎಲ್ಲವನ್ನೂ ಪವಿತ್ರ ಮಾಡುವಂತದ್ದು ಗೋಮಯ. ಪಾವಿತ್ರತೆ ಇರುವಲ್ಲಿ ಲಕ್ಷ್ಮೀ ನೆಲೆಸುತ್ತಾಳೆ. ಗೋಮಯದಲ್ಲಿ ಶ್ರೀ ಲಕ್ಷ್ಮಿ ನೆಲೆಸಿದ್ದಾಳೆ ಎನ್ನುವುದು ನಂಬಿಕೆ. ವೈಜ್ಞಾ ನಿಕವಾಗಿಯೂ ಗೋಮಯದಿಂದ ವಾತಾ ವರಣ ಶುದ್ಧವಾಗುತ್ತದೆ. ಋಣಾತ್ಮಕ ಶಕ್ತಿ ಹೊಡೆದೋಡಿಸುತ್ತದೆ. ಅಲ್ಲದೆ ಗೋಮಯ ಬಳಕೆಯಿಂದ ವೈರಸ್‌ ನಿರ್ಮೂಲ ನೆಯಾಗುತ್ತದೆ ಎನ್ನುವುದೂ ಸಾಬೀತಾಗಿದೆ.

ಪಟಾಕಿ ಮಾರಾಟ ಕುಸಿತ
ಕಳೆದ ದೀಪಾವಳಿಯಿಂದ ದೇಶದಲ್ಲಿ ಪಟಾಕಿ ಮಾರಾಟ ಪ್ರಮಾಣದಲ್ಲಿ ಕುಸಿತ ಕಂಡು ಬಂದಿದೆ. ಒಟ್ಟಾರೆ ವ್ಯಾಪಾರದಲ್ಲಿ ಶೇ. 20ರಿಂದ ಶೇ. 30ರಷ್ಟು ಕುಸಿತ ಕಂಡು ಬಂದಿದೆ. ಭಾರೀ ಶಬ್ದವನ್ನುಂಟು ಮಾಡುವ ಪಟಾಕಿಗಳ ಬೇಡಿಕೆ ಶೇ. 50ರಷ್ಟು ಕಡಿಮೆಯಾಗಿತ್ತು. ಮುಂಬಯಿ-ಥಾಣೆಯಂತಹ ಮಹಾನಗರಗಳಲ್ಲಿ ಪ್ರತಿ ವರ್ಷ 300 ಕೋಟಿ. ರೂ.ಗಳ ಪಟಾಕಿಗಳು ಮಾರಾಟವಾಗುತ್ತಿತ್ತು. ಅವುಗಳ ಪ್ರಮಾಣ ಕಳೆದ ವರ್ಷ ಶೇ. 30ರಷ್ಟು ಇಳಿಕೆಯಾಗಿತ್ತು. ಈ ವರ್ಷ ಹಸಿರು ಪಟಾಕಿ ಮತ್ತು ಆತ್ಮನಿರ್ಭರ್‌ ಭಾರತ್‌ನಡಿ ದೀಪಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಇದು ಪಟಾಕಿ ವ್ಯಾಪಾರದ ಮೇಲೆ ನೇರ ಪರಿಣಾಮಬೀರಲಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.