ಯು.ಎ.ಇ.ಯಲ್ಲಿ ಕನ್ನಡ ಡಿಂಡಿಮ; ಅಬುಧಾಬಿ,ಶಾರ್ಜಾ,ದುಬಾೖ ಕನ್ನಡಿಗರಿಂದ ವಿವಿಧ ಕಾರ್ಯಕ್ರಮ

ಆನ್‌ಲೈನ್‌ ಮೀಟ್‌ನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಸಂದೇಶ

Team Udayavani, Nov 14, 2020, 8:13 AM IST

ಯು.ಎ.ಇ.ಯಲ್ಲಿ ಕನ್ನಡ ಡಿಂಡಿಮ; ಅಬುಧಾಬಿ,ಶಾರ್ಜಾ,ದುಬಾೖ ಕನ್ನಡಿಗರಿಂದ ವಿವಿಧ ಕಾರ್ಯಕ್ರಮ

ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಆನ್‌ಲೈನ್‌ ಮೂಲಕ ಶುಭ ಸಂದೇಶ ನೀಡಿದರು.

ದುಬಾೖ: ಅಬುಧಾಬಿ, ಶಾರ್ಜಾ ಕರ್ನಾಟಕ ಸಂಘ, ಕನ್ನಡಿಗರು ದುಬಾೖ ಮತ್ತು ಆಲ್‌ ಐನ್‌ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ನ. 6ರಂದು ಯು.ಎ.ಇ. ಯಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವವನ್ನು ಅಂತರ್ಜಾಲದ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.

ಕಳೆದ ಮೂರ್‍ನಾಲ್ಕು ದಶಕಗಳಿಂದ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದ ಕರ್ನಾಟಕ ರಾಜ್ಯೋತ್ಸವವನ್ನು ಈ ಬಾರಿ ಕೋವಿಡ್‌- 19ರ ಲಾಕ್‌ಡೌನ್‌ನಿಂದಾಗಿ ವರ್ಚುವಲ್‌ ಕಾರ್ಯಕ್ರಮವನ್ನಾಗಿ ಆಚರಿಸಲಾಯಿತು. ಸಂಜೆ 4 ಗಂಟೆಗೆ ಆರಂಭವಾದ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಡಾ| ಹೆಗ್ಗಡೆಯವರು ಉದ್ಘಾಟಿಸಿದರು. ಶಾರ್ಜಾ ಕರ್ನಾಟಕ ಸಂಘದ ವತಿಯಿಂದ ಧ್ವಜಾರೋಹಣ ನೆರವೇರಿತು. ದುಬಾೖ ಕನ್ನಡಿಗರಿಂದ ಕನ್ನಡ ನಾಡ ಗೀತೆ ಪ್ರಸ್ತುತಪಡಿಸಿದರು.

ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಕರ್ನಾಟಕ ಸಂಘ ಶಾರ್ಜಾದ ಅಧ್ಯಕ್ಷರಾದ ಆನಂದ್‌ ಬೈಲೂರ್‌, ಕನ್ನಡಿಗರು ದುಬಾೖ ಅಧ್ಯಕ್ಷೆ ಉಮಾದೇವಿ ವಿದ್ಯಾಧರ್‌ ಮತ್ತು ಅಲ್‌ ಐನ್‌ ಕನ್ನಡ ಸಂಘದ ಅಧ್ಯಕ್ಷರಾದ ವಿಮಲ್‌ ಕುಮಾರ್‌ ಯು.ಎ.ಇ.ಯ ನಾಲ್ಕು ವಿಭಾಗಗಳಲ್ಲಿ ಜ್ಯೋತಿ ಬೆಳಗಿಸಿ ರಾಜ್ಯೋತ್ಸವ ಸಂದೇಶ ನೀಡಿದರು.

ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹೆಜ್ಜೆ ಗುರುತುಗಳನ್ನು ಸಂಕ್ಷಿಪ್ತವಾಗಿ ಸರ್ವೋತ್ತಮ ಶೆಟ್ಟಿ ವಿವರಿಸಿದರು. ಇಂಡಿಯ ಸೋಶಿಯಲ್‌ ಸೆಂಟರ್‌ನ ಅಧ್ಯಕ್ಷ ಯೋಗೀಶ್‌ ಪ್ರಭು, ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಯು.ಎ.ಇ. ಅಧ್ಯಕ್ಷ ಪ್ರವೀಣ್‌ ಕುಮಾರ್‌ ಶೆಟ್ಟಿ ಹಾಗೂ ಕರ್ನಾಟಕ ಸಂಘ ಶಾರ್ಜಾದ ಉಪಾಧ್ಯಕ್ಷ ಎಂ.ಇ. ಮೂಳೂರ್‌ ಮಾತನಾಡಿದರು.

ಅನಂತರ ಪ್ರಸಾರವಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಲ್ಕು ಸಂಘಟನೆಗಳ ವತಿಯಿಂದ ಸ್ವಾಗತ ನೃತ್ಯ, ಮಕ್ಕಳಿಂದ ಸಮೂಹ ಜಾನಪದ ಗೀತೆಗಾಯನ, ನೃತ್ಯ ಪ್ರದರ್ಶನ, ಹರೀಶ್‌ ಶೇರಿಗಾರ್‌ ಮತ್ತು ಅಕ್ಷತಾ ಅವರಿಂದ ಕನ್ನಡ ಯುಗಳ ಗೀತೆ ಪ್ರಸ್ತುತಗೊಂಡವು. ಪುಟ್ಟ ಮಕ್ಕಳೂ ಸಮೂಹ ನೃತ್ಯ ಪ್ರದರ್ಶನ ನೀಡಿದರು.

ಆರತಿ ಅಡಿಗ ಸ್ವಾಗತಿಸಿದರು. ಮನೋಹರ್‌ ತೋನ್ಸೆ ವಂದಿಸಿದರು. ನೇರ ಪ್ರಸಾರದ ತಾಂತ್ರಿಕ ವರ್ಗದಲ್ಲಿ ಆರತಿ ಅಡಿಗ ನಿರೂಪಕಿಯಾಗಿ, ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ. ಗಣೇಶ್‌ ರೈ ಭಿತ್ತಿ ಚಿತ್ರ ವಿನ್ಯಾಸ ಮತ್ತು ಸಂಕಲನ, ವಿಕಾಸ್‌ ಶೆಟ್ಟಿ ನೇರ ಪ್ರಸಾರ ಮತ್ತು ದೀಪಕ್‌ ಸೋಮಶೇಖರ್‌ ಸಂಕಲನ ಮತ್ತು ನೇರ ಪ್ರಸಾರದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

ಯು.ಎ.ಇ. ಯಿಂದ ಅಯೋಜಿಸಲಾದ ಕಾರ್ಯ ಕ್ರಮವನ್ನು ಲಂಡನ್‌ ಹಾಗೂ ಭಾರತದ ಕೆಲವು ದೃಶ್ಯ ಮಾಧ್ಯಮಗಳು ಯುಟ್ಯೂಬ್‌, ಫೇಸ್‌ಬುಕ್‌ ಸಾಮಾಜಿಕ ಜಾಲತಾಣಗಳ ಮೂಲಕ ನೇರ ಪ್ರಸಾರ ಮಾಡಿದ್ದರಿಂದ ವಿಶ್ವಾದ್ಯಂತ ಕನ್ನಡಿಗರು ಮನೆಮಂದಿಯೊಂದಿಗೆ ವೀಕ್ಷಿಸುವಂತಾಯಿತು. ವಿದೇಶಿ ನೆಲದಲ್ಲಿ ಪ್ರಥಮ ಬಾರಿಗೆ ವರ್ಚುವಲ್‌ ಮೂಲಕ ಪ್ರಸಾರವಾದ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

 

ಟಾಪ್ ನ್ಯೂಸ್

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.