ಬಹು ವಾರ್ಷಿಕ ದ್ವಿದಳ ಮೇವು ಬೆಳೆಯಿರಿ: ಡಾ| ಅಶೋಕ


Team Udayavani, Nov 14, 2020, 4:05 PM IST

ಬಹು ವಾರ್ಷಿಕ ದ್ವಿದಳ ಮೇವು ಬೆಳೆಯಿರಿ: ಡಾ| ಅಶೋಕ

ರಾಣೆಬೆನ್ನೂರು: ಬಹು ವಾರ್ಷಿಕ ಏಕದಳ ಮತ್ತು ಬಹು ವಾರ್ಷಿಕ ದ್ವಿದಳ ಮೇವು ಬೆಳೆಯುವುದರಿಂದ ಹೈನುಗಾರಿಕೆ ರೈತರಿಗೆ ಪದೇ ಪದೆ ಭೂಮಿ ಸಿದ್ಧತೆ ಮತ್ತು ಬೇಸಾಯದ ಕ್ರಮಗಳನ್ನು ಮಾಡುವುದು ತಪ್ಪುತ್ತದೆ. ಈ ಸುಧಾರಿತ ತಳಿಯ ಮೇವನ್ನು ಜಾನುವಾರುಗಳಿಗೆ ನೀಡುವುದರಿಂದ ಹಾಲಿನ ಉತ್ಪಾದನೆ ಹೆಚ್ಚಾಗುತ್ತದೆ ಎಂದು ಹನುಮನಮಟ್ಟಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ| ಅಶೋಕ ಪಿ. ಹೇಳಿದರು.

ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಚೌಡಯ್ಯದಾನಪುರ ಗ್ರಾಮದ ಪ್ರಗತಿಪರ ರೈತ ಬಸಯ್ಯ ಪೂಜಾರ ಅವರ ಕ್ಷೇತ್ರಗಳಲ್ಲಿ ಗುರುವಾರ ಜರುಗಿದ ಸುಧಾರಿತ ಮೇವಿನ ತಳಿಗಳ ಪ್ರಾತ್ಯಕ್ಷಿಕೆಯ ಕ್ಷೇತ್ರೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಧಾನ ಮಂತ್ರಿಗಳ ಆಶಯದಂತೆ ರೈತರ ಆದಾಯವನ್ನು ದ್ವಿಗುಣಗೊಳಿಸುವಲ್ಲಿ ಹೈನುಗಾರಿಕೆ ಮಹತ್ವದ ಪಾತ್ರವಿದೆ. ವಿವಿಧ ರೀತಿಯ ಉತ್ತಮ ಗುಣಮಟ್ಟದ ಮೇವಿನ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಖರ್ಚು ಕಡಿಮೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಬಹುದೆಂದು ರೈತರಿಗೆ ಸಲಹೆ ನೀಡಿದರು.

ಕೇಂದ್ರದ ಪಶು ವಿಜ್ಞಾನಿಯಾದ ಡಾ. ಮಹೇಶ ಕಡಗಿ ಮಾತನಾಡಿ, ಏಕದಳ ಮತ್ತು ದ್ವಿದಳ ಮೇವುಗಳನ್ನು ಜಾನುವಾರುಗಳಿಗೆ ಶೇ.75 ಮತ್ತು ಶೇ.25 ರಷ್ಟು ನೀಡುವುದರಿಂದ ಅವುಗಳ ಆರೋಗ್ಯ ಸುಧಾರಿಸುವುದರೊಂದಿಗೆ ಹಾಲಿನ ಉತ್ಪಾದನೆ ಮತ್ತು ಗುಣಮಟ್ಟ ಹೆಚ್ಚಾಗುತ್ತದೆ. ಬಹು ಕಟಾವಿನ ಮೇವಿನ ಜೋಳ(ಸಿ.ಒಎಫ್‌.ಎಸ್‌-31) ಇದು ಒಂದು ಮಳೆಯಾಶ್ರಿತ ಮೇವಿನ ಬೆಳೆಯಾಗಿದ್ದು, ಸುಮಾರು 4 ರಿಂದ 6 ವರ್ಷದ ವರೆಗೆ ಹಸಿರು ಮೇವಿನ ಇಳುವರಿ ಸುಮಾರು 110 ರಿಂದ 120 ಟನ್‌ ಪ್ರತಿ ಎಕರೆಗೆ ಪ್ರತಿ ವರ್ಷಕ್ಕೆ ನೀಡಬಲ್ಲದು. ಬೇಲಿ ಮೆಂತೆ ಇದು ದ್ವಿದಳ ಬಹುವಾರ್ಷಿಕ ಬೆಳೆಯಾಗಿದ್ದು, ವರ್ಷಕ್ಕೆ 60 ರಿಂದ 70 ಟನ್‌ ವರೆಗೆ ಇಳುವರಿ ನೀಡಬಲ್ಲದು ಎಂದು ಹೇಳಿದರು.

ರೈತರು ಮೇವಿನ ಬೆಳೆಗಳಿಂದ ಉತ್ತಮವಾದ ಬೀಜದ ಉತ್ಪಾದನೆಯನ್ನು ಮಾಡಿ ಇತರ ರೈತರಿಗೆ ನೀಡಬಹುದು. ಈ ಮೇವಿನ ಬೆಳೆಗಳ ಜೊತೆಗೆ ಮೇವಿನ ಚೊಗಚೆ ಮತ್ತು ನುಗ್ಗೆ ಮರಗಳನ್ನು ತಮ್ಮ ಹೊಲಗಳ ಬದುವಿನಲ್ಲಿ ಹಚ್ಚುವುದರಿಂದ ಉತ್ತಮವಾದ ಸಸಾರಜನಕಯುಕ್ತ ಮೇವನ್ನು ಪಡೆಯಬಹುದಾಗಿದೆ ಎಂದು ವಿವರಿಸಿದರು.

ಕೇಂದ್ರದ ಕೀಟ ವಿಜ್ಞಾನಿ ಡಾ.ಕೆ.ಪಿ.ಗುಂಡಣ್ಣವರ ಮಾತನಾಡಿ, ಮೇವಿನ ಬೆಳೆಗಳಲ್ಲಿ ವಿವಿಧ ಸಸ್ಯ ಸಂರಕ್ಷಣಾ ವಿಧಾನಗಳನ್ನು ವಿವರಿಸುತ್ತಾ, ಸಿ.ಒಎಫ್‌.ಎಸ್‌ -31 ಮೇವಿನ ಬೆಳೆಯಲ್ಲಿ ಸಾಮಾನ್ಯವಾಗಿ ಈ ಸಮಯದಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗವನ್ನು ಹೆಕ್ಸಾಕ್ವಿನಾಜೋಲ್‌ಔಷಧವನ್ನು 1 ಮಿ. ಲೀ ಪ್ರತಿ ಲೀಟರ್‌ ನೀರಿಗೆ ಬೆರೆಸಿ ಮೇವು ಕಟಾವು ಆದ ನಂತರ ಸಿಂಪಡಿಸಬೇಕು. ಸಿಂಪರಣೆ ನಂತರ ಸುಮಾರು 20 ದಿನಗಳ ವರೆಗೆ ಮೇವನ್ನು ಜಾನುವಾರುಗಳಿಗೆ ತಿನ್ನಿಸಬಾರದು ಎಂದು ಸಲಹೆ ನೀಡಿದರು.

ಪ್ರಗತಿ ಪರ ರೈತ ಬಸಯ್ಯ ಪೂಜಾರ ಮಾತನಾಡಿ, ಈ ಸುಧಾರಿತ ಮೇವಿನ ತಳಿಗಳನ್ನು ಬಳಸುವುದರಿಂದ ವರ್ಷವಿಡಿ ಹಸಿರು ಮೇವನ್ನು ಪಡೆಯುವುದಲ್ಲದೇ ಹಸಿರು ಮೇವಿನ ಇಳುವರಿ ತುಂಬಾ ಹೆಚ್ಚಾಗಿ ಬರುತ್ತಿದೆ. ಮತ್ತು ಹಾಲಿನ ಇಳುವರಿ ಮತ್ತು ಗುಣಮಟ್ಟ ಹೆಚ್ಚಾಗಿರುವುದಲ್ಲದೆ ಜಾನುವಾರುಗಳ ಆರೋಗ್ಯದಲ್ಲಿ ತುಂಬಾ ಸುಧಾರಣೆಯಾಗಿದೆ ಎಂದರು.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.