ನಮ್ಮ ಬಳಿ ಹಣವಿಲ್ಲ, ಹೀಗಾಗಿ ನೌಕರರಿಗೆ ಸಂಬಳ ಕೊಡಲಾಗುತ್ತಿಲ್ಲ: ಸಾರಿಗೆ ಸಚಿವ ಸವದಿ
Team Udayavani, Nov 14, 2020, 4:35 PM IST
ಬೆಳಗಾವಿ: ಕೋವಿಡ್ ಕಾರಣದಿಂದ ಬಸ್ ಸಂಚಾರಕ್ಕೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ನಮಗೆ ಖರ್ಚು ಹೆಚ್ಚಾಗುತ್ತಿದೆ. ಹೀಗಾಗಿ ನೌಕರರಿಗೆ ಸಂಬಳ ಕೊಡಲು ನಮ್ಮ ಬಳಿ ದುಡ್ಡಿಲ್ಲ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ 1 ಲಕ್ಷ 30 ಸಾವಿರ ಮಂದಿ ನೌಕರರಿದ್ದಾರೆ. ಅವರಿಗೆ ಸಂಬಳ ನೀಡಲು 325 ಕೋಟಿ ರೂ. ಬೇಕಾಗುತ್ತದೆ. ಲಾಕ್ ಡೌನ್ ನಂತರ ಮೊದಲ ಎರಡು ತಿಂಗಳು ಸರ್ಕಾರದಿಂದ ಸಂಬಳ ನೀಡಿದ್ದೇವೆ. ಆದರೆ ಬಸ್ನಲ್ಲಿ ಯಾರು ಜನ ಬರುತ್ತಿಲ್ಲ. ಹೀಗಾಗಿ ಆದಾಯ ಬರೀ ಡೀಸೆಲ್ಗೆ ಸಾಕಾಗುತ್ತಿದೆ ಎಂದರು.
ಇದನ್ನೂ ಓದಿ:ಗಂಡು ಮಗುವಿಗಾಗಿ ಮಗಳನ್ನೇ ಬಲಿಕೊಟ್ಟ ತಂದೆ! ಮಾಂತ್ರಿಕನ ಬಂಧನಕ್ಕೆ ಶೋಧ
ಸಂಬಳಕ್ಕಾಗಿ ಮೂರು ತಿಂಗಳಿಂದ ಎರಡು ಬಾರಿ ಪ್ರಸ್ತಾವನೆ ಕಳುಹಿಸಿದ್ದೆವು. ಅದರಲ್ಲಿ ಎರಡು ಬಾರಿ ನಾವು ಕಳುಹಿಸಿದ ಪ್ರಸ್ತಾವನೆ ವಾಪಸ್ಸು ಬಂದಿದೆ. ಮತ್ತೆ ಈಗ ಪ್ರಸ್ತಾವನೆ ಕಳುಹಿಸಿದ್ದೇವೆ. ಶೇಕಡಾ 70ರಷ್ಟಾದರೂ ಸರ್ಕಾರ ಹಣ ಕೊಟ್ಟರೆ ಉಳಿದ ಹಣವನ್ನು ಸಾಲ ಪಡೆದುಕೊಂಡಾದರೂ ಸಂಬಳ ನೀಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ