ಮತ ಕ್ರೋಢೀಕರಣಕ್ಕೆ ಬಿಜೆಪಿ ತಾಲೀಮು ಶುರು

ಪ್ರಬಲ ಸಮುದಾಯಗಳ ಓಲೈಕೆಗೆ ವಿಜಯೇಂದ್ರ ಅಸ್ತ್ರ ,ಕಾಂಗ್ರೆಸ್‌-ಜೆಡಿಎಸ್‌ನಲ್ಲಿ ತಳಮಳ

Team Udayavani, Nov 14, 2020, 5:24 PM IST

ಮತ ಕ್ರೋಢೀಕರಣಕ್ಕೆ  ಬಿಜೆಪಿ ತಾಲೀಮು ಶುರು

ಬೀದರ: ಜನತಾ ಪರಿವಾರ ಮತ್ತು ಕಾಂಗ್ರೆಸ್‌ ಪಾರುಪತ್ಯ ಮೆರೆದಿರುವ ಬಸವಕಲ್ಯಾಣ ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಜೆಪಿ ಪಡೆ ಸಜ್ಜಾಗಿದೆ. ಚುನಾವಣಾ ಅಖಾಡಕ್ಕಿಳಿದಿರುವ ಸಿಎಂ ಪುತ್ರ, ಬಿಜೆಪಿಯ ಟ್ರಬಲ್‌ ಶೂಟರ್‌ ಬಿ.ವೈ. ವಿಜಯೇಂದ್ರ ಮೊದಲ ತಾಲೀಮಿನಲ್ಲೇ ಪ್ರಬಲ ಸಮುದಾಯಗಳ ಓಲೈಕೆಗೆ ಅಸ್ತ್ರ ಪ್ರಯೋಗಿಸಿದ್ದಾರೆ. ಇದು ಕೈ, ದಳ ಪಡೆಯಲ್ಲಿ ತಳಮಳ ಮೂಡಿಸಿದೆ.

ಶಿರಾ ಮತ್ತು ಆರ್‌.ಆರ್‌. ನಗರ ಉಪ ಚುನಾವಣೆಗೆಲುವಿನ ಹುಮ್ಮಸ್ಸಿನಲ್ಲಿರುವ ಬಿಜೆಪಿ ಚಿತ್ತ ಈಗ ಬಸವಣ್ಣನ ಕರ್ಮಭೂಮಿಯತ್ತ ನೆಟ್ಟಿದೆ. ಕಾಂಗ್ರೆಸ್‌ನ ಶಾಸಕ ಬಿ. ನಾರಾಯಣರಾವ್‌ ನಿಧನ ಬಳಿಕ ತೆರವಾದ ಕ್ಷೇತ್ರಕ್ಕೆ ಶೀಘ್ರ ಉಪ ಚುನಾವಣೆ ನಡೆಯಲಿದ್ದು,ಕೆಆರ್‌ ಪೇಟೆ ಹಾಗೂ ಶಿರಾ ಕ್ಷೇತ್ರದಲ್ಲಿ ಉಸ್ತುವಾರಿ ಹೊತ್ತು ಗೆಲುವಿನ ದಡ ಮುಟ್ಟಿಸಿರುವ ವಿಜಯೇಂದ್ರ ಬಸವಕಲ್ಯಾಣ ಕ್ಷೇತ್ರವನ್ನು ಶತಾಯಗತಾಯ ಬಿಜೆಪಿ ಮಡಿಲಿಗೆ ಹಾಕಿ ಹ್ಯಾಟ್ರಿಕ್‌ ಗೆಲುವಿನ ದಾಖಲೆ ನಿರ್ಮಿಸಲು ತಂತ್ರಗಾರಿಕೆ ಹೆಣೆದಿದ್ದಾರೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಲಿಂಗಾಯತ, ಮರಾಠಾ ಜತೆಗೆ ಮುಸ್ಲಿಂ ಪ್ರಬಲ ಸಮುದಾಯಗಳಾಗಿವೆ. ಸಾಮಾನ್ಯವಾಗಿ ಬಿಜೆಪಿ ಲಿಂಗಾಯತ, ಮರಾಠಾ ಸೇರಿ ಮೇಲ್ವರ್ಗದ ಮತ ನೆಚ್ಚಿಕೊಂಡಿದೆ. ಬೀದರ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ತವರು ಜಿಲ್ಲೆ, ಜತೆಗೆ ಜನ ನಾಯಕರು ಎನಿಸಿಕೊಂಡಿದ್ದ ದಿ. ನಾರಾಯಣರಾವರ ವರ್ಚಸ್ಸಿನಿಂದ ಮತ ವಿಭಜನೆ ಸಾಧ್ಯತೆ ಹೆಚ್ಚು.ಹಾಗಾಗಿ ವಿಜಯೇಂದ್ರ ಮೊದಲ ಹಂತದಲ್ಲೇ ಬಿಜೆಪಿ ಪರ ಮತಗಳ ಕ್ರೂಢೀಕರಣಕ್ಕೆ ಜಾತಿ ಓಲೈಕೆ ಆರಂಭಿಸಿದ್ದಾರೆ.

ಮುಖ್ಯವಾಗಿ ಮರಾಠಾ ಸಮುದಾಯದತ್ತ ಚಿತ್ತ ಹರಿಸಿರುವ ವಿಜಯೇಂದ್ರ ಕಲ್ಯಾಣದಲ್ಲಿ ಜರುಗಿದ ಮರಾಠಾ ಬೃಹತ್‌ ಸಭೆಯಲ್ಲಿ ಭಾಗವಹಿಸಿ ಸಮಾಜ ಬಾಂಧವರೊಂದಿಗೆ ಸಮಾಲೋಚನೆ ನಡೆಸಿದ್ದಾರಲ್ಲದೇ ಮರಾಠಾ ಅಭಿವೃದ್ಧಿ ಮಂಡಳಿ ಸ್ಥಾಪನೆ ಈಡೇರುವ ಆಶ್ವಾಸನೆ ನೀಡಿದ್ದಾರೆ. ಅಷ್ಟೇ ಅಲ್ಲ ಸಮಾಜವನ್ನು3ಬಿ ಯಿಂದ 2ಎಗೆ ಸೇರಿಸುವ ಕುರಿತು ಸಿಎಂ ಜತೆ ಚರ್ಚಿಸುವುದಾಗಿ ವಿಶ್ವಾಸ ಮೂಡಿಸಿದ್ದಾರೆ.

ಇನ್ನೂ ಉಪ ಚುನಾವಣೆ ಘೋಷಣೆಗೂ ಮುನ್ನ 500 ಕೋಟಿ ರೂ. ವೆಚ್ಚದ ನೂತನ ಅನುಭವ ಮಂಟಪಕ್ಕೆ ಅಡಿಗಲ್ಲು ನೆರವೇರಿಸಿ ಬಸವ ಭಕ್ತರ ಬಹು ದಿನಗಳ ಕನಸು ನನಸಾಗಿಸುವ ಚಿಂತನೆಬಿಜೆಪಿಯದ್ದು. ಹಾಗಾಗಿ ವಿಜಯೇಂದ್ರ ತಮ್ಮಪ್ರವಾಸದ ವೇಳೆ ಮೊದಲಿಗೆ ಅನುಭವ ಮಂಟಪಕ್ಕೆ ಭೇಟಿ ನೀಡಿ ಮಠಾಧೀಶರೊಂದಿಗೆ ಚರ್ಚೆ ಮಾಡಿ, ಮಹತ್ವದ ಯೋಜನೆಗೆ ಶೀಘ್ರ ಚಾಲನೆ ದೊರೆಯಲಿದೆಎಂದಿದ್ದಾರೆ. ಆ ಮೂಲಕ ಲಿಂಗಾಯತರ ಒಲವು ಪಕ್ಷದ ಪರ ಮತ್ತಷ್ಟು ಗಟ್ಟಿಯಾಗಿಸಲು ಲೆಕ್ಕಾಚಾರ ಹೊಂದಿದ್ದಾರೆ. ಕಾಂಗ್ರೆಸ್‌ ಸಹ ಮತ್ತೂಮ್ಮೆ ಕ್ಷೇತ್ರವನ್ನು “ಕೈ’ ವಶದಲ್ಲಿ ಇಟ್ಟಿಕೊಳ್ಳಲು ಸಜ್ಜಾಗುತ್ತಿದ್ದರೆ, ಜೆಡಿಎಸ್‌ ಸಹ ಪ್ರಬಲ ಪೈಪೋಟಿ ಕೊಡಲು ಚಿಂತನೆ ನಡೆಸಿದೆ.

ಆದರೆ, ಚುನಾವಣೆಗೆ ಮುಹೂರ್ತ ನಿಗದಿಗೂ ಮುನ್ನವೇ ರಾಜಕೀಯ ತಂತ್ರಗಾರಿಕೆ ಮೆರೆಯುತ್ತಿರುವ ವಿಜಯೇಂದ್ರ ಅಖಾಡಕ್ಕೆ ಧುಮುಕಿರುವುದು ಎರಡು ಪಕ್ಷಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

 

-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.