ಕಾಂಗ್ರೆಸ್, ಭಾರತ ಸೇವಾದಳ: ನೆಹರೂ ಜನ್ಮದಿನಾಚರಣೆ
Team Udayavani, Nov 15, 2020, 1:19 PM IST
ಮಹಾನಗರ, ನ. 14: ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನಾಚರಣೆ ಶನಿವಾರ ನಗರದ ನೆಹರೂ ಮೈದಾನದಲ್ಲಿ ಜರಗಿತು. ಮೈದಾನದಲ್ಲಿರುವ ನೆಹರೂ ಅವರ ಪ್ರತಿಮೆಗೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಲಾಯಿತು.
ಮಾಜಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಮೊದಿನ್ ಬಾವಾ, ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಮೇಯರ್ಗಳಾದ ಶಶಿಧರ ಹೆಗ್ಡೆ, ಹರಿನಾಥ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಲ್ಯಾನ್ಸ್ಲಾಟ್ ಪಿಂಟೋ, ಸುರೇಶ್ ಶೆಟ್ಟಿ , ಟಿ.ಕೆ. ಸುಧೀರ್, ಸಂತೋಷ್ ಕುಮಾರ್ ಶೆಟ್ಟಿ, ಸದಾಶಿವ ಉಳ್ಳಾಲ, ವಿಶ್ವಾಸ್ದಾಸ್, ಅಬ್ದುಲ್ ಸಲೀಂ, ನವೀನ್ ಡಿ’ಸೋಜಾ, ಅಬ್ದುಲ್ ಲತೀಫ್, ಶಂಸುದ್ದೀನ್, ಪ್ರಕಾಶ್ ಸಾಲ್ಯಾನ್, ಕೋಡಿ ಜಾಲ್ ಇಬ್ರಾಹಿಂ, ಅಬ್ದುಲ್ ರವೂ ಫ್ ಉಪಸ್ಥಿತರಿದ್ದರು.
ಭಾರತ ಸೇವಾದಳ :
ಭಾರತ ಸೇವಾದಳದ ದ.ಕ. ಜಿಲ್ಲಾ ಘಟಕದ ವತಿಯಿಂದ ಶನಿವಾರ ಪಾಂಡೇಶ್ವರದಲ್ಲಿರುವ ನೆಹರೂ ಪ್ರತಿಮೆಗೆ ಹೂ ಹಾರ ಮತ್ತು ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಪ್ರಧಾನಿ ಪಂಡಿತ್ ಜವಾ ಹರ ಲಾಲ್ ನೆಹರೂ ಅವರ ಜನ್ಮದಿನವನ್ನು ಆಚರಿಸಲಾಯಿತು.
ಜಿಲ್ಲಾ ಭಾರತ ಸೇವಾದಳದ ಅಧ್ಯಕ್ಷ ಬಶೀರ್ ಬೈಕಂಪಾಡಿ ಮಾತನಾಡಿ, ನೆಹರೂ ಅವರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದವರು. ಪಂಚವಾರ್ಷಿಕ ಯೋಜನೆಯನ್ನು ರೂಪಿಸಿ, ಅನೇಕ ಕೈಗಾರಿಕೆ ಮತ್ತು ಉದ್ಯಮಗಳನ್ನು ದೇಶಾ ದ್ಯಂತ ಸ್ಥಾಪಿಸಿ ನಿರುದ್ಯೋಗ ಸಮಸ್ಯೆಗೆ ಸ್ಪಂದಿಸಿದ್ದರು. ನೆಹರೂ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿ¤ದೆ ಎಂದರು. ಸೇವಾದಳ ತಾಲೂಕು ಅಧ್ಯಕ್ಷ ಪ್ರಭಾಕರ್ ಶ್ರೀಯಾನ್, ಎ. ಸುರೇಶ್ ಶೆಟ್ಟಿ, ಉದಯ್ ಕುಂದರ್, ಕೃತಿನ್ ಕುಮಾರ್, ಶೋಭಾ ಕೇಶವ, ಪಾವನಾ, ಅರುಣಾ, ಸುಮಾ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಟಿ.ಕೆ. ಸುಧೀರ್ ಸ್ವಾಗತಿಸಿ, ಮಂಜೇಗೌಡ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ