“ಎಪಿಎಂಸಿ ಪರ್ಯಾಯ ಬಳಕೆಗೆ ಅಗತ್ಯವಾದರೆ ಕಾಯ್ದೆ ತಿದ್ದುಪಡಿ’


Team Udayavani, Nov 15, 2020, 9:22 PM IST

APMC

ಬೈಕಂಪಾಡಿಯ ಎಪಿಎಂಸಿ ಯಾರ್ಡನ್ನು ಸಚಿವ ಸೋಮಶೇಖರ್‌ ಪರಿಶೀಲಿಸಿದರು.

ಸುರತ್ಕಲ್‌: ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತಾಗಲು ಅಗತ್ಯಬಿದ್ದರೆ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ಸಿದ್ಧವಿದೆ ಎಂದು ಕೃಷಿ ಮಾರುಕಟ್ಟೆ ಇಲಾಖೆ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

ಬೈಕಂಪಾಡಿ ಎಪಿಎಂಸಿ ಯಾರ್ಡ್‌ಗೆ ಭೇಟಿ ನೀಡಿ ಸ್ಥಳೀಯ ಶಾಸಕರು, ಸಮಿ ತಿಯ ಪದಾಧಿ ಕಾರಿಗಳ ಸಭೆ ನಡೆಸಿ ಮಾತ ನಾಡಿದರು. ಕೇಂದ್ರ ಸರಕಾರವು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂಬ ಕಾನೂನು ತಂದ ಬಳಿಕ, ಬಹುತೇಕ ಎಪಿಎಂಸಿಗಳು ಭೀತಿ ಯಲ್ಲಿವೆ. ಆದರೆ ಎಪಿಎಂಸಿ ಯಾರ್ಡ್‌ ಗಳ ಪರ್ಯಾಯ ಬಳಕೆ, ಆರ್ಥಿಕವಾಗಿ ಸಮಿತಿಗಳನ್ನು ಸುದೃಢಗೊಳಿಸಲು ಅಗತ್ಯ ಕ್ರಮವನ್ನು ಶೀಘ್ರ ಕೈಗೊಳ್ಳಲಾಗುವುದು. ಇದರ ಜತೆಗೆ ಎಪಿಎಂಸಿಯ ಅ ಧಿಕಾರವನ್ನು ವಿಕೇಂದ್ರೀಕರಣ ಮಾಡುವ ಬಗ್ಗೆ ಸರಕಾರ ಚಿಂತಿಸಲಿದೆ ಎಂದರು.

ರಾಜ್ಯದ ಎಪಿಎಂಸಿಗಳಲ್ಲಿ ಎಕರೆ ಗಟ್ಟಲೆ ಭೂಮಿಯಿದ್ದು, ಪರ್ಯಾಯ ಬಳಕೆಗೆ ಸರಕಾರದ ಇತರ ಇಲಾಖೆಗಳಿಂದ ಮನವಿ ಗಳು ಬರುತ್ತಿವೆ. ಆದರೆ ಕೃಷಿಕರಿಗಾಗಿಯೇ ಇದು ಉಳಿಯಬೇಕು. ಈ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು, ಅ ಧಿಕಾರಿಗಳು ಆಯಾ ಎಪಿಎಂಸಿ ಬಲವರ್ಧನೆಗೆ ನೀಲಿ ನಕಾಶೆ ಮಾಡಿ ಕಳಿಸಬೇಕು ಎಂದರು.

ಎಪಿಎಂಸಿ ಅಧ್ಯಕ್ಷರ ಮನವಿ
ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಅವರು ಸಚಿವರಿಗೆ ಮನವಿ ಸಲ್ಲಿಸಿ, ಕನಿಷ್ಠ 1 ಕೋಟಿ ರೂ. ಕಾಮಗಾರಿಯನ್ನು ನಡೆಸಲು ಸಮಿತಿ ಮಟ್ಟದಲ್ಲಿ ಅ ಧಿಕಾರ ನೀಡುವುದು, ಆದಾಯ ನಿ ಧಿಯಲ್ಲಿ ಇದೀಗ ನಿಗದಿ ಮಾಡಿದ 34 ಪೈಸೆಗಳನ್ನು ಎಪಿಎಂಸಿಗೆ ನೀಡುವಂತೆ, ಬೈಕಂಪಾಡಿ ಎಪಿಎಂಸಿಯನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸುವ ಭರವಸೆ ನೀಡಿದರು. ಉಪಾಧ್ಯಕ್ಷೆ ರಜನಿ ದುಗ್ಗಣ್ಣ, ಸದಸ್ಯರಾದ ಅಶೋಕ್‌ ಶೆಟ್ಟಿ, ಪ್ರವೀಣ್‌ ಕುಮಾರ್‌, ರುಕ್ಮಯ್ಯ ನಾಯ್ಕ, ವರ್ತಕರ ಪ್ರತಿನಿಧಿ  ರಾಘವ ಶೆಟ್ಟಿ, ಎಂಜಿನಿಯರ್‌ ಗಣೇಶ್‌ ಹೆಗ್ಡೆ, ಕಾರ್ಯದರ್ಶಿ ಎಚ್‌.ಸಿ.ಎಂ. ರಾಣಿ, ವರ್ತಕರ ಸಂಘದ ಅಧ್ಯಕ್ಷ ಭರತ್‌ ರಾಜ್‌ ಕೃಷ್ಣಾಪುರ, ಮನಪಾ ಸದಸ್ಯ ವರುಣ್‌ ಚೌಟ ಮತ್ತಿತರರಿದ್ದರು.

ಕೋಲ್ಡ್‌ ಸ್ಟೋರೇಜ್‌ ಅಗತ್ಯ
ಬೈಕಂಪಾಡಿ ಯಾರ್ಡ್‌ ಸೂಕ್ತ ಸಂಪರ್ಕ ವ್ಯವಸ್ಥೆ ಹೊಂದಿದ್ದು, ಈ ಭಾಗದಲ್ಲಿ ಹಣ್ಣು ಹಂಪಲು ಕೋಲ್ಡ್‌ ಸ್ಟೋರೇಜ್‌ ಅಗತ್ಯವಿದೆ. ಇದರ ಜತೆಗೆ ಈ ಯಾರ್ಡನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿದ್ದು, ಸಚಿವರು ಅನುಮೋದನೆ ನೀಡಲು ಕ್ರಮ ಕೈಗೊಳ್ಳ ಬೇಕು ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಮನವಿ ಮಾಡಿದರು.

80 ಎಕರೆ ಪ್ರದೇಶ ಸದ್ಬಳಕೆಯಾಗಲಿ
ಬೈಕಂಪಾಡಿ ಯಾರ್ಡ್‌ನಲ್ಲಿ ಹಣ್ಣು, ತರಕಾರಿ ಮಾರಲು ಆಸಕ್ತರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಕಾನೂನು ತಿದ್ದು ಪಡಿಯ ಅಗತ್ಯವಿದೆ. 80 ಎಕರೆ ಪ್ರದೇಶ ಸದ್ಬಳಕೆಯಾಗಬೇಕಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ನುಡಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.