ಮನೆಗೆ ಮರಳುವ ಆಸೆಗೆ ಕೊರೊನಾ ತಣ್ಣೀರು! ನಿರಾಶ್ರಿತರ ಕೇಂದ್ರಗಳಲ್ಲಿ ನೂರಾರು ಮಂದಿ ಬಾಕಿ


Team Udayavani, Nov 16, 2020, 10:52 AM IST

ಮನೆಗೆ ಮರಳುವ ಆಸೆಗೆ ಕೊರೊನಾ ತಣ್ಣೀರು! ನಿರಾಶ್ರಿತರ ಕೇಂದ್ರಗಳಲ್ಲಿ ನೂರಾರು ಮಂದಿ ಬಾಕಿ

ಮಂಗಳೂರು: ಹಲವು ವರ್ಷಗಳ ಕಾಲ ಮನೆಯವರಿಂದ ದೂರವಿದ್ದು ದಿಕ್ಕು ದೆಸೆ ಇಲ್ಲದೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಪಡೆದು ಮನೆಗೆ ಮರಳಲು ಅಣಿಯಾಗಿರುವ ನೂರಾರು ಮಂದಿಯ ಆಸೆಗೆ ಕೊರೊನಾ ತಣ್ಣೀರೆರಚಿದೆ.

ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಘೋಷಣೆಯಾದ ಕೂಡಲೇ ಎಲ್ಲ ನಿರಾಶ್ರಿತರ ಕೇಂದ್ರಗಳನ್ನು ಮುಚ್ಚಿ ಕೇಂದ್ರಗಳಿಗೆ ಸೇರ್ಪಡೆ, ಕೇಂದ್ರಗಳಿಂದ ಬಿಡುಗಡೆಯನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಪರಿಣಾಮವಾಗಿ ನೂರಾರು ಮಂದಿ ಇಂತಹ ಕೇಂದ್ರಗಳಲ್ಲೇ ಉಳಿದುಕೊಳ್ಳುವುದು ಅನಿವಾರ್ಯವಾಗಿದೆ.

14 ಕೇಂದ್ರಗಳಲ್ಲಿ ಬಾಕಿ
ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕೇಂದ್ರ ಪರಿಹಾರ ಸಮಿತಿಯ ಆಶ್ರಯದಲ್ಲಿ 14 ನಿರಾಶ್ರಿತರ ಕೇಂದ್ರಗಳಿದ್ದು 2,700ಕ್ಕೂ ಅಧಿಕ ಮಂದಿ ಆಶ್ರಯ ಪಡೆದುಕೊಂಡಿದ್ದಾರೆ. ಅವರಲ್ಲಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡು ಇಲಾಖೆ
ಯಿಂದ ರಕ್ಷಿಸಲ್ಪಟ್ಟು ಅನಂತರ ಮನೆ ವಿಳಾಸ ಪತ್ತೆಯಾಗಿ ಮನೆಗೆ ತೆರಳಲು ಸಿದ್ಧವಾಗಿರುವವರು ಶೇ. 50ಕ್ಕೂ ಅಧಿಕ ಮಂದಿ. ವಿಳಾಸ ಇಲ್ಲದವರ ವಿಳಾಸ ಪತ್ತೆಹಚ್ಚಿ ಮನೆಯವರನ್ನು ಸಂಪರ್ಕಿಸಲಾಗಿದ್ದು ಮನೆಯವರು ಕೂಡ ವರ್ಷಗಟ್ಟಲೆ ತಮ್ಮಿಂದ ದೂರವಾಗಿರುವ ಬಂಧುಗಳನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದಾರೆ. ಅವರಲ್ಲಿ ಹೊರ ರಾಜ್ಯದವರೂ ಇದ್ದಾರೆ. ಆದರೆ ಕೊರೊನಾ ಇದಕ್ಕೆ ತಡೆಯಾಗಿದೆ.

ನ್ಯಾಯಾಲಯ ಅನುಮತಿ
ಎಪ್ರಿಲ್‌ ಅನಂತರ ನಿರಾಶ್ರಿತರ ಕೇಂದ್ರಗಳಿಂದ ಯಾರನ್ನೂ ಮನೆಗೆ ಕಳುಹಿಸಿಲ್ಲ. ಸಾಮಾನ್ಯವಾಗಿ ಒಂದು ವರ್ಷ ಅಥವಾ ಮೂರು ವರ್ಷಗಳ ಅವಧಿಯವರೆಗೆ ಇಂತಹ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಒದಗಿಸಲಾಗುತ್ತದೆ. ಈಗಾಗಲೇ ನಿಗದಿತ ಅವಧಿ ಮುಗಿದವರು ಅನೇಕ ಮಂದಿ ಇದ್ದಾರೆ. ಅಂತಹ ನಿರಾಶ್ರಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕೊರೊನಾ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಅನುಮತಿ ಪಡೆದು ಅವರ ಆಶ್ರಯದ ಅವಧಿ ವಿಸ್ತರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ಬದುಕಿನತ್ತ ಹೆಜ್ಜೆ
ಸಾಮಾನ್ಯವಾಗಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿರುವವರಿಗೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಒದಗಿಸಲಾಗುತ್ತದೆ. ಭಿಕ್ಷಾಟನೆ ನಿಷೇಧ ಕಾಯಿದೆಯಡಿ ಅವರನ್ನು ವಶಕ್ಕೆ ಪಡೆದು ಇಲಾಖೆಯ ಸುಪರ್ದಿಯಲ್ಲಿಡಲಾಗುತ್ತದೆ. ಅವರಿಗೆ ಕೌನ್ಸೆಲಿಂಗ್‌ ಸೇರಿದಂತೆ ಚಿಕಿತ್ಸೆಯನ್ನು ಕೂಡ ನೀಡಲಾಗುತ್ತದೆ. ಅವರ ಮನೆಯ ವಿಳಾಸವಿದ್ದರೆ ಅದನ್ನು ಪತ್ತೆಹಚ್ಚಿ ಮನೆಯವರನ್ನು ಸಂಪರ್ಕಿಸಿ ಮನೆಗೆ ಕಳುಹಿಸಿಕೊಡಲಾಗುತ್ತದೆ. ನಿರಾಶ್ರಿತರ ಕೇಂದ್ರಗಳಿಂದ ತೆರಳಿದವರ ಪೈಕಿ ಭಿಕ್ಷಾಟನೆ ಬಿಟ್ಟು ಹೊಸ ಬದುಕು ಕಟ್ಟಿಕೊಂಡಿರುವವರೇ ಹೆಚ್ಚು ಎನ್ನುತ್ತಾರೆ ನಿರಾಶ್ರಿತ ಕೇಂದ್ರಗಳ ನಿರ್ವಾಹಕರು.

ಸದ್ಯ ಬಿಡುಗಡೆ ಇಲ್ಲ
ನಿರಾಶ್ರಿತರ ಕೇಂದ್ರಗಳಲ್ಲಿ ಇರುವವರ ಆರೋಗ್ಯ ಇತರರಿಗಿಂತ ಸೂಕ್ಷ್ಮ. ಕೇಂದ್ರದ ಒಬ್ಬರಿಗೆ ಸೋಂಕು ಬಂದರೆ ಉಳಿದವರಿಗೆ ಬೇಗನೆ ಹರಡುವ ಸಾಧ್ಯತೆ ಅಧಿಕ. ಕೇಂದ್ರಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಿರುವುದರಿಂದ ಯಾವುದೇ ಕೇಂದ್ರದಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಈಗ ಅವರನ್ನು ಮನೆಗೆ ಕಳುಹಿಸಿದರೆ ಅವರಿಗೆ ಮಾತ್ರವಲ್ಲದೆ ಮನೆಯವರಿಗೂ ಅಪಾಯ. ಹಾಗಾಗಿ ಸದ್ಯಕ್ಕೆ ಬಿಡುಗಡೆ ಇಲ್ಲ.
– ಯು. ಚಂದ್ರ ನಾಯಕ್‌, ಕಾರ್ಯದರ್ಶಿ ಕೇಂದ್ರ ಪರಿಹಾರ ಸಮಿತಿ, ಬೆಂಗಳೂರು

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.