ಬಸವತತ್ವ ಜನಪರ ಚಿಂತನಶೀಲ ತತ್ವ


Team Udayavani, Nov 16, 2020, 6:53 PM IST

ಬಸವತತ್ವ ಜನಪರ ಚಿಂತನಶೀಲ ತತ್ವ

ಬೀದರ: ಬಸವ ತತ್ವ ಯಾವುದೇ ಒಂದು ಜಾತಿ, ಮತ, ಪಂಥ ಅಥವಾ ಒಂದು ಸಮುದಾಯದ ಸೊತ್ತಲ್ಲ, ಅದು ಎಲ್ಲ ಸಮುದಾಯಗಳನ್ನೊಳಗೊಂಡ ಜನಪರವಾದ ಚಿಂತನಶೀಲ ತತ್ವ. ಎಂದು ಬಸವಶ್ರೀ ಪುರಸ್ಕೃತ ಶ್ರೀ ಸಿದ್ದರಾಮ ಶರಣರು ಬೆಲ್ದಾಳ ನುಡಿದರು.

ಜಿಲ್ಲಾ ಮತ್ತು ತಾಲೂಕು ಕಸಾಪದಿಂದ ನಗರದ ಸಿದ್ದರಾಮ ಶರಣರು ಬೆಲ್ದಾಳ ಅವರ ನಿವಾಸದಲ್ಲಿ ನಡೆದ 28ನೇ ಮನೆಯಂಗಳದಲ್ಲಿ ಮಾತು ಸಂವಾದ ಕಾರ್ಯಕ್ರಮದಲ್ಲಿ ತಮ್ಮಜೀವನಾನುಭವಗಳನ್ನು ಹಂಚಿಕೊಂಡ ಅವರು, ಶೋಷಿತ ಸಮುದಾಯದಲ್ಲಿ ಜನಿಸಿ ಬಾಲ್ಯದಲ್ಲಿ ಅಂಬೇಡ್ಕರ್‌ ಅವರು ಅನುಭವಿಸಿದ ಅಸ್ಪೃಶ್ಯತೆ, ಅವಮಾನಗಳನ್ನು ನಾನೂ ಅನುಭವಿಸುವಂತಾಯಿತು. ನಾನು ಓದಿದ್ದು ಕೇವಲ ಮೂರನೆಯ ತರಗತಿವರೆಗೆ ಮಾತ್ರ ಆದರೆ ಛಲದಿಂದ ಅಧ್ಯಾತ್ಮದ ಅಧ್ಯಯನ ಮಾಡಿದೆ. ಅದಕ್ಕೆ ನಮ್ಮ ತಾಯಿ ತಂದೆಯವರುಭಕ್ತಿ ಮಾರ್ಗದಲ್ಲಿರುವುದೆ ಬಹುದೊಡ್ಡ ಪ್ರಭಾವ ಬೀರಿದರೆ, ಮೌಡ್ಯತೆಗಳಿಂದ ಹೊರಬರಲು ವಚನ ಸಾಹಿತ್ಯ ನನಗೆ ಪ್ರೇರಣೆಯಾಯಿತು ಎಂದರು.

ಡಾ. ಕಾಶಿನಾಥ ಚಲುವಾ ಅವರು ನಡೆಸಿಕೊಟ್ಟಸಂವಾದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಬುದ್ದ ನನ್ನ ತಲೆ, ಹೃದಯ ಬಸವಣ್ಣ, ದೇಹವೇ ಅಂಬೇಡ್ಕರ್‌. ಹಾಗಾಗಿ ಈ ಮೂವರುಬೇರೆ ಬೇರೆಯಲ್ಲ. ಈ ಸತ್ಯವನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಇಲ್ಲವಾದಲ್ಲಿಯಾರಿಗೂ ಉಳಿಗಾಲವಿಲ್ಲ. ಎಲ್ಲರೂಮನುವಾದಿಗಳ ಕೈಗೊಂಬೆ ಆಗಬೇಕಾಗುತ್ತದೆಂದು ಎಚ್ಚರಿಸುತ್ತ ಎಲ್ಲ ಸಮುದಾಯವರು ಒಂದಾಗಿ ಸಮಭಾವದಿಂದ ಕೂಡಬೇಕು ಎಂಬುದು ತಮ್ಮ ಬದುಕಿನ ಕೊನೆಯ ಆಸೆ ಎಂದು ವಿವರಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನಶೆಟ್ಟಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ತಮ್ಮ ಮಾತು ಮತ್ತು ಕೃತಿಗಳ ಮೂಲಕ ಜನಸಾಮಾನ್ಯರಿಗೆ ತಲುಪಿಸಿದ ಸರಳ ಸಾತ್ವಿಕ ವ್ಯಕ್ತಿ ಎಂದರೆ ಸಿದ್ದರಾಮ ಶರಣರು ಎಂದು ಬಣ್ಣಿಸಿದರು.

ಕಸಾಪ ತಾಲೂಕಾಧ್ಯಕ್ಷ ಎಂ.ಎಸ್‌ ಮನೋಹರ ಅಧ್ಯಕ್ಷತೆ ವಹಿಸಿ ಮಾತನಾಡಿ, ಧರ್ಮ ಬೋಧಕರು ದಾರಿ ತಪ್ಪಿ ನಡೆಯದಂತೆ ಎಚ್ಚರ ವಹಿಸಿದರೆ ಮಾತ್ರ ಅನುಯಾಯಿಗಳು ಸರಿದಾರಿಯಲ್ಲಿರುತ್ತಾರೆ. ಕೋಮುವಾದ, ಜಾತಿ ಜಗಳ, ತಪ್ಪಿಸಲು ಎಲ್ಲಾ ಧಾರ್ಮಿಕ ಮುಖಂಡರು ಒಂದಾಗಿ ಧರ್ಮಸಮನ್ವಯತೆ ಸಾಧಿಸುವ ಮೂಲಕ ಜಾಗತಿಕ ಶಾಂತಿ, ಸೌಹಾರ್ದತೆ ನೆಲೆಗೊಳಿಸುವುದು ಇಂದಿನ ಅಗತ್ಯವಾಗಿದೆ. ಇದೆ ನಿಜವಾದ ಧರ್ಮ ಬೋಧನೆ ಎಂದು ಅಭಿಪ್ರಾಯಪಟ್ಟರು.

ಶಿವಶಂಕರ ಟೋಕರೆ, ವಿದ್ಯಾವತಿ ಬಲ್ಲೂರ, ರಘುನಾಥ, ಜಗನ್ನಾಥ ಕಮಲಾಪುರೆ, ವೀರಶೆಟ್ಟಿ ಚನಶೆಟ್ಟಿ, ಶಿವಕುಮಾರ ಬೆಲ್ದಾಳ, ಸಿದ್ಧಾರೂಢ ಭಾಲ್ಕೆ ಮೊದಲಾದವರು ಭಾಗವಹಿಸಿದ್ದರು. ರೇವಣಪ್ಪ ಮೂಲಗೆ ಸ್ವಾಗತಿಸಿದರು. ವಿದ್ಯಾವತಿ ಹಿರೇಮಠ ನಿರೂಪಿಸಿ ಡಾ. ಬಸವರಾಜ ಬಲ್ಲೂರ ವಂದಿಸಿದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.