ಬಂಧಿಸಲು ಹೋದ ಪೊಲೀಸರ ಮೇಲೆ ಮಾರಾಕಾಸ್ತ್ರದಿಂದ ದಾಳಿ! ಆರೋಪಿ ಕಾಲಿಗೆ ಗುಂಡೇಟು
Team Udayavani, Nov 18, 2020, 10:49 AM IST
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಸಿಸಿಬಿ ಪೊಲೀಸರಿಂದ ಗುಂಡೇಟು ಬಿದ್ದಿದೆ.
ಈತನ ವಿರುದ್ಧ ಇಪ್ಪತ್ತಮೂರು ಪ್ರಕರಣಗಳು ದಾಖಲಾಗಿದ್ದು ಇದುವರಿಗೂ ಸಿಗದೇ ತಲೆಮರೆಸಿಕೊಂಡಿದ್ದ, ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಪುನೀತ್ ಕುಮಾರ್ ಅವರ ತಂಡ ಆರೋಪಿ ಕೋಣನಕುಂಟೆಯಲ್ಲಿ ಇರುವ ಖಚಿತ ಮಾಹಿತಿಯನ್ನು ಪಡೆದು ತೆರಳುತ್ತಿದ್ದ ವೇಳೆ ಆರೋಪಿ ಬೈಕಿನಲ್ಲಿ ಪರಾರಿಯಾಗಿದ್ದಾನೆ ಈ ವೇಳೆ ನಾರಾಯಣನಗರ ಬಳಿ ಪೊಲೀಸರು ಅಡ್ಡಗಟ್ಟಿದಾಗ ಆರೋಪಿ ತನ್ನ ಕೈಯಲ್ಲಿದ್ದ ಮಾರಾಕಾಸ್ತ್ರದಿಂದ ಪೊಲೀಸ್ ಪೇದೆ ನಾಗರಾಜ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಪರಿಣಾಮ ನಾಗರಾಜ್ ಅವರ ಕೈಗೆ ಗಾಯವಾಗಿದೆ ಈ ವೇಳೆ ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಕುಮಾರ್ ಅವರು ರೌಡಿ ಶೀಟರ್ ಬೋಂಡ ಮಂಜನ ಕಾಲಿಗೆ ಗುಂಡು ಹರಿಸಿದ್ದಾರೆ.
ಇದನ್ನೂ ಓದಿ:ಹುಣಸೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಚಾಲಕ ಅಪಾಯದಿಂದ ಪಾರು
ಗಾಯಾಳು ಪೊಲೀಸ್ ಮುಖ್ಯಪೇದೆ ನಾಗರಾಜ್ ಹಾಗೂ ಹಲವು ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಬೋಂಡ ಮಂಜನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್