ಆನೆದಂತ ಮಾರಾಟ: ಮೂವರ ಸೆರೆ


Team Udayavani, Nov 18, 2020, 12:16 PM IST

ಆನೆದಂತ ಮಾರಾಟ: ಮೂವರ ಸೆರೆ

ಬೆಂಗಳೂರು: ಆಂಧ್ರಪ್ರದೇಶದ ಚಿತ್ತೂರಿನಿಂದ ಆನೆದಂತ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಹೆಬ್ಟಾಳ ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಮೂಲದ ಲೊಕೇಶ್‌, ಮಂಜುನಾಥ್‌, ಗೋವಿ ಬಂಧಿತರು. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ನಾಲ್ಕು ಆನೆದಂತಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತರಿಗೆ ಆನೆದಂತ ಸರಬರಾಜು ಮಾಡಿದ್ದ ಪ್ರಮುಖ ಆರೋಪಿ ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಡ್ಡದಹಳ್ಳಿ ಮುಖ್ಯರಸ್ತೆ ಬಳಿ ಮೂವರು ಆನೆದಂತ ಮಾರಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಇನ್ಸ್‌ಪೆಕ್ಟರ್‌ ಜೆ ಅಶ್ವತ್ಥ್ ಗೌಡ, ಪಿಎಸ್‌ಐ ಪುಷ್ಪ ಮುಗಳಿ ನೇತೃತ್ವದ ತಂಡ ಮೂವರನ್ನು ವಶಕ್ಕೆ ಪಡೆದು ಅವರ ಬಳಿಯಿದ್ದ ಒಂದು ಆನೆದಂತ ಜಪ್ತಿ ಮಾಡಿಕೊಂಡಿದೆ.ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಇನ್ನೂ ಮೂರು ಆನೆದಂತಗಳನ್ನು ಬಚ್ಚಿಟ್ಟಿರುವುದಾಗಿ ಬಾಯ್ಬಿಟ್ಟಿದ್ದಾರೆ.

ರಿಂಗ್‌ ರಸ್ತೆ ಸಮೀಪದ ಮರಳು ಲಾರಿ ಸ್ಟಾಂಡ್‌ ಬಳಿಯ ಪ್ರದೇಶದಲ್ಲಿ ಬ್ಯಾಗ್‌ವೊಂದರಲ್ಲಿ ಬಚ್ಚಿಟ್ಟಿದ್ದ ಮೂರು ಆನೆದಂತಗಳನ್ನು ತನಿಖಾ ತಂಡ ಜಪ್ತಿ ಮಾಡಿದೆ. ಆರೋಪಿಗಳು ಚಿತ್ತೂರು ಮೂಲದವರಾಗಿದ್ದು ಆನೆದಂತ ಮಾರಾಟ ಮಾಡುವಂತಹ ವೃತ್ತಿ ಮಾಡುವ ಮಾಸ್ಟರ್‌ ಮೈಂಡ್‌  ಪರಿಚಿತನಾಗಿದ್ದ. ಒಂದು ಆನೆದಂತ ಮಾರಾಟ ಮಾಡಿಕೊಂಡು ಬಂದರೆ ಐವತ್ತು ಸಾವಿರ ರೂ. ಕಮಿಷನ್‌ ನೀಡುವುದಾಗಿ ನಂಬಿಸಿದ್ದ. ಹೀಗಾಗಿ, ಇದಕ್ಕೆ ಒಪ್ಪಿದ್ದ ಆರೋಪಿಗಳು ಮಾರಾಟಕ್ಕೆ ಯತ್ನಿಸುತ್ತಿರುವಾಗಲೇ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಗೆ ಆನೆದಂತ ನೀಡಿದ್ದ ಪ್ರಮುಖ ಆರೋಪಿಯ ಸುಳಿವು ಸಿಕ್ಕಿದ್ದು ಆತನ ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರತ್ಯೇಕ ಪ್ರಕರಣ: ಸುಲಿಗೆಕೋರರ ಗ್ಯಾಂಗ್‌ ಸೆರೆ :

ಬೆಂಗಳೂರು: ಕೆಂಪಾಪುರ ಜಂಕ್ಷನ್‌, ಭದ್ರಪ್ಪ ಲೇಔಟ್‌ ಸೇರಿ ಹಲವು ಕಡೆ ಸುಲಿಗೆ ಕೃತ್ಯಗಳನ್ನು ನಡೆಸಿ ಪ್ರಯಾಣಿಕರಿಗೆ ಭೀತಿ ಹುಟ್ಟಿಸಿದ್ದ ಕುಖ್ಯಾತ ಸುಲಿಗೆಕೋರರ 2 ತಂಡಗಳನ್ನು ಬಂಧಿಸುವಲ್ಲಿ ಕೊಡಿಗೇಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಡ್ರಾಪ್‌ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಬಳಿಕ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶೇಕ್‌ ಶಾಹಿದ್‌ ಅಹಮ್ಮದ್‌, ಅತೀಕ್‌ ಬಂಧಿತರು. ಅವರಿಂದ 8.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಎರಡು ಕಾರು, ಒಂದು ಐ ಫೋನ್‌ನನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿಗಳು ಏರ್‌ಪೋರ್ಟ್‌ ರಸ್ತೆಯ ಎಸ್ಟೀಮ್‌ ಮಾಲ್‌ ಬಳಿ ಬೆಳಗಿನ ಜಾವ ಹೈದರಾಬಾದ್‌, ಕರ್ನೂಲ್‌, ಅನಂತಪುರ ಹಾಗೂ ವಿವಿಧೆಡೆಯಿಂದ ನಗರಕ್ಕೆ ಬರುತ್ತಿದ್ದವರನ್ನು ಡ್ರಾಪ್‌ ನೆಪದಲ್ಲಿ ಕಾರಿಗೆ ಹತ್ತಿಸಿಕೊಳ್ಳುತ್ತಿದ್ದರು. ಬಳಿಕ ಅವರಿಗೆ ಚಾಕು ತೋರಿಸಿ ಚಿನ್ನಾಭರಣ, ನಗದು, ಎಟಿಎಂಕಾರ್ಡ್‌ ಕಿತ್ತುಕೊಂಡು ಬಿಟ್ಟು ಕಳುಹಿಸುತ್ತಿದ್ದರು.ಈಸಂಬಂಧದಾಖಲಾದಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಡ್ರಾಪ್‌ ನೆಪದಲ್ಲಿ ಎಸಗಿದ ನಾಲ್ಕು ಸುಲಿಗೆ ಪ್ರಕರಣಗಳನ್ನು ಒಪ್ಪಿಕೊಂಡಿದ್ದಾರೆ.

ಶಾಸ್ತ್ರೀ ಗ್ಯಾಂಗ್‌ ಬಂಧನ!: ಪ್ರತ್ಯೇಕ ಪ್ರಕರಣಗಳಲ್ಲಿ ಸುಲಿಗೆ ಮಾಡುತ್ತಿದ್ದ ಕುಖ್ಯಾತ ಸುಲಿಗೆಕೋರರ ತಂಡ ಶಾಸ್ತ್ರೀಗಾಂಗ್‌ ಅನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರದ ಶ್ರೀಪಾದ ಶಾಸ್ತ್ರೀ, ವಿನ್ಸೆಂಟ್‌ ಬಾಬು, ಆಕಾಶ್‌ ಎನ್‌ ನಾಯ್ಡು ಬಂಧಿತರು. ಆರೋಪಿಗಳ ಬಂಧನದಿಂದ ಒಂದು ಕೊಲೆ ಯತ್ನ ಹಾಗೂ ಒಂದು ಸುಲಿಗೆ ಪ್ರಕರಣ ಪತ್ತೆಯಾಗಿದೆ. ಆರೋಪಿಗಳಿಂದ 1.50 ಲಕ್ಷ ರೂ. ಮೌಲ್ಯದ ಚಿನ್ನದ ಆಭರಣ, ಒಂದು ಮೊಬೈಲ್‌, ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಆರೋಪಿಗಳು ರಾತ್ರಿ ವೇಳೆ ಬೈಕ್‌ಗಳಲ್ಲಿ ಒಂಟಿಯಾಗಿ ಹೋಗು ವವರನ್ನು ಟಾರ್ಗೆಟ್‌ ಮಾಡಿಕೊಂಡು ಅವರನ್ನು ಹಿಂಬಾಲಿಸಿ ಅಡ್ಡಗಟ್ಟಿ ಅವರಿಂದ ಚಿನ್ನಾಭರಣ ಹಾಗೂ ಇನ್ನಿತರೆ ವಸ್ತುಗಳನ್ನು ದೋಚುತ್ತಿದ್ದರು. ವಿನ್ಸೆಂಟ್‌ ಬಾಬು, ಆಕಾಶ್‌ ಈ ಹಿಂದೆಯೂ ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿ ಬಿಡುಗಡೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.