ಏಕೈಕ ಮಹಿಳಾ ಸಚಿವೆಯಾಗಿರುವ ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ: ಸಚಿವೆ ಶಶಿಕಲಾ ಜೊಲ್ಲೆ
Team Udayavani, Nov 18, 2020, 7:25 PM IST
ಹುಬ್ಬಳ್ಳಿ: ‘ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನ್ನ ಹೆಸರು ಕೈಬಿಡಲಾಗುತ್ತದೆ ಎಂಬ ಮಾತುಗಳು ಹರಿದಾಡುತ್ತಿವೆ. ಇದು ಮಾಧ್ಯಮ ಸೃಷ್ಟಿ. ಆದರೂ, ಪಕ್ಷದ ನಿರ್ಧಾರಕ್ಕೆ ನಾನು ಸದಾ ಬದ್ಧವಾಗಿರುತ್ತೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಹುಬ್ಬಳ್ಳಿಯ ಉಣಕಲ್ಲದಲ್ಲಿರುವ ಮನೋವಿಕಲ ಬಾಲಕಿಯರ ಸರಕಾರಿ ಬಾಲ ಮಂದಿರಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕರು ನೀಡಿದ್ದ ಜವಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಇಲಾಖೆಯಲ್ಲಿ ಹಲವು ಬದಲಾವಣೆಗೆ ಶ್ರಮಿಸಿದ್ದೇನೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೈ ಬಿಡುತ್ತಾರೆ ಎನ್ನುವುದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದೆ. ಏಕೈಕ ಮಹಿಳಾ ಸಚಿವೆಯಾಗಿರುವ ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದರು.
ಇದನ್ನೂ ಓದಿ: ಕೋಮು ಸಾಮರಸ್ಯ ಕದಡುತ್ತಿರುವ ಆರೋಪ: ಕಂಗನಾ, ರಂಗೋಲಿಗೆ ಮುಂಬೈ ಪೊಲೀಸರಿಂದ ಮೂರನೇ ಸಮನ್ಸ್
ಮರಾಠ ಅಭಿವೃದ್ಧಿ ಪ್ರಾಧಿಕಾರ ಭಾಷೆಗೆ ಸೀಮಿತಗೊಳಿಸಬಾರದು. ಇದು ಮರಾಠ ಸಮಾಜ ಅಭಿವೃದ್ಧಿಗಾಗಿ. ಸದುದ್ದೇಶದಿಂದ ಈ ಪ್ರಾಧಿಕಾರ ಆರಂಭಿಸಲಾಗಿದೆ. ಇದರಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಕೂಡ ಒಂದಾಗಿದೆ. ಹೆಸರಿನ ಕುರಿತು ಒಂದಿಷ್ಟು ಚರ್ಚೆಗಳು ನಡೆಯುತ್ತಿವೆ ಹೊರತು ನಿಗಮ ಸ್ಥಾಪನೆಗೆ ವಿರೋಧ ವ್ಯಕ್ತವಾಗಿಲ್ಲ. ವೀರಶೈವ ಲಿಂಗಾಯತರಲ್ಲ ಎಲ್ಲಾ ಉಪ ಜಾತಿಗಳನ್ನು ಕಾಣುತ್ತೇವೆ. ಹಿಂದಿನ ಎಲ್ಲಾ ನಿಗಮಗಳು ಇರುವಂತೆ ಈ ನಿಗಮಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ