2-3 ದಿನದಲ್ಲಿ ಪಟ್ಟಿ ಬರಬಹುದು: ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಬಿಎಸ್ ವೈ
Team Udayavani, Nov 19, 2020, 10:43 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟದ ವಿಸ್ತರಣೆಗೆ ಕಸರತ್ತುಗಳು ನಡೆಯುತ್ತಿದೆ. ಈ ಮಧ್ಯೆ ಇನ್ನು ಎರಡು- ಮೂರು ದಿನದಲ್ಲಿ ಸಚಿವರ ಪಟ್ಟಿ ಬರಬಹುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಮಾಹಿತಿಯನ್ನು ನೀಡಿದರು.
ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಅನುಮತಿ ಪಡೆಯುವ ಸಲುವಾಗಿ ಬುಧವಾರ ಬೆಳಗ್ಗೆ ದಿಲ್ಲಿಗೆ ತೆರಳಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಜೆಯೇ ಬೆಂಗಳೂರಿಗೆ ವಾಪಸ್ ಆಗಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸೌಹಾರ್ದಯುತ ಚರ್ಚೆ ನಡೆದಿದೆ. ಸಂಪುಟ ವಿಸ್ತರಣೆಗೆ ಅವಕಾಶ ಕೋರಿದ್ದೇನೆ. ಮುಂದಿನ 2 -3 ದಿನಗಳಲ್ಲಿ ಈ ವಿಚಾರ ಚರ್ಚಿಸಿ, ತಿಳಿಸುವುದಾಗಿ ಬಿಎಸ್ ವೈ ಬುಧವಾರ ಹೇಳಿದ್ದರು.
ಇದನ್ನೂ ಓದಿ:ರಟ್ಟಾಗದ ಸಂಪುಟ ಗುಟ್ಟು; ತರಾತುರಿಯ ದಿಲ್ಲಿ ಪ್ರವಾಸದಿಂದ ಸಿಎಂ ಬಿಎಸ್ವೈ ವಾಪಸ್
ಬಿಎಸ್ ವೈ ತಮ್ಮ ಪಟ್ಟಿಯನ್ನು ದಿಲ್ಲಿ ವರಿಷ್ಠರಿಗೆ ನೀಡಿ ಬಂದಿದ್ದರೂ, ಬಿಜೆಪಿ ಶಾಸಕರ ಲಾಬಿ ಮಾತ್ರ ನಿಂತಿಲ್ಲ. ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಕೆಲ ಶಾಸಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು
Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ