ದೇಶ-ವಿದೇಶಗಳ ವೆಬ್‌ಸೈಟ್ ಗಳನ್ನು ಹ್ಯಾಕ್ ಮಾಡುತ್ತಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಬಂಧನ


Team Udayavani, Nov 19, 2020, 10:40 AM IST

ದೇಶ-ವಿದೇಶಗಳ ವೆಬ್‌ಸೈಟ್ ಗಳನ್ನು ಹ್ಯಾಕ್ ಮಾಡುತ್ತಿದ್ದ ಅಂತಾರಾಷ್ಟ್ರೀಯ ಹ್ಯಾಕರ್‌ ಬಂಧನ

ಬೆಂಗಳೂರು: ರಾಜ್ಯ ಸರ್ಕಾರದ ಇ-ಪ್ರೊಕ್ಯುರ್‌ವೆುಂಟ್‌ ವೆಬ್‌ ಸೈಟ್‌ ಸೇರಿ ದೇಶ-ವಿದೇಶಗಳ ವೆಬ್‌ಸೈಟ್‌ ಹಾಗೂ ಪೋಕರ್‌ ಆ್ಯಪ್‌, ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡಿ ಅಕ್ರಮವಾಗಿ ಹಣ ಗಳಿಸುತ್ತಿದ್ದ ಬೆಂಗಳೂರು ಮೂಲದ ಅಂತಾ ರಾಷ್ಟ್ರೀಯ ಹ್ಯಾಕರ್‌ವೊಬ್ಬ ಬೆಂಗಳೂರು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲವಶಕ್ಕೆ ಪಡೆಯಲಾಗಿದೆ. ಜಯನಗರ ನಿವಾಸಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ (26) ಬಂಧಿತ. ಬಹಳ ವರ್ಷಗಳಿಂದ ಹ್ಯಾಕಿಂಗ್‌ ಮಾಡು ವುದನ್ನೇ ವೃತ್ತಿಯನ್ನಾಗಿಸಿ ಕೊಂಡು ದಂಧೆ ನಡೆಸುತ್ತಿದ್ದಾನೆ.
ಅಂತಾರಾಷ್ಟ್ರೀಯ ಡ್ರಗ್ಸ್‌ ದಂಧೆಯಲ್ಲೂಆರೋಪಿ ತೊಡಗಿದ್ದಾನೆ . ಅಲ್ಲದೆ, ಕೆಲ ದಿನಗಳ ಹಿಂದೆ ದಕ್ಷಿಣ ವಿಭಾಗ ಮತ್ತು ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಗಾದ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್‌ ಲಮಾಣಿ ಮತ್ತು ಇತರೆ ಎಂಟು ಮಂದಿಯ ಆರೋಪಿಗಳ ಜತೆ ಶ್ರೀಕಿ ನಿಕಟ ಸಂಪರ್ಕ ಹೊಂದಿದ್ದಾನೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಡ್ರಗ್ಸ್‌ ವ್ಯಸನಿ ಕೂಡ: ಲ್ಯಾಪ್‌ಟಾಪ್‌ ಹಾಗೂ ಇಂಟರ್‌ನೆಟ್‌ ಬಳಸಿ, ಭಾರತಸೇರಿ ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡಿ, ಅಕ್ರಮ ಮಾರ್ಗದಲ್ಲಿ ಹಣವನ್ನು ಸಂಪಾದನೆ ಮಾಡಿಕೊಳ್ಳುತ್ತಿದ್ದ. ಜತೆಗೆ ಡ್ರಗ್ಸ್‌ ವ್ಯಸನಿ ಕೂಡ ಆಗಿದ್ದಾನೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಜಯನಗರ ನಿವಾಸಿಯಾಗಿರುವ ಆರೋಪಿ, 2014- 2017ರವರೆಗೆ ನೆದರ್‌ಲ್ಯಾಂಡ್‌ನ‌ಲ್ಲಿ ಬಿಎಸ್ಸಿ ಕಂಪ್ಯೂಟರ್‌ ಸೈನ್ಸ್‌ ಪದವಿ ಪಡೆದು ಬೆಂಗಳೂರಿಗೆಬಂದಿದ್ದು,ಕಂಪ್ಯೂಟರ್‌,
ಇಂಟರ್‌ನೆಟ್‌ ಬಳಕೆ ಹಾಗೂ ಪ್ರೋಗ್ರಾಮಿಂಗ್‌ನಲ್ಲಿ ಅತ್ಯಂತ ನಿಪುಣನಾಗಿದ್ದಾನೆ. ಬೆಂಗಳೂರಿಗೆ ಬಂದ ಬಳಿಕ ಸಣ್ಣ ಪ್ರಮಾಣದ ಗೇಮ್‌ ಆ್ಯಪ್‌ಗ್ಳನ್ನು ಹ್ಯಾಕ್‌ ಮಾಡುತ್ತಿದ್ದ. ಈ ಮಧ್ಯೆ “ರನ್‌ಸ್ಪೇಸ್‌’ ಎಂಬ ಆನ್‌ಲೈನ್‌ ಗೇಮ್‌ ಅನ್ನು ಹ್ಯಾಕ್‌ ಮಾಡಿದ್ದ. ನಂತರ “ಇಂಡಿಯನ್‌ ಪೋಕರ್‌ ವೆಬ್‌ಸೈಟ್‌, ಆನ್‌ಲೈನ್‌ ಬಿಟ್‌ಕಾಯಿನ್‌’ ಹಾಗೂ ಇತರೆ ವೆಬ್‌ಸೈಟ್‌ಗಳ ಹ್ಯಾಕ್‌ ಮಾಡುವುದನ್ನುಕರಗತ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ:ಸೋಶಿಯಲ್‌ ಮೀಡಿಯಾದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಹವಾ!

ಆನ್‌ಲೈನ್‌ ಪೋಕರ್‌ ಆ್ಯಪ್‌, ವೆಬ್‌ಸೈಟ್‌ ಹ್ಯಾಕ್‌:
2019ರಲ್ಲಿ ಆನ್‌ಲೈನ್‌ ಪೋಕರ್‌ ಆ್ಯಪ್‌ ಮತ್ತು ವೆಬ್‌ಸೈಟ್‌ ಗಳನ್ನು ಹ್ಯಾಕ್‌ ಮಾಡುತ್ತಿದ್ದ ಆರೋಪಿ, ಪೋಕರ್‌ ಆ್ಯಪ್‌ ಮೂಲಕ ಆಡುತ್ತಿದ್ದ ಎದುರಾಳಿಯ ಕಾರ್ಡ್‌ ಯಾವುದು ಎಂಬುದನ್ನು ತಿಳಿದುಕೊಂಡು ಗೇಮ್‌ ಆಡಿ ಹಣ ಸಂಪಾದಿಸುತ್ತಿದ್ದ. ಆ ವೆಬ್‌ಸೈಟ್‌ಗಳ ಡೇಟಾಗಳನ್ನು ಹ್ಯಾಕ್‌ ಮೂಲಕ ಕದಿಯುವುದು, ಕೆಲವು ವೆಬ್‌ಸೈಟ್‌ಗಳ ಡೇಟಾ ವನ್ನು ಸ್ಥಗಿತಗೊಳಿಸಿ, ಬಳಿಕ ಅದರ ಮಾಲೀಕರನ್ನು ಸಂಪರ್ಕಿಸಿ ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ. ಅಲ್ಲದೆ, ಆನ್‌ಲೈನ್‌ ಮೂಲಕ ನಡೆಯುವ ಬಿಟ್‌ಕಾಯಿನ್‌ಗಳ ವರ್ಗಾವಣೆಯನ್ನು ಹ್ಯಾಕ್‌ ಮಾಡಿ ಬಿಟ್‌ಕಾಯಿನ್‌ಗಳನ್ನು  ಸಂಪಾದಿಸುತ್ತಿದ್ದ. ಈ ಸಂಬಂಧ ಸೈಬರ್‌ ಕ್ರೈಂ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು, ಆರೋಪಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ ಎಂದು ಹೇಳಿದರು.

ಪ್ರಕರಣದ ಹಿನ್ನೆಲೆ: ಚಾಮರಾಜಪೇಟೆಯ ವಿದೇಶಿ ಪೋಸ್ಟ್‌ ಆಫೀಸ್‌ಗೆ ಬಂದಿದ್ದ ಹೈಡ್ರೋ ಗಾಂಜಾ ಪಾರ್ಸೆಲ್‌
ಪಡೆದುಕೊಂಡಿದ್ದ ಸುಜಯ್‌ ಎಂಬಾತನ ಬಂಧನ ಬಳಿಕ ಕೆಲವೊಂದು ಸ್ಫೋಟಕ ಮಾಹಿತಿ ಸಿಕ್ಕಿತ್ತು. ಬಳಿಕಕೆಂಪೇಗೌಡ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಡ್ರಗ್ಸ್‌ ಪ್ರಕರಣ ಸಂಬಂಧ ಇತ್ತೀಚೆಗೆ ದಕ್ಷಿಣ ವಿಭಾಗ ಮತ್ತು ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಗೋವಾದಲ್ಲಿ ಮಾಜಿ ಸಜಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್‌ ಲಮಾಣಿ ಸೇರಿ ಎಂಟು ಮಂದಿಯನ್ನು ಬಂಧಿಸಲಾಗಿತ್ತು.

ಆರೋಪಿಗಳ ಪೈಕಿ ಸುನೀಷ್‌ ಹೆಗ್ಡೆ ಹಾಗೂ ಪ್ರಸಿದ್‌ ಶೆಟ್ಟಿಯ ಸೋದರ ಸಂಬಂಧಿಗಳಾಗಿದ್ದು, ಸುಜಯ್‌, ಹೇಮಂತ್‌ ಮುದ್ದಪ್ಪ ಡಾರ್ಕ್‌ವೆಬ್‌ ಮೂಲಕ ಹೈಡ್ರೋ ಗಾಂಜಾವನ್ನು ಬುಕ್‌ ಮಾಡಿ ಶ್ರೀಕೃಷ್ಣ ಮೂಲಕ ಬಿಟ್‌ ಕಾಯಿನ್‌ ಮೂಲಕ ಖರೀದಿಸುತ್ತಿರು.

ಸಂಜಯನಗರದ ಸುನೀಷ್‌ ಹೆಗ್ಡೆಗೆ ಸೇರಿದ ಫ್ಲ್ಯಾಟ್‌ ಹಾಗೂ ಇತರೆ ಕಡೆಗಳಲ್ಲಿ ಪಾರ್ಟಿ ಆಯೋಜಿಸಿ ತಾವು ಸೇವಿಸಿ ಬೇರೆಯವರಿಗೂ ಮಾರಾಟ ಮಾಡುತ್ತಿದ್ದರು. ಈ ವೇಳೆಯೇ ಶ್ರೀಕಿ ಮೂಲಕ ಇತರೆ ಆರೋಪಿಗಳು ದೇಶ-ವಿದೇಶದ ವಿವಿಧ ಆ್ಯಪ್‌ಗ್ಳನ್ನು ಹ್ಯಾಕ್‌ ಮಾಡಿಸಿ, ಆರ್ಥಿಕ ಲಾಭ ಪಡೆದುಕೊಳ್ಳುತ್ತಿದ್ದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.