ವಾ. ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘದ ಚುನಾವಣೆ ಫಲಿತಾಂಶ ಪ್ರಕಟ
Team Udayavani, Nov 20, 2020, 9:58 AM IST
ಹುಬ್ಬಳ್ಳಿ: ತೀವ್ರ ಜಟಾಪಟಿಯಿಂದ ಕೂಡಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘದ ಚುನಾವಣೆಯಲ್ಲಿ ಕೆಎಸ್ಆರ್ ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಬಣ ಜಯಭೇರಿ ಭಾರಿಸಿದ್ದು, ಎಲ್ಲಾ 19 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಪ್ರಸಕ್ತ ಆಡಳಿತ ಮಂಡಳಿಗೆ ತೀವ್ರ ಹಿನ್ನಡೆಯಾಗಿದೆ.
ಸಂಘದ 19 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕೆಎಸ್ಆರ್ ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಬಣ ಎಲ್ಲಾ 19 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಕಳೆದ ಮೂರು ದಶಕಗಳಿಂದ ಸಂಘದ ಚುಕ್ಕಾಣಿ ಹಿಡಿದಿದ್ದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ ಬಣಕ್ಕೆ ತೀವ್ರ ಹಿನ್ನಡೆಯಾಗಿದೆ.
ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದ ಕರಾಸಾ ನಿಗಮಗಳ ನೌಕರರ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ಬಣದ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಇನ್ನೂ ವಾ.ಕ.ರ.ಸಾ ಮಜ್ದೂರು ಸಂಘದ ಬಣ ಈ ಬಾರಿಯೂ ಖಾತೆ ತೆರೆಯಲಿಲ್ಲ. ಈ ಬಾರಿ ನಾಲ್ಕು ಬಣ ಚುನಾವಣೆಗೆ ಸ್ಪರ್ಧಿಸಿದ್ದರಿಂದ ತೀವ್ರ ಪೈಪೋಟಿ ಏರ್ಪಟ್ಟಿತ್ತು.
ಇದನ್ನೂ ಓದಿ:ಕಾಲೇಜಿಗೆ ಬರುವ ಮುನ್ನವೇ ವಿದ್ಯಾರ್ಥಿಗಳಿಗೆ ಟೆಸ್ಟ್: 72 ವಿದ್ಯಾರ್ಥಿಗಳಿಗೆ ಸೋಂಕು ದೃಢ
ಗುರುವಾರ ಸಂಜೆ ಆರು ಗಂಟೆಗೆ ಆರಂಭವಾದ ಮತ ಎಣಿಕೆ ಕಾರ್ಯ ಮಧ್ಯರಾತ್ರಿ ಮೂರು ಗಂಟೆಯವರೆಗೂ ನಡೆದಿದೆ. ಮತದಾನ ಹಾಗೂ ಎಣಿಕೆ ಕಾರ್ಯ ಶಾಂತಿಯುತವಾಗಿ ಹಾಗೂ ಕ್ರಮಬದ್ಧವಾಗಿ ನಡೆದಿದ್ದು, 19 ಸದಸ್ಯರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ ಶಶಿಧರ ಮಾಡ್ಯಾಳ ತಿಳಿಸಿದ್ದಾರೆ.
13 ಸ್ಥಾನ ಸಾಮಾನ್ಯ ವರ್ಗ: ಐ.ಆರ್.ನಾಯ್ಕರ್ (1156), ಎಚ್.ಎಸ್.ನಾಗನೂರ (1089), ಎನ್.ಬಿ.ಭರಮಗೌಡ್ರ (1072), ಎ.ಕೆ.ಜಾವೂರ(1052), ಎ.ವಿ.ಇಟಗಿ (1025), ಎಂ.ಎಸ್. ಕದಂ(1021), ಎಂ.ಎಂ.ಕಟಗೇರಿ(998), ವಿಶ್ವನಾಥ ಹಂಚಾಟೆ(991), ಪರಶುರಾಮ ಬೇಡರ (931), ವೈ.ಡಿ.ಕಾಲವಾಡ (919), ಬಿ.ಎಂ.ಕೆಂದೂರ(904), ಎಂ.ವಿ.ತೋರಗಲ್ಲ (902), ಝಡ್.ಐ.ಕರ್ಜಗಿ (983)
2 ಮಹಿಳಾ ಮೀಸಲು: ಆರ್.ಎಸ್.ದುರಗಣ್ಣನವರ (1088), ಎಸ್.ಎಂ.ಪತ್ತಾರ (1055)
1 ಓಬಿಸಿ (ಎ): ಎಂ.ಕೆ.ಅಮರಗೋಳ (927)
1 ಒಬಿಸಿ (ಬ): ಎನ್.ವಿ.ಮುಧೋಳ (1088)
1 ಎಸ್ಸಿ ಮೀಸಲು : ಜಿ.ಸಿ.ಕಮಲದಿನ್ನಿ (1375)
1 ಎಸ್ಟಿ ಮೀಸಲು: ಮಂಜುನಾಥ ನಾಯ್ಕರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್