ಅಕ್ರಮ ಗಣಿಗಾರಿಕೆ: ಆಂಧ್ರಪ್ರದೇಶ, ತೆಲಂಗಾಣದ 25 ಸ್ಥಳಗಳಲ್ಲಿ ಸಿಬಿಐ ದಾಳಿ, ಶೋಧ ಕಾರ್ಯ
ಸಿಬಿಐ ತಂಡ ಮಹತ್ವದ ದಾಖಲೆ, ಮೊಬೈಲ್ ಫೋನ್ ಗಳು ಹಾಗೂ ನಗದನ್ನು ವಶಪಡಿಸಿಕೊಂಡಿದೆ
Team Udayavani, Nov 20, 2020, 10:30 AM IST
ಅಮರಾವತಿ:ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ (ನವೆಂಬರ್ 20) ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಸುಮಾರು 25 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದರಲ್ಲಿ ಟಿಡಿಪಿ ಮುಖಂಡ, ಗುರಾಝಾಲಾ ಕ್ಷೇತ್ರದ ಮಾಜಿ ಶಾಸಕ ಯರಪತಿನೇನಿ ಶ್ರೀನಿವಾಸ್ ರಾವ್ ಹಾಗೂ ಇತರರ ಮನೆ, ಕಚೇರಿ ಸೇರಿರುವುದಾಗಿ ವರದಿ ತಿಳಿಸಿದೆ.
ಮನೆ ಮತ್ತು ಕಚೇರಿಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಸಿಬಿಐ ತಂಡ ಮಹತ್ವದ ಮಾಹಿತಿಯನ್ನೊಳಗೊಂಡ ದಾಖಲೆ, ಮೊಬೈಲ್ ಫೋನ್ ಗಳು ಹಾಗೂ ನಗದನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದೆ.
ಗುಂಟೂರು ಜಿಲ್ಲೆ ಹಾಗೂ ಹೈದರಾಬಾದ್ ನ ಸುಮಾರು 25 ಸ್ಥಳಗಳಲ್ಲಿ ಸಿಬಿಐ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಆಂಧ್ರಪ್ರದೇಶ ಸಿಬಿ-ಸಿಐಡಿ ಮಾಡಿಕೊಂಡ ಮನವಿ ಮೇರೆಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ರವಾನಿಸಿದ್ದು, ಅದನ್ನು ಅಂಗೀಕರಿಸಿದ ನಂತರ ಸಿಬಿಐ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು ಎಂದು ವರದಿ ಹೇಳಿದೆ.
17 ಮಂದಿ ಆರೋಪಿಗಳು ಅಕ್ರಮವಾಗಿ ಹಾಗೂ ಅನಧಿಕೃತವಾಗಿ ಗಣಿಗಾರಿಕೆ ನಡೆಸುತ್ತಿದ್ದರು. ಕೋನಾಂಕಿ ಗ್ರಾಮದ ಪಿಡುಗುರಾಲ್ಲಾ ಮಂಡಲ್, ಕೇಸಾನುಪಲ್ಲಿ ಮತ್ತು ದಾಚೇಪಲ್ಲಿ ಮಂಡಲ್ ನ ನಾಡಿಕುಡಿ ಹಾಗೂ ಗುಂಟೂರು ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಸುಣ್ಣದ ಕಲ್ಲಿನ ಸಾಗಾಣೆ ಮಾಡುತ್ತಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ