ದಶಕ ಹಿಂದೆಯೇ ಆತ್ಮನಿರ್ಭರ್‌ ಅನುಷ್ಠಾನ


Team Udayavani, Nov 20, 2020, 3:22 PM IST

ದಶಕ ಹಿಂದೆಯೇ ಆತ್ಮನಿರ್ಭರ್‌ ಅನುಷ್ಠಾನ

ಬೀದರ: ದೇಶದ ನಾಗರಿಕರನ್ನು ಆರ್ಥಿಕವಾಗಿಸಬಲರನ್ನಾಗಿ ಪ್ರಧಾನಿ ಮೋದಿ ಅನುಷ್ಠಾನಕ್ಕೆ ತಂದಿರುವ ಆತ್ಮ ನಿರ್ಭರ್‌ ಭಾರತ ಯೋಜನೆಯ ಕಲ್ಪನೆಯನ್ನು ಬೀದರ ಜಿಲ್ಲೆಯಲ್ಲಿ15 ವರ್ಷಗಳ ಹಿಂದೆಯೇ ಸಹಕಾರಿ ಧುರೀಣ ದಿ| ಗುರುಪಾದಪ್ಪ ನಾಗಮಾರಪಳ್ಳಿಯವರು ಜಾರಿಗೊಳಿಸಿದ್ದರು ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗ್ಮಾರಪಳ್ಳಿ ಹೇಳಿದರು.

ನಗರದ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆದ 67ನೇ ಅಖೀಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 1996ರಲ್ಲಿ ಸ್ವ-ಸಹಾಯ ಗುಂಪು ರಚಿಸಿ, ಮಹಿಳೆಯರಿಗೆ ಜೀವನ ನಡೆಸಲು ಮತ್ತು ಬದುಕು ಹಸನ ಮಾಡಿಕೊಳ್ಳಲು ದಿ| ನಾಗಮಾರಪಳ್ಳಿ ಅವರು ಡಿಸಿಸಿ ಬ್ಯಾಂಕಿನಿಂದ ಸಾಲ ಸೌಲಭ್ಯ ಕಲ್ಪಿಸಿದ್ದರು. ಎಸ್‌ಎಚ್‌ಜಿಗಳ ಮೂಲಕ ಜಿಲ್ಲೆಯ ಹೆಸರು ವಿಶ್ವದಲ್ಲಿ ರಾರಾಜಿಸುವಂತೆ ಮಾಡಿದ ಕೀರ್ತಿ ನಾಗಮಾರಪಳ್ಳಿಯವರಿಗೆ ಸಲ್ಲುತ್ತದೆ ಎಂದರು.

ಕೋವಿಡ್‌-19 ಸಂದರ್ಭದಲ್ಲಿ ದೇಶದ ಆರ್ಥಿಕತೆ ತತ್ತರಿಸಿದ ಹಿನ್ನಲೆ ಕೇಂದ್ರ ಸರ್ಕಾರ ಆತ್ಮನಿರ್ಭರ್‌ ಭಾರತ ಯೋಜನೆ ಮೂಲಕ ದೇಶದ ನಾಗರಿಕರನ್ನು ಆರ್ಥಿಕವಾಗಿ ಸಬರನ್ನಾಗಿ ಮಾಡುವ ಉದ್ದೇಶದಿಂದ ಧನ ಸಹಾಯ ನೀಡಿದಂತೆ ಸಿಎಂ ಬಿಎಸ್‌ವೈ ಸರ್ಕಾರ ಕೋವಿಡ್ ದಿಂದ ಸಂಕಷ್ಟದಲ್ಲಿರುವ ಜನರಿಗೆ ಸಹಕಾರ ಇಲಾಖೆಯಿಂದ ಸಹಾಯ ನೀಡಿದ್ದಾರೆ. ಬೀದರ ಸೇರಿ ಕಲ್ಬುರ್ಗಿ ವಿಭಾಗಕ್ಕೆ ಡಿಸಿಸಿ ಬ್ಯಾಂಕ್‌ಗಳ ಮೂಲಕ 1,857 ಕೋಟಿ ರೂ. ಆರ್ಥಿಕ ಸಹಾಯ ನೀಡಲಾಗಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮಹಮ್ಮದ್‌ ಸಲೀಮೊದ್ದೀನ್‌ ಮಾತನಾಡಿ, ಗುರುಪಾದಪ್ಪ ನಾಗಮಾರಪಳ್ಳಿಯವರು ಕಳೆದ ನಾಲ್ಕೈದು ದಶಕಗಳಿಂದ ನಡೆಸಿಕೊಂಡು ಬಂದಿದ್ದ ಡಿಸಿಸಿ ಬ್ಯಾಂಕ್‌ ಮತ್ತು ಎನ್‌ಎಸ್‌ಎಸ್‌ ಕೆಯನ್ನು ಉಮಾಕಾಂತ ನಾಗ್ಮಾರಪಳ್ಳಿಯವರು ಬಹಳ ಸಮರ್ಥವಾಗಿ ಮುನ್ನಡೆಸಿಕೊಂಡು ಬರುವ ಮೂಲಕ ತಂದೆಯ ಕನಸು ನನಸು ಮಾಡುತ್ತಿದ್ದಾರೆ. ನಿಸ್ವಾಥ ಮನೋಭಾವದಿಂದ ದುಡಿಯುತ್ತಿರುವ ಉಮಾಕಾಂತಗೆ ರಾಜ್ಯ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ, ಗೌರವಿಸಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ಜಿಲ್ಲಾ ಸಹಕಾರ ಯುನಿಯನ್‌ ಅಧ್ಯಕ್ಷ ಪರಮೇಶ್ವರ ಮುಗಟೆ ಹಾಗೂ ಮಾಂಜರಾ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್‌ ಅಧ್ಯಕ್ಷೆಶಕುಂತಲಾ ಬೆಲ್ದಾಳೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಷ್ಕೃತ ಉಮಾಕಾಂತ ನಾಗಮಾರಪಳ್ಳಿ ಮತ್ತು ಪತ್ರಕರ್ತರಾದ ಗುರುರಾಜ ಕುಲಕರ್ಣಿ, ಶಶಿಕಾಂತ ಬಂಬುಳಗೆ ಅವರನ್ನು ಸನ್ಮಾನಿಸಲಾಯಿತು.

ಸಹಕಾರ ಸಂಘಗಳ ಸಹಾಯಕ ನಿಬಂಧಕ ಸಂಗಮ ಭೀಮರಾವ ಹೈಬತ್ತಿ, ಡಿಸಿಸಿ ಬ್ಯಾಂಕ್‌ ಸಿಇಒ ಮಲ್ಲಿಕಾರ್ಜುನ ಮಹಾಜನ, ಪ್ರಧಾನ ವ್ಯವಸ್ಥಾಪಕರಾದ ವಿಠuಲರೆಡ್ಡಿ ಎಡಮಲ್ಲೆ,ಚನ್ನಬಸಯ್ನಾ ಸ್ವಾಮಿ, ಬಸವರಾಜ ಹೆಬ್ಟಾಳೆ,ಶಿವಶರಣಪ್ಪ ತಗಾರೆ, ಬಗದಲ್‌ನ ಖಾದ್ರಿ ಮತ್ತು ನಿರ್ದೇಶಕರು ಇದ್ದರು. ಕಲ್ಯಾಣಿ ನಿರೂಪಿಸಿ ಉಮಾದೇವಿ ವಂದಿಸಿದರು.

ಅಧಿಕಾರದಾಸೆ ಇಲ್ಲ; ನಿರಾಶಾವಾದಿಯೂ ಅಲ್ಲ :  ದಿ| ನಾಗಮಾರಪಳ್ಳಿ ಅವರು ತೋರಿದ ಮಾರ್ಗದಲ್ಲಿ ಮುನ್ನಡೆದು ಅವರು ಕಟ್ಟಿ ಬೆಳೆಸಿದ ಡಿಸಿಸಿ ಬ್ಯಾಂಕ್‌ನ್ನು ಹೆಮ್ಮರವಾಗಿ ಬೆಳೆಸುವ ಕನಸು ನನ್ನದು. ಅಧಿಕಾರದ ಆಸೆ ನನಗಿಲ್ಲ. ಹಾಗಂತ ನಾನು ನಿರಾಶಾವಾದಿಯೂ ಇಲ್ಲ. ಒಂದು ವೇಳೆ ಅವಕಾಶ ಬಂದರೆ ಬಿಡುವುದೂ ಇಲ್ಲ. ಆದರೆ, ನನಗೆ ದುರಾಸೆ ಇಲ್ಲ. ಸಮಯ ಬಂದಾಗ ನೋಡೋಣ. ಇದಕ್ಕೆ ಎಲ್ಲರ ಸಹಾಯ-ಸಹಕಾರ ಬೇಕು. –ಉಮಾಕಾಂತ ನಾಗಮಾರಪಳ್ಳಿ, ಅಧ್ಯಕ್ಷರು, ಡಿಸಿಸಿ ಬ್ಯಾಂಕ್‌, ಬೀದರ

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.