ಸೋನಿಯಾ ಗಾಂಧಿ ದೆಹಲಿ ತೊರೆಯಬೇಕು, ಚೆನ್ನೈನಲ್ಲಿ ಕೆಲಕಾಲ ವಾಸ? ವೈದ್ಯರ ಸಲಹೆ
ಸೋನಿಯಾ ಗಾಂಧಿ ಗೋವಾ ಅಥವಾ ಚೆನ್ನೈನಲ್ಲಿ ಕೆಲವು ದಿನಗಳ ಕಾಲ ಕಳೆಯುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ.
Team Udayavani, Nov 20, 2020, 5:10 PM IST
ನವದೆಹಲಿ:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೆಲವು ದಿನಗಳ ಮಟ್ಟಿಗೆ ದೆಹಲಿಯನ್ನು ತೊರೆಯಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಅದಕ್ಕೆ ಕಾರಣ “ರಾಷ್ಟ್ರರಾಜಧಾನಿ” ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚಳವಾಗುತ್ತಿರುವುದು!
ದೀರ್ಘಕಾಲದ ಎದೆಯ ಸೋಂಕಿನಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರು ಆರೋಗ್ಯದ ದೃಷ್ಟಿಯಿಂದ ದೆಹಲಿಯನ್ನು ತೊರೆಯಬೇಕು ಎಂದು ವೈದ್ಯರು ಸಲಹೆ ನೀಡಿರುವುದಾಗಿ ಪಕ್ಷದ ಮೂಲಗಳು ಶುಕ್ರವಾರ(ನವೆಂಬರ್ 20, 2020) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಗೋವಾ ಅಥವಾ ಚೆನ್ನೈನಲ್ಲಿ ಕೆಲವು ದಿನಗಳ ಕಾಲ ಕಳೆಯುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ.
ಮೂಲಗಳ ಪ್ರಕಾರ,ಸೋನಿಯಾ ಗಾಂಧಿ ಶುಕ್ರವಾರ ಸಂಜೆ ದೆಹಲಿಯಿಂದ ಹೊರಡುವ ಸಾಧ್ಯತೆ ಇದ್ದು, ತಾಯಿ ಜತೆಯಲ್ಲಿ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ವಾದ್ರಾ ತೆರಳಬಹುದು ಎಂದು ವರದಿ ವಿವರಿಸಿದೆ.
ದೀರ್ಘಕಾಲದ ಅನಾರೋಗ್ಯಕ್ಕೆ ಒಳಗಾಗಿದ್ದ ಸೋನಿಯಾ ಗಾಂಧಿ ಅವರು ಆಗಸ್ಟ್ ತಿಂಗಳಿನಲ್ಲಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದರು. ಸೋನಿಯಾ ಗಾಂಧಿ ಅವರ ಎದೆಯ ಸೋಂಕಿನ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದು, ದೆಹಲಿಯ ವಾಯುಮಾಲಿನ್ಯ ತುಂಬಾ ತೊಂದರೆ ನೀಡಲಿದೆ ಎಂದು ಎಚ್ಚರಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಲಾಕ್ಡೌನ್ ಬಳಿಕ ಹೊಸ ಚಿತ್ರದತ್ತ ಸೆಂಚುರಿ ಸ್ಟಾರ್ : ಶಿವಪ್ಪನಾದ ಶಿವಣ್ಣ
ದಿಲ್ಲಿಯ ಅತಿಯಾದ ವಾಯುಮಾಲಿನ್ಯದಿಂದ ಸೋನಿಯಾ ಗಾಂಧಿ ಅವರ ಅಸ್ತಮಾ ಹಾಗೂ ಎದೆ ನೋವು ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ದಿಲ್ಲಿಯನ್ನು ತೊರೆದು ಬೇರೆಡೆ ಸ್ವಲ್ಪಕಾಲ ಕಳೆಯುವಂತೆ ವೈದ್ಯರು ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ