ಜಾನಪದ ಸಂಭ್ರಮ-2020 ಬಗ್ಗೆ ಅನವಶ್ಯಕ ಟೀಕೆ


Team Udayavani, Nov 21, 2020, 2:35 PM IST

rn-tdy-2

ರಾಮನಗರ: ಜಿಲ್ಲೆಯಲ್ಲಿ 4000 ಅಧಿಕ ಕಲಾವಿದರಿದ್ದಾರೆ. ಎಲ್ಲಾ ಕಲಾವಿದರಿಗೂ ಏಕಕಾಲದಲ್ಲಿ ಅವಕಾಶ ಕಲ್ಪಿಸಲು ಸಾಧ್ಯ ವಾಗುವುದಿಲ್ಲ. ಈ ಹಿಂದೆ ನಡೆದ ಕಾರ್ಯಕ್ರಮಗಳಲ್ಲಿ ಅವಕಾಶ ಪಡೆದ ಕಲಾವಿದರನ್ನು ಹೊರತು ಪಡಿಸಿ ಜಾನಪದ ಸಂಭ್ರಮ 2020 ಕಾರ್ಯಕ್ರಮದಲ್ಲಿ ಉಳಿದ ಕಲಾವಿದರ ಪೈಕಿ ಕೆಲವರಿಗೆ ಅವಕಾಶ ಮಾಡಿಕೊಡಲಾಗಿದೆ, ಈ ವಿಚಾರದಲ್ಲಿ ಅನವಶ್ಯಕ ಟೀಕೆಗಳು ವ್ಯಕ್ತವಾಗಿವೆ ಎಂದು ಅಖಿಲ ಕರ್ನಾಟಕ ಕಲಾವಿದರ ಒಕ್ಕೂಟದ ಪದಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೆಲವು ದಿನಗಳ ಹಿಂದೆ ನಡೆದ ಜಾನಪದ ಸಂಭ್ರಮ 2020 ಕಾರ್ಯಕ್ರಮದ ಬಗ್ಗೆ ಜಿಲ್ಲಾ ಜಾನಪದ ಕಲಾವಿದರ ಬಳಗ ವ್ಯಕ್ತಪಡಿಸಿದ ಆಕ್ಷೇಪಗಳಿಗೆ ಪ್ರತಿಯಾಗಿ ಈ ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು.

ಮನವಿಗೆ ಸ್ಪಂದನೆ: ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಕಲಾವಿದರ ಒಕ್ಕೂಟದ ಸಂಚಾಲಕ ಪಾರ್ಥಸಾರಥಿ, ಕೋವಿಡ್‌ ಕಾರಣ ಜಾನಪದ ಕಲಾವಿದರಿಗೆ ಪ್ರದರ್ಶನ ಅವಕಾಶ ಕೊಡಿಸುವಂತೆ ಮಾಡಿಕೊಂಡ ಮನವಿಗೆ ಜಾನಪದ ಅಕಾಡೆಮಿಯ ಸದಸ್ಯ ಜೋಗಿಲ ಸಿದ್ದರಾಜು ಸ್ಪಂದಿಸಿದ್ದಾರೆ ಎಂದರು.

ಜಾನಪದ ಕಲಾವಿದರುಯಾರು ಲಕ್ಷಾಧೀಶ್ವರರು ಅಲ್ಲ, ತುತ್ತಿನಚೀಲ ತುಂಬಿಸಲು ಕಲಾಪ್ರದರ್ಶನ ಅಗ್ಯತವಾಗಿದೆ. ಆದರೆ ಕೋವಿಡ್‌ ಕಾರಣ ಬಹುತೇಕ ಕಲಾವಿದರಿಗೆ ಪ್ರದರ್ಶನ ಭಾಗ್ಯವಿಲ್ಲದೆ, ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

ಹೋರಾಟ ರೂಪಿಸಬೇಕು: ತಾಲೂಕಿನಲ್ಲಿ ತಮಟೆ, ಪೂಜೆ, ಪಟ ಮತ್ತು ವೀರಗಾಸೆಯಲ್ಲಿ 1100 ಕಲಾದರಿದ್ದಾರೆ. ಅವರಿಗೆ ಗುರುತಿನ ಚೀಟಿ ಇಲ್ಲ, ಸರ್ಕಾರ ಇವರ ರಕ್ಷಣೆಗೆ ಬರಬೇಕು. ಅಕಾಲಿಕಮರಣ ಹೊಂದುವ ಕುಟುಂಬಕ್ಕೆ 2 ಲಕ್ಷ ಪರಿಹಾರ ನೀಡುವ ಯೋಜನೆ ಸರ್ಕಾರ ರೂಪಿಸಬೇಕು. ಇಂತಹ ಹೋರಾಟಗಳಿಗೆ ಕಲಾವಿದರು ಒಗ್ಗೂಡಿಸಿ ಹೋರಾಟ ರೂಪಿಸಬೇಕು ಎಂದರು.

ಆರೋಪ ಮಾಡುವುದು ಹಾಸ್ಯಸ್ಪದ: ಕಲಾವಿದೆ ಸಾವಿತ್ರಿಬಾಯಿ ಮಾತನಾಡಿ ಅಕಾಡೆಮಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಕಷ್ಟು ನೆರವು ಪಡೆದ ಕಲಾವಿದರೇ, ಯುವ ಕಲಾವಿದರ ಮೇಲೆ ಆರೋಪ ಮಾಡುವುದು ಹಾಸ್ಯಸ್ಪದ ಎಂದು ಟೀಕಿಸಿದರು.

ಸುಳ್ಳು ಆರೋಪ ಮಾಡಬಾರದು: ಮತ್ತೂಬ್ಬ ಕಲಾವಿದ ಗೋವಿಂದರಾಜು ಮಾತನಾಡಿ, ಅಕಾಡೆಮಿ ಸದಸ್ಯ ಉತ್ತರ ಕರ್ನಾಟಕ ಭಾಗಕ್ಕೆ ನಿಗದಿಯಾಗಿದ್ದ ಕಲಾ ಪ್ರದರ್ಶನ ರಾಮನಗರ ಜಿಲ್ಲೆಯಲ್ಲಿ ಆಯೋಜನೆಯಾಗಿದೆ. ತಮಗೆ ಅವಕಾಶ ಸಿಗಲಿಲ್ಲ ಎಂದು ಸುಳ್ಳು ಆರೋಪ ಮಾಡುವುದು ಸರಿಯಲ್ಲ, ಇದರ ಬದಲು ಹಿರಿಯರು ಕಿರಿಯ ಕಲಾವಿದರಿಗೆ ಮಾರ್ಗದರ್ಶನ ನೀಡಿ ಕಲೆ ಉಳಿಸಲು ಮುಂದಾಗಲಿ ಎಂದು ಮನವಿ ಮಾಡಿದರು.

ಕೋವಿಡ್ ಸಂಕಷ್ಟ ಸಮಯದಲ್ಲಿ ಸರ್ಕಾರದ ಪರಿಹಾರ ಧನ 2000 ರೂ. ಅರ್ಹ ಕಲಾವಿದರಿಗೆ ತಲುಪಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಹಿಳಾ ಡೊಳ್ಳು ಕುಣಿತ ಕಲಾವಿದೆ ಗೀತಾ, ಕಲಾವಿದರುಗಳಾದ ಬಸವರಾಜು, ರಾಜು, ಅಪ್ಪಾಜಿ, ಗುಂಡ, ಶ್ರೀನಿವಾಸ್‌, ದರ್ಶನ್‌, ಪ್ರಸನ್ನ, ದಿನೇಶ್‌ ಇದ್ದರು.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.