28ರಿಂದ ಅನುಭವ ಮಂಟಪ ಉತ್ಸವ
Team Udayavani, Nov 22, 2020, 5:43 PM IST
ಬಸವಕಲ್ಯಾಣ: ಬಸವಾದಿ ಶರಣರ ಕ್ರಾಂತಿಭೂಮಿ ಬಸವಕಲ್ಯಾಣದಲ್ಲಿ ಕಳೆದ 40 ವರ್ಷಗಳಿಂದಪ್ರತಿವರ್ಷ ಶರಣ ಕಮ್ಮಟ ಆಚರಿಸುತ್ತ ಬರಲಾಗುತ್ತಿದೆ. ಆದರೆ ಈ ವರ್ಷ ಕೋವಿಡ್ -19 ಇರುವುದರಿಂದ 41ನೇ ಶರಣ ಕಮಟ್ಟ ಮತ್ತು ಅನುಭವ ಮಂಟಪ ಉತ್ಸವ ನ.28 ಮತ್ತು 29ರಂದು ಸರಳವಾಗಿ ಆಚರಿಸಲಾಗುತ್ತದೆ ಎಂದು ಅನುಭವ ಮಂಟಪ ಅಧ್ಯಕ್ಷರಾದ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.
ನಗರದ ಅನುಭವ ಮಂಟಪದಲ್ಲಿ ಉತ್ಸವ ಅಂಗವಾಗಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಬಸವ ಭಕ್ತರು ಅನುಭವ ಮಂಟಪ ಬಸವಕಲ್ಯಾಣ ಫೆಸ್ ಬುಕ್ ಮತ್ತು ಯು ಟೂಬ್ ಚಾನಲನಲ್ಲಿ ಶರಣ ಕಮ್ಮಟ ಉತ್ಸವ ಕಾರ್ಯಕ್ರಮ ವೀಕ್ಷಿಸಬಹುದು ಎಂದರು.
ಬೀದರ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಬಸವರಾಜ ಧನ್ನೂರ ಹಾಗೂ ಹುಮನಾಬಾದ್ ಹಿರಿಯ ಸಾಹಿತಿ ಡಾ| ಸೋಮನಾಥ ಯಾಳವಾರ ಮಾತನಾಡಿ, ಉತ್ಸವದ ಬಗ್ಗೆ ಕೆಲವು ಸಲಹೆಗಳನ್ನು ನೀಡಿದರು. ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು.
ಶಿವಾನಂದ ಸ್ವಾಮಿಗಳು, ಮಹಾಲಿಂಗಸ್ವಾಮಿಗಳು, ನಿರಂಜನ ಸ್ವಾಮಿಗಳು, ಬಸವಲಿಂಗ ಸ್ವಾಮಿಗಳು, ಸಿದ್ಧೇಶ್ವರಾನಂದ ಸ್ವಾಮಿಗಳು, ಬಸವಕಲ್ಯಾಣ ಅಭಿವೃದ್ಧಿ ಪ್ರಾ ಧಿಕಾರ ವ್ಯವಸ್ಥಾಪಕ ಮೀನಾಕುಮಾರಿ ಬೋರಾಳಕರ್, ಬಸವೇಶ್ವರದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಅನಿಲಕುಮಾರರಗಟೆ, ವಿಶ್ವಬಸವ ಧರ್ಮ ಟ್ರಸ್ಟ್ನ ಕಾರ್ಯದರ್ಶಿ ಡಾ| ಎಸ್.ಬಿ. ದುರ್ಗೆ ಸೇರಿದಂತೆ ಮತ್ತಿತರರು ಇದ್ದರು.
ಹಾಸ್ಯ ಕಲಾವಿದ ನವಲಿಂಗ ಪಾಟೀಲ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಈಗ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆ 35 ಸ್ಥಾನವು ಸಿಗದು: ಜೋಶಿ
Bidar: ಲಿಂಗಾಯತ ಮಹಾಮಠದ ಪೀಠಾಧ್ಯಕ್ಷರಾದ ಅಕ್ಕ ಅನ್ನಪೂರ್ಣ ತಾಯಿ ನಿಧನ
Bidar; ಎನ್ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ
Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು
Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ
Form 17c: ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?
Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ
Cannes 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ಮೈಸೂರಿನ ಚಿದಾನಂದ ಎಸ್ ನಾಯಕ್