ರೈತರಿಗೆ ಅನ್ಯಾಯವಾದರೆ ರಾಜೀನಾಮೆ ನೀಡ್ತಿನಿ


Team Udayavani, Nov 22, 2020, 6:58 PM IST

ರೈತರಿಗೆ ಅನ್ಯಾಯವಾದರೆ ರಾಜೀನಾಮೆ ನೀಡ್ತಿನಿ

ಹೊಳಲ್ಕೆರೆ: ರಾಜ್ಯದ ರೈತರಿಗೆ ಅನ್ಯಾಯವಾಗುವಂತ ಕಾಯ್ದೆಗಳನ್ನು ಕೇಂದ್ರಹಾಗೂ ರಾಜ್ಯ ಸರಕಾರ ಜಾರಿಗೆ ಮುಂದಾಗಿದ್ದಲ್ಲಿವಿಧಾನಸಭೆಗೆ ರಾಜೀನಾಮೆ ನೀಡಿ ರೈತಪರವಾಗಿ ಹೋರಾಟಕ್ಕೆ ನಿಲ್ಲುತ್ತೇನೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಎಂ.ಚಂದ್ರಪ್ಪ ತಿಳಿಸಿದರು.

ತಾಲೂಕಿನ ಉಪ್ಪರಿಗೆನಹಳ್ಳಿಯಲ್ಲಿ ನಬಾರ್ಡ್‌ ಸಹಯೋಗದಲ್ಲಿ ರೈತ ಉತ್ಪಾದಕರ ಕಂಪನಿ ಕಚೇರಿ ಉದ್ಘಾಟನೆ ಹಾಗೂ ಎಚ್‌.ಡಿ.ಪುರದ ಭಾಗದಲ್ಲಿ 8.5.ಕೋಟಿ ವಿವಿಧ ಹಳ್ಳಿಗಳಲ್ಲಿ ವಿವಿಧಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದಅವರು, ರೈತರು ಎಪಿಸಿಎಂಸಿ ಕಾಯ್ದೆ, ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ ರೈತರಿಗೆ ಅನ್ಯಾಯಮಾಡುತ್ತವೆ ಎನ್ನುವ ರೈತರ ನಿಲುವು ಸರಿಯಲ್ಲ.ಕೇಂದ್ರ ಹಾಗೂ ರಾಜ್ಯ ಸರಕಾರ ರೈತರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಕಾಯ್ದೆಗಳನ್ನು ಪ್ರಯೋಗಿಕವಾಗಿ ಜಾರಿಗೆ ಮುಂದಾಗಿವೆ. ಲೋಷದೋಷಗಳು ಕಂಡು ಬಂದಲ್ಲಿ ಸೂಕ್ತ ತಿದ್ದುಪಡಿಸಿ ಮಾಡಲಿದೆ. ರೈತರು ಕಾಯ್ದೆಗಳನ್ನು ಜಾರಿಗೆ ತರುವ ಮೊದಲೇ ಸರಿಯಲ್ಲ ಎನ್ನುವ ನಿಲುವು ಬೇಡ ಎಂದರು.

ಕ್ಷೇತ್ರದ 493 ಹಳ್ಳಿಗಳಿಗೂ ಶಾಶ್ವತ ಕುಡಿಯುವ ನೀರಿನ ಸೌಲಭ್ಯಕ್ಕೆ 450 ಕೋಟಿ ಹಣದಲ್ಲಿ ಮಾರಿಕಣಿವೆಯಿಂದ ಪೈಪ್‌ಲೈನ್‌ ಮೂಲಕಶುದ್ಧ ನೀರನ್ನು ಮನೆ ಬಾಗಿಲಿನ ನಲ್ಲಿಗೆ ಪೂರೈಕೆಗೆ ಒತ್ತು ನೀಡಿದೆ. ರೈತರ ವಿದ್ಯುತ್‌ ಸಮಸ್ಯೆಯಮುಕ್ತಿಗೆ 220 ಕೆವಿ ಸ್ಥಾವರ ನಿರ್ಮಾಣಕ್ಕೆ 500ಕೋಟಿ ಹಣದಲ್ಲಿ ಶರಾವತಿ ಯಿಂದ ನೇರವಾಗಿ ಪೂರೈಕೆಗೆ ಒತ್ತು ನೀಡಿದೆ. ಕ್ಷೇತ್ರದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಕೆಲಸಕ್ಕೆ ಪೈಪ್‌ಲೈನ್‌ ಹಾಕುವಕೆಲಸಕ್ಕೆ ಚಾಲನೆ ಸಿಕ್ಕಿದೆ. ಬರಗಾಲದ ಪ್ರದೇಶದ ಎಚ್‌.ಡಿ. ಪುರ ಎಲ್ಲಾ ಕೆರೆಗೆ ಅಪ್ಪರ್‌ ಭದ್ರಾ ನೀರುತುಂಬಿಸಲು ಹೆಚ್ಚುವರಿ 150 ಕೋಟಿ ಅನುದಾನತಂದಿದೆ. ಚೆಕ್‌ ನಿರ್ಮಾಣಕ್ಕೆ 250 ಕೋಟಿನೀಡಿದೆ. ಅಸ್ಪತ್ರೆಗೆ 12 ಕೋಟಿ, 200ಶಾಲಾಕೊಠಡಿ ಸೇರಿದಂತೆ ಕ್ಷೇತ್ರದ ಆಭಿವೃದ್ಧಿ 2 ಸಾವಿರಕೋಟಿ ಅನುದಾನವನ್ನು ಸಾಮಾನ್ಯ ಶಾಸಕನಾಗಿ ತಂದಿದ್ದೇನೆ. ತೃಪ್ತಿ ಇಲ್ಲ. ಇನ್ನಷ್ಟು ಕೆಲಸ ಮಾಡಿ ಮತದಾರರ ಋಣ ತೀರಿಸುವ ಹಂಬಲವಿದೆ ಎಂದರು.

ಜಿ.ಪಂ ಸದಸ್ಯ ಡಿ.ಕೆ.ಶಿವಮೂರ್ತಿ ಮಾತನಾಡಿ, ಹಿಂದುಳಿದ ಪ್ರದೇಶವಾಗಿದ್ದು,ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ. ಈನಿಟ್ಟಿನಲ್ಲಿ ಶಾಸಕರು ಶ್ರಮಿಸುತ್ತಿದ್ದಾರೆ ಎಂದರು.ರೈತರ ಸಂಘದ ರಾಜ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ, ರೈತರ ಸಮಸ್ಯೆಗಳಿಗೆ ಶಾಸಕ ಎಂ.ಚಂದ್ರಪ್ಪ ಧ್ವನಿಯಂತೆ ಕೆಲಸಮಾಡುವ ನಿರೀಕ್ಷೆ ಇದೆ. ಕೆರೆಗಳಿಗೆ ನೀರುತುಂಬಿಸುವುದರ ಜತೆ ಕೃಷಿ ನೀರಾವರಿಗೆ ಆದ್ಯತೆನೀಡಬೇಕು. ವೇದಾವತಿ ನೀರನ್ನು ಕೃಷಿ ಪ್ರದೇಶಕ್ಕೆ ಹರಿಸುವ ಕೆಲಸ ಮಾಡಲು ಶಾಸಕರು ಹೋರಾಟ ನಡೆಸುವ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ನಬಾರ್ಡ್‌ ವ್ಯವಸ್ಥಾಪಕಿ ಕವಿತ, ರೈತ ಉತ್ಪಾದಕರ ಕಂಪನಿ ಅಧ್ಯಕ್ಷ ಜಿ.ಸಿ.ನಾಗರಾಜ್‌, ಸಹಾಯಕ ಕೃಷಿ ಅ ಧಿಕಾರಿ ಪ್ರಕಾಶ್‌, ಸಹಾಯಕ ತೋಟಗಾರಿಕೆ ಅಧಿಕಾರಿ ಕುಮಾರನಾಯ್ಕ, ತಾ.ಪಂ ಸದಸ್ಯ ಪರಮೇಶ್ವರಪ್ಪ, ಬಿಜೆಪಿ ಮುಖಂಡ ಚಂದ್ರಪ್ಪ, ಎಚ್‌.ಡಿ. ರಂಗಯ್ಯ,ಇಂಜನಿಯರ್‌ ಮಹಾಬಲೇಶ್ವರ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ

Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ

Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ

Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

2-holalkere

Holalkere: ರೈಲಿನಿಂದ ಕೆಳಗೆ ಬಿದ್ದು ಮಹಿಳೆ ಸಾವು

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Legislative Council Polls; ಪದವೀಧರ ಮತದಾರರ ನಿರಾಸಕ್ತಿ!

Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ

Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ

Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ

Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.