ನೀರು ಕುಡಿಯಲು ಹೋಗಿ ತೊಟ್ಟಿಯೊಳಗೆ ಬಿದ್ದ ಕಾಡಾನೆ ಮರಿಯನ್ನು ರಕ್ಷಿಸಿದ ಅರಣ್ಯ ಇಲಾಖೆ
Team Udayavani, Nov 22, 2020, 10:14 PM IST
ಮಳವಳ್ಳಿ: ನೀರು ಕುಡಿಯಲು ಬಂದ ಮರಿ ಆನೆಯೊಂದು ನೀರಿನ ತೊಟ್ಟಿಯೊಳಗೆ ಮುಳುಗಿದ್ದನ್ನು ಕಂಡು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿ ಮರಳಿ ಕಾಡಿಗೆ ಬಿಟ್ಟಿರುವ ಘಟನೆ ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ಮಣಿಗಾರನಕಟ್ಟೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಭಾನುವಾರ ಬೆಳಗಿನ ಸಮಯದಲ್ಲಿ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗೆ ಕಾಡಾನೆಗಳ ಗುಂಪು ಗೀಳಿಡುತ್ತಿದ್ದ ಸದ್ದು ಕೇಳಿಸಿತು. ಇದನ್ನು ಆಲಿಸಿದ ಸಿಬ್ಬಂದಿ ಹುಡುಕಿಕೊಂಡು ಹೋದಾಗ ಮಾದನಾಯಕ ಜಮೀನಿನ ಪಕ್ಕ ಇರುವ ನೀರಿನ ತೊಟ್ಟಿಯೊಂದರಲ್ಲಿ ಮರಿ ಕಾಡಾನೆ ಬಿದ್ದಿರುವುದನ್ನು ರಕ್ಷಿಸಲು ಕಾಡಾನೆಗಳ ಗುಂಪು ಪ್ರಯತ್ನ ಪಡುತ್ತಿದ್ದವು. ಬೆಳಕು ಹರಿಯುತ್ತಿದ್ದಂತೆ ಕಾಡಾನೆಗಳು ಕಾಡಿನೊಳಗೆ ಹೋದ ನಂತರ ಜೆಸಿಬಿ ಮೂಲಕ ತೊಟ್ಟಿ ಹೊಡೆದು ಹಾಕಿ ಆನೆ ಮರಿಯನ್ನು ರಕ್ಷಣೆ ಮಾಡಿ ಕಾಡಿಗೆ ಅಟ್ಟಲಾಯಿತು.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಮಹಾದೇವಸ್ವಾಮಿ ಮತ್ತು ಅರಣ್ಯ ರಕ್ಷಕ ಸಿದ್ದರಾಮ ಪೂಜಾರಿ, ಪೂಜಾರಿ, ಶ್ರೇಯಸ್, ರಾಜಕುಮಾರ, ಸುಮಂತ್, ಲೋಕೇಶ್, ಪ್ರದೀಪ್, ಕೆಂಚಪ್ಪ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ