ಸೋಂಕಿತರು ಬಳಸಿದ ವಸ್ತು ವಿದ್ಯಾರ್ಥಿಗಳಿಗೆ ಬೇಡ


Team Udayavani, Nov 23, 2020, 5:43 AM IST

ಸೋಂಕಿತರು ಬಳಸಿದ ವಸ್ತು ವಿದ್ಯಾರ್ಥಿಗಳಿಗೆ ಬೇಡ

ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಮೆಟ್ರಿಕ್‌ ಅನಂತರದ ಹಾಸ್ಟೆಲ್‌ ಆರಂಭಿಸಲು ಸಮಾಜ ಕಲ್ಯಾಣ ಇಲಾಖೆ ಸೂಚನೆ ನೀಡಿ, ಕೋವಿಡ್ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ‌ ಬಗ್ಗೆ ಪ್ರಮಾಣಿತ ಕಾರ್ಯಸೂಚಿ ವಿಧಾನ (ಎಸ್‌ಒಪಿ)ಯನ್ನು ಬಿಡುಗಡೆ ಮಾಡಿದೆ. ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ಗ‌ಳನ್ನು ಆರಂಭಿಸಲು ಇನ್ನು ಅನುಮತಿ ನೀಡಿಲ್ಲ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಹೋಗಲು ಅಥವಾ ಆನ್‌ಲೈನ್‌ ತರಗತಿಯಲ್ಲಿ ಭಾಗವಹಿಸಲು ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಹಾಸ್ಟೆಲ್‌ಗ‌ಳನ್ನು ಆರಂಭಿಸಲಾಗಿದೆ. ಕೊರೊನಾ ಸೋಂಕಿತರು ಬಳಸಿರುವ ಹಾಸಿಗೆ, ದಿಂಬು, ಹೊದಿಕೆಗಳನ್ನೇ ವಿದ್ಯಾರ್ಥಿಗಳು ಬಳಸಬೇಕು ಎಂಬುದು ಎಷ್ಟು ಸರಿ?

ರಾಜ್ಯದ ಬಹುತೇಕ ಹಾಸ್ಟೆಲ್‌ ಮತ್ತು ವಸತಿ ಶಾಲೆಗಳನ್ನು ಕ್ವಾರಂಟೈನ್‌ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿತ್ತು. ಲಾಕ್‌ಡೌನ್‌ಗೂ ಮೊದಲ ಮತ್ತು ಲಾಕ್‌ಡೌನ್‌ ಅವಧಿಯಲ್ಲಿ ಹೊರ ರಾಜ್ಯ ಮತ್ತು ವಿದೇಶಗಳಿಂದ ಬಂದಿರುವ ಕೊರೊನಾ ಶಂಕಿತರಿಗೆ ಕ್ವಾರಂಟೈನ್‌ ಕೇಂದ್ರದಲ್ಲೇ ವ್ಯವಸ್ಥೆ ಮಾಡಲಾಗಿತ್ತು, ಇದಾದ ಅನಂತರ ಸರಕಾರದಿಂದ ಆರಂಭಿಸಿರುವ ಕೋವಿಡ್‌ ಆರೈಕೆ ಕೇಂದ್ರಗಳನ್ನು ವಸತಿ ಶಾಲೆ ಹಾಗೂ ಹಾಸ್ಟೆಲ್‌ಗ‌ಳಲ್ಲಿ ತೆರೆಯಲಾಗಿತ್ತು. ಕೊರೊನಾ ಸೋಂಕಿತರು, ರೋಗ ಲಕ್ಷಣ ಇಲ್ಲದ ಸೋಂಕಿತರು ಸಹಿತವಾಗಿ ಕ್ವಾರಂಟೈನ್‌ನಲ್ಲಿದ್ದರು ಹಾಗೂ ಆರೈಕೆ ಕೇಂದ್ರದಲ್ಲಿದವರು ಹಾಸ್ಟೆಲ್‌ ವಿದ್ಯಾರ್ಥಿಗಳು ಬಳಸುತ್ತಿದ್ದ ಬೆಡ್‌, ಬೆಡ್‌ಸ್ಪ್ರೆಡ್‌, ದಿಂಬು, ದಿಂಬಿನ ಕವರ್‌, ಹೊದಿಕೆ ಇತ್ಯಾದಿಗಳನ್ನು ಉಪಯೋಗಿಸಿದ್ದಾರೆ. ಅದನ್ನೇ ಈಗ ಬಿಸಿ ನೀರು ಮತ್ತು ಡಿಟರ್ಜಂಟ್‌ನಿಂದ ಒಗೆದು ವಿದ್ಯಾರ್ಥಿಗಳಿಗೆ ಮರು ಬಳಕೆಗೆ ಎಸ್‌ಒಪಿಯಲ್ಲೇ ತಿಳಿಸಲಾಗಿದೆ.

ಕೊರೊನಾ ಸೋಂಕಿತರು ಬಳಸಿರುವ ವಸ್ತುಗಳನ್ನು ಮನೆಯಲ್ಲೇ ಮರು ಬಳಕೆ ಮಾಡಲು ಜನ ಸಾಕಷ್ಟು  ಬಾರಿ ಯೋಚನೆ ಮಾಡುತ್ತಾರೆ. ಈ ಸಾಂಕ್ರಾಮಿಕ ರೋಗ ತುಂಬ ಅಪಾಯಕಾರಿ, ಎಚ್ಚರ ತಪ್ಪಿದರೇ ಆಪತ್ತು ಕಟ್ಟಿಟ್ಟ ಬುತ್ತಿ ಎಂದು ವೈದ್ಯಕೀಯ ವಲಯವೇ ಸಾರಿ ಹೇಳುತ್ತಿದೆ. ಇವೆಲ್ಲದರ ನಡುವೆ ಕೊರೊನಾ ಸೋಂಕಿತರು, ಶಂಕಿತರು ಬಳಸಿರುವ ಹೊದಿಕೆ, ದಿಂಬು, ಬೆಡ್‌, ಬೆಡ್‌ಶೀಟ್‌ ಇತ್ಯಾದಿಗಳನ್ನು ವಾಶ್‌ ಮಾಡಿ ವಿದ್ಯಾರ್ಥಿಗಳಿಗೆ ಮರು ಬಳಕೆಗೆ ನೀಡುವುದು ಸರಿಯೇ? ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳೇ ಹೆಚ್ಚಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆ, ಹಾಸ್ಟೆಲ್‌ಗ‌ಳಲ್ಲಿ ಈ ರೀತಿ ಮಾಡುತ್ತಿರುವುದು ವಿದ್ಯಾರ್ಥಿಗಳಲ್ಲಿ ಮತ್ತು ಪಾಲಕ, ಪೋಷಕರಲ್ಲಿ ಆತಂಕ ಸೃಷ್ಟಿಸಿದೆ.

ಇಲಾಖೆಯಿಂದ ಮಕ್ಕಳಿಗೆ ಹೊಸ ಬೆಡ್‌, ಬೆಡ್‌ಸ್ಪ್ರೆಡ್‌, ಹೊದಿಕೆ ಇತ್ಯಾದಿಗಳನ್ನು ಒದಗಿಸುವ ವ್ಯವಸ್ಥೆ ಮಾಡಬೇಕು. ಕಾಲೇಜುಗಳಲ್ಲೂ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ ಏರಿಕೆಯಾಗದೇ ಇರುವುದರಿಂದ ಹಾಸ್ಟೆಲ್‌ಗ‌ಳಲ್ಲೂ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಹಾಜರಾಗಿಲ್ಲ. ಹೀಗಾಗಿ ಹಂತ ಹಂತವಾಗಿಯಾದರೂ ಹೊಸ ಬೆಡ್‌, ಬೆಡ್‌ಶೀಟ್‌, ಬೆಡ್‌ಸ್ಪ್ರೆಡ್‌ ಇತ್ಯಾದಿಗಳನ್ನು ಪೂರೈಕೆ ಮಾಡುವ ಕಾರ್ಯವನ್ನು ಸಮಾಜ ಕಲ್ಯಾಣ ಇಲಾಖೆ ಮಾಡಬೇಕು. ಇಲ್ಲವಾದರೆ, ಹಾಸ್ಟೆಲ್‌ಗ‌ಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುವ ಜತೆಗೆ ಮಕ್ಕಳನ್ನು ಹಾಸ್ಟೆಲ್‌ಗೆ ಕಳುಹಿಸುವ ಪಾಲಕ ಪೋಷಕರಲ್ಲೂ ಆತಂಕ ಹೆಚ್ಚಾಗಲಿದೆ. ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ಗ‌ಳು ಇನ್ನಷ್ಟೇ ಆರಂಭವಾಗಬೇಕಿದೆ. ಆಗ ಶಾಲಾ ಮಕ್ಕಳು ಹಾಸ್ಟೆಲ್‌ ಅಥವಾ ವಸತಿ ಶಾಲೆಗೆ ಬರಲಿದ್ದಾರೆ. ಅಷ್ಟರೊಳಗಾಗಿ ಇಲಾಖೆ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಂಡು, ಮಕ್ಕಳ ಸುರಕ್ಷತೆಗೆ ಇನ್ನಷ್ಟು ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.