ಪಾರದರ್ಶಕ ಚುನಾವಣೆಗೆ ಎಲ್ಲರೂ ಶ್ರಮಿಸಿ


Team Udayavani, Nov 23, 2020, 5:46 PM IST

ಪಾರದರ್ಶಕ ಚುನಾವಣೆಗೆ ಎಲ್ಲರೂ ಶ್ರಮಿಸಿ

ಮಂಡ್ಯ: ಪಾರದರ್ಶಕ ಚುನಾವಣೆಗೆ ಬಿಎಲ್‌ಒಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ನಿರ್ವಹಿಸಬೇಕು. ಗ್ರಾಮಮಟ್ಟದ ಕಣ್ಣು, ಕಿವಿಯಾಗಿರುವ ಬಿಎಲ್‌ಒಗಳು ಚುರುಕಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ಡೀಸಿ ಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

ನಗರದ ಡಾ.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಉಪವಿಭಾಗಾಧಿಕಾರಿಗಳ ಕಚೇರಿ, ತಾಲೂಕುದಂಡಾಧಿಕಾರಿಗಳ ಕಚೇರಿಯಿಂದ ನಡೆದ ಮತಗಟ್ಟೆಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ವಿಶ್ವದಲ್ಲೇ ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. 75 ವರ್ಷದಿಂದ ಭಾರತ ಪ್ರಜಾಪ್ರಭುತ್ವ ಸ್ಥಿರವಾಗಿದೆ ಎಂದರೆ ಅದಕ್ಕೆ ಕಾರಣ ಕಾಲಕಾಲಕ್ಕೆನಡೆಯುತ್ತಿರುವ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾದ ಚುನಾವಣೆ ಎಂದರು.

ದೋಷರಹಿತ ಮತದಾರರ ಪಟ್ಟಿ ಅವಶ್ಯ: ಪಾರದರ್ಶಕವಾದ ಚುನಾವಣೆ ನಡೆಯಬೇಕಾದರೆ ಪರಿಶುದ್ಧ, ದೋಷ ರಹಿತ ಮತದಾರರ ಪಟ್ಟಿ ಅವಶ್ಯ. ಮತದಾರರ ಪಟ್ಟಿ ತಯಾರಿಸುವ ಜವಾಬ್ದಾರಿಯುತ ಕೆಲಸವನ್ನು ಇಆರ್‌ಒ ಮತ್ತು ಎಆರ್‌ಒಗಳು, ಗ್ರಾಮ ಮಟ್ಟದಲ್ಲಿ ಬಿಎಲ್‌ಒಗಳ ಕಾರ್ಯವಾಗಿದೆ. ಯಾರು ದಕ್ಷತೆಯಿಂದ, ನಿಷ್ಪಕ್ಷಪಾತ, ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಾರೋ ಅವರಿಗೆ ಮಾತ್ರ ಸಂವಿಧಾನಾತ್ಮಕ ಹುದ್ದೆಯನ್ನು ಸರ್ಕಾರ ನೀಡುತ್ತದೆ. ಜವಾಬ್ದಾರಿಯುತ ಕೆಲಸವನ್ನು ಬಿಎಲ್‌ಒಗಳು ನಿಭಾಯಿಸಬೇಕು ಎಂದು ಹೇಳಿದರು.

ನಕಲಿ ಮತದಾರರಿಗೆ ಅವಕಾಶ ಬೇಡ: ನಮೂನೆ-6ರಲ್ಲಿ ಮತದಾರರ ಪಟ್ಟಿಯ ಸೇರ್ಪಡೆ ಕಾಲಾನುಕಾಲಕ್ಕೆ ಸಮರ್ಪಕವಾಗಿದ್ದರೆ ಮತದಾರರ ಪಟ್ಟಿ ಪರೀಕ್ಷಿತಗೊಳಿಸಲು ಮತ್ತು ದೋಷ ರಹಿತಗೊಳಿಸಲು ಸಾಧ್ಯವಿದೆ. ಬಿಎಲ್‌ಒಗಳು ಚುನಾವಣಾ ಆಯೋಗ ನೀಡುವ ನಿರ್ದೇಶನ, ಜವಾಬ್ದಾರಿಗಳನ್ನು ಕಾಲಕಾಲಕ್ಕೆ ತಿಳಿದುಕೊಳ್ಳಬೇಕು. ಗ್ರಾಮ ಮಟ್ಟದಲ್ಲಿ ಮರಣ ಹೊಂದಿದ ವ್ಯಕ್ತಿಗಳ ಪಟ್ಟಿಯನ್ನು ತೆಗೆದುಕೊಂಡು ನಮೂನೆ-17ರಲ್ಲಿ ಅವರನ್ನು ಮತದಾರರ ಪಟ್ಟಿಯಿಂದ ರದ್ದುಗೊಳಿಸಬೇಕು. ಇಲ್ಲದಿದ ªರೆ ನಕಲಿ ಮತದಾರರಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಇದಕ್ಕೆ ಬಿಎಲ್‌ ಒಗಳು ಅನುವು ಮಾಡಿಕೊಡಬಾರದು ಎಂದು ಹೇಳಿದರು.

ಎರಡು ಕಡೆ ಹೆಸರಿದ್ದರೆ ಅಪರಾಧ: ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಸೆಕ್ಷನ್‌ ಐಪಿಸಿ 180, 189, 190ರಂತೆ ಮತಪಟ್ಟಿಯಲ್ಲಿ ಎರಡು ಕಡೆ ಹೆಸರಿದ್ದರೆ ಅಪರಾಧ.6ತಿಂಗಳಿಂದ 1 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಿದೆ. ಆದ್ದರಿಂದ ಪುನರಾವರ್ತನೆಗೊಂಡಿರುವ ಮತದಾರರನ್ನು ತೆಗೆದು ಹಾಕಬೇಕು. ಮತದಾರರ ಪಟ್ಟಿಯಲ್ಲಿ ಕೆಲವು ವ್ಯಕ್ತಿಗಳ ಭಾವಚಿತ್ರ, ಹೆಸರಿನ ಅಕ್ಷರ ದೋಷ, ವಯಸ್ಸು ಮತ್ತು ಲಿಂಗ, ತಪ್ಪಾಗಿರುವುದರಿಂದ ಅವುಗಳನ್ನು ಸರಿಪಡಿಸಲು ಯೋಜನೆ ರೂಪಿಸಿಕೊಳ್ಳಬೇಕು ಎಂದು ಸೂಚಿಸಿದರು.

ಸ್ಪೀಕಿಂಗ್‌ ಆರ್ಡರ್‌ ಮಾಡಿ: ವಿಶೇಷ ನೋಂದಣಿ ಪ್ರಕ್ರಿಯೆಯು ನಡೆಯುತ್ತಿದ್ದು, ನ.18ರಂದು ಕರಡು ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಕಾಲಾವಕಾಶವಿದ್ದು, ಆಕ್ಷೇಪಣೆಗಳನ್ನು ಸ್ವೀಕಾರ ಮಾಡಿ ಅಲ್ಲಿ ಸ್ಪೀಕಿಂಗ್‌ ಆರ್ಡರ್‌ ಮಾಡಬೇಕು. ದೋಷ ರಹಿತವಾದ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲು 2021ರ ಜ.14 ಕೊನೆ ದಿನ. ಅಂತಿಮ ಪಟ್ಟಿಯನ್ನು 18ರಂದು ಪ್ರಚುರಪಡಿಸಲಾಗುವುದುಎಂದರು. ಗರುಡು ಆ್ಯಪ್‌ ಅನ್ನು ಬಿಡುಗಡೆಮಾಡಲಾಯಿತು. ಉಪವಿಭಾಗಾಧಿಕಾರಿ ನೇಹಾಜೈನ್‌, ನಗರಸಭೆ ಆಯುಕ್ತ ಲೋಕೇಶ್‌, ತಹಶೀಲ್ದಾರ್‌ ಚಂದ್ರಶೇಖರ್‌ ಶಂ.ಗಾಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.