ಚಿಕ್ಕಮಗಳೂರು : ಪತ್ನಿಯಿಂದಲೇ ಪತಿ ಕೊಲೆ : ಪ್ರಿಯಕರನ ಜೊತೆ ಸೇರಿ ಗಂಡನ ಮರ್ಡರ್
Team Udayavani, Nov 23, 2020, 8:05 PM IST
ಚಿಕ್ಕಮಗಳೂರು : ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ದೊಡ್ಟಹಟ್ಟಿಯಲ್ಲಿ ನಡೆದಿದೆ.
ಪ್ರದೀಪ್ (32) ಕೊಲೆಯಾದ ವ್ಯಕ್ತಿ. ಪ್ರದೀಪ್ ಪತ್ನಿ ರಾಗಿಣಿಗೆ ಕಳೆದ ಆರು ತಿಂಗಳ ಹಿಂದೆ ಶ್ರೀನಿವಾಸ್ ಎಂಬ ವ್ಯಕ್ತಿಯ ಪರಿಚಯ ಆಗಿತ್ತು. ಪರಿಚಯ ಪ್ರೇಮ ಬಂಧಕ್ಕೆ ತಿರುಗಿತ್ತು. ರವಿವಾರ ರಾತ್ರಿ ರಾಗಿಣಿಯನ್ನು ಬಿಡುವಂತೆ ಪ್ರದೀಪ್ ಗೆ ಶ್ರೀನಿವಾಸ ಕೇಳಿಕೊಂಡಿದ್ದ. ಇದನ್ನು ಒಪ್ಪದ ಕಾರಣಕ್ಕೆ ರಾಗಿಣಿ ತನ್ನ ಪತಿಯನ್ನು ಪ್ರಿಯಕರ ಶ್ರೀನಿವಾಸ್ ಜೊತೆ ಸೇರಿ ಕೊಲೆ ಮಾಡಿದ್ದಾಳೆ. ಪ್ರದೀಪ್ ನ ಕುತ್ತಿಗೆಯನ್ನು ಶಾಲುನಲ್ಲಿ ಹಿಸುಕಿ ಕೊಲೆ ಮಾಡಲಾಗಿದೆ.
ರಾಗಿಣಿ ಹಾಗೂ ಶ್ರೀನಿವಾಸ್ ರನ್ನು ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ