ಗೋದಾಮಿನಿಂದ 50 ಲಕ್ಷ ಮೌಲ್ಯದ ಪಾನ್ ಮಸಾಲಾ ಕಳ್ಳತನ: 12 ಗಂಟೆಯೊಳಗೆ ಆರೋಪಿ ಬಂಧನ
Team Udayavani, Nov 23, 2020, 8:24 PM IST
ಚಾಮರಾಜನಗರ: 50 ಲಕ್ಷ ರೂ. ಮೌಲ್ಯದ ಪಾನ್ ಮಸಾಲಾ ಪೊಟ್ಟಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಜಿಲ್ಲಾ ಪೊಲೀಸರು 12 ಗಂಟೆಯೊಳಗೆ ಪತ್ತೆ ಹಚ್ಚಿ, ಬಂಧಿಸಿ ಕದ್ದ ಮಾಲನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಕೋಳಿಪಾಳ್ಯ ಗ್ರಾಮದಲ್ಲಿ ಬವರ್ಲಾಲ್ ಎಂಬ ಸಗಟು ವ್ಯಾಪಾರಿ ಪಾನ್ಮಸಾಲಾ ಸಗಟು ಗೋದಾಮು ಹೊಂದಿದ್ದು, ನ. 22ರ ಮಧ್ಯರಾತ್ರಿ ಬಳಿಕ 10 ರಿಂದ 12 ಜನರಿದ್ದ ತಂಡವೊಂದು 2 ಗೂಡ್ಸ್ ವಾಹನಗಳಲ್ಲಿ ಬಂದು ಗೋದಾಮಿನ ಬೀಗ ಮುರಿದು ಅದರೊಳಗಿದ್ದ 50 ಲಕ್ಷ ರೂ. ಮೌಲದ್ಯ ಪಾನ್ ಮಸಾಲಾ ಕಳ್ಳತನ ಮಾಡಿದ್ದಾರೆಂದು ವ್ಯಾಪಾರಿ ಬವರ್ಲಾಲ್ ನಗರದ ಪೂರ್ವ ಠಾಣೆಯಲ್ಲಿ ದೂರು ನೀಡಿದ್ದರು.
ಈ ಕುರಿತು ಸೋಮವಾರ ಸಂಜೆ ನಗರದ ಪೂರ್ವ ಠಾಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ದಿವ್ಯಾ ಸಾರಾ ಥಾಮಸ್, ಸರ್ಕಲ್ ಇನ್ಸ್ಪೆಕ್ಟರ್ ನಂಜಪ್ಪ ಅವರ ನೇತೃತ್ವದಲ್ಲಿ, ಪೂರ್ವ ಠಾಣೆ ಪಿಎಸ್ಐ ರವಿಕುಮಾರ್ ಮತ್ತು ಲೋಕೇಶ್ ಮತ್ತು ಸಿಬ್ಬಂದಿಯ ತಂಡ ರಚಿಸಿ ಓರ್ವ ಆರೋಪಿಯನ್ನು ಬಂಧಿಸಿ ಎರಡು ಗೂಡ್ಸ್ ವಾಹನಗಳು ಹಾಗೂ ಅದರಲ್ಲಿದ್ದ ಪಾನ್ ಮಸಾಲಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಇನ್ನೂ 10 11 ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ:ಚಿಕ್ಕಮಗಳೂರು : ಪತ್ನಿಯಿಂದಲೇ ಪತಿ ಕೊಲೆ : ಪ್ರಿಯಕರನ ಜೊತೆ ಸೇರಿ ಗಂಡನ ಮರ್ಡರ್
ಆರೋಪಿ ತಮಿಳುನಾಡಿನ ತಿರುಪ್ಪೂರು ಜಿಲ್ಲೆ, ಧರ್ಮಪುರಿ ತಾಲೂಕಿನ ಅಬುತಲ್ಲಾ (21) ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ತನಿಖಾ ತಂಡದಲ್ಲಿ ಸಿಬ್ಬಂದಿ ಬಸವಣ್ಣ, ಜಯಪ್ಪ, ಶಾಂತರಾಜು, ಚಂದು, ಕೃಷ್ಣ, ಅಶೋಕ, ಕಿಶೋರ್, ಶ್ರೀನಿವಾಸ, ಚಂದ್ರಶೇಖರ್, ನಾಗರಾಜು, ಮಹದೇವಸ್ವಾಮಿ ಇದ್ದರು. ಪ್ರಕರಣ ದಾಖಲಾದ 12 ಗಂಟೆಯೊಳಗೆ ಆರೋಪಿ ಮತ್ತು ಕದ್ದ ಮಾಲನ್ನು ಪತ್ತೆ ಮಾಡಿದ ಪೂರ್ವ ಠಾಣೆಯ ಪೊಲೀಸ್ ತಂಡಕ್ಕೆ ನಗದು ಬಹುಮಾನ ನೀಡಲಾಗುವುದು ಎಂದು ಎಸ್ಪಿ ತಿಳಿಸಿದರು.
ಎಎಸ್ಪಿ ಅನಿತಾ ಹದ್ದಣ್ಣನವರ್, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು