ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಸಾವು ಪ್ರಕರಣ: ಇಂದು ಇಬ್ಬರ ಶವ ಪತ್ತೆ


Team Udayavani, Nov 25, 2020, 11:49 AM IST

ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಸಾವು ಪ್ರಕರಣ: ಇಂದು ಇಬ್ಬರ ಶವ ಪತ್ತೆ

ಮೂಡುಬಿದಿರೆ: ಇಲ್ಲಿ ಪಾಲಡ್ಕ ಗ್ರಾಮದ ಕಡಂದಲೆಯಲ್ಲಿ ವಿವಾಹ ಸಮಾರಂಭಕ್ಕೆಂದು ಆಗಮಿಸಿ ನಾಲ್ವರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣದಲ್ಲಿ ಬುಧವಾರ ಬೆಳಿಗ್ಗೆ ಮತ್ತಿಬ್ಬರ ಶವ ಪತ್ತೆಯಾಗಿದೆ.

ಮಂಗಳವಾರ ಸಂಜೆ ನಡೆದ ಘಟನೆಯಲ್ಲಿ ವಾಮಂಜೂರು ಮೂಡುಶೆಡ್ಡೆಯ ಹರ್ಷಿತಾ (20), ಆಕೆಯ ಸಹೋದರ ನಿಖೀಲ್‌ (18), ಸಂಬಂಧಿಕರಾದ ವೇಣೂರಿನ ಸುಭಾಸ್‌ (19), ಬಜಪೆ ಕೊಳಂಬೆ ಹೊಗೆಪದವು ರವಿರಾಜ್‌ (29) ಮೃತಪಟ್ಟಿದ್ದರು. ಇವರಲ್ಲಿ ಹರ್ಷಿತಾ ಮತ್ತು ಸುಭಾಸ್‌ ಮೃತದೇಹ ಮಂಗಳವಾರ ಸಂಜೆಯೇ ಪತ್ತೆಯಾಗಿತ್ತು. ಇಂದು ನಿಖೀಲ್ ಮತ್ತು ರವಿರಾಜ್ ಅವರ ಮೃತದೇಹವನ್ನು ಇಂದು ಹೊರತೆಗೆಯಲಾಗಿದೆ.

ಕಡಂದಲೆ ಬರಿಯಡ್ಕ ಶ್ರೀಧರ ಆಚಾರ್ಯ ಅವರ ಮಗನ ಮದುವೆಗೆಂದು ರವಿವಾರ ಬಂದಿದ್ದ ಹತ್ತಿರದ ಸಂಬಂಧಿಕರು ಬಟ್ಟೆ ಒಗೆಯಲೆಂದು ಕಡಂದಲೆಯ ಶಾಂಭವಿ ನದಿಯ ಉಪನದಿಯತ್ತ ತೆರಳಿದ್ದರು. ಬಳಿಕ ತುಲೆಮುಗೆರ್‌ ಎಂಬ ಸ್ಥಳದಲ್ಲಿ ಹಲವರು ಗುಂಪಿನಲ್ಲಿ ನೀರಿಗಿಳಿದಿದ್ದರು. ಅಲ್ಲಿ ಭಾರೀ ಆಳ ಇರುವುದು ಅವರ ಗಮನಕ್ಕೆ ಬಾರದೆ ಈ ಅವಘಡ ಸಂಭವಿಸಿದೆ.

ಮೊದಲು ನೀರಿಗೆ ಇಳಿದವರು ಮುಳುಗುತ್ತಿರುವುದನ್ನು ಕಂಡ ಬಜಪೆಯ ಕೊಳಂಬೆ ಹೊಗೆ ಪದವು ರವಿರಾಜ್‌ ಕೂಡಲೇ ನೀರಿಗಿಳಿದು ಈ ಮೂವರನ್ನು ಹೊರತುಪಡಿಸಿ ಉಳಿದ ಎಲ್ಲರನ್ನೂ ರಕ್ಷಿಸುವಲ್ಲಿ ಯಶಸ್ವಿಯಾದರು. ಬಳಿಕ ಇನ್ನೂ ಮೂವರನ್ನು ರಕ್ಷಿಸುವ ಯತ್ನದಲ್ಲಿ ದೈಹಿಕವಾಗಿ ಬಳಲಿ ಅವರು ಕೂಡ ಮುಳುಗಿ ಮೃತಪಟ್ಟರು.

ಕಡಂದಲೆ

ಹರ್ಷಿತಾ ಮತ್ತು ಸುಭಾಸ್ ಅವರ ಮರಣೋತ್ತರ ಪರೀಕ್ಷೆ ಮುಗಿದ್ದು, ಮೃತದೇಹವನ್ನು ಮನೆಯವರಿಗೆ ಹಸ್ತಾಂತರಿಸಲಾಗಿದೆ. ನಿಖೀಲ್ ಮತ್ತು ರವಿರಾಜ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಟಾಪ್ ನ್ಯೂಸ್

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.