ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಇನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್ ಹೆಸರು
ಮರ್ಯಾದಾ ಪುರುಷೋತ್ತಮ ಶ್ರೀರಾಮ್ ವಿಮಾನ ನಿಲ್ದಾಣವೆಂದು ಹೆಸರಿಡಲು ಯೋಗಿ ಸರ್ಕಾರದ ನಿರ್ಧಾರ
Team Udayavani, Nov 25, 2020, 4:08 PM IST
ಲಕ್ನೋ: ದಶಕಗಳಿಂದ ಕಗ್ಗಂಟಾಗಿ ಉಳಿದಿದ್ದ ಅಯೋಧ್ಯೆಯ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿಯ ಸಮಸ್ಯೆ ಕೊನೆಗೂ ಇತ್ಯರ್ಥವಾಗಿ ಅಯೋಧ್ಯೆಯಲ್ಲಿ ಈಗ ರಾಮ ಮಂದಿರ ಕಾರ್ಯ ನಡೆಯುತ್ತಿದೆ. ಹೀಗಾಗಿ ಸದ್ಯ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್ ಶ್ರೀರಾಮನ ಹೆಸರಿಡುವುದಾಗಿ ಹೇಳಿದ್ದರು. ಈ ಕುರಿತಂತೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಅಯೋಧ್ಯೆ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡುವ ನಿರ್ಧಾರಕ್ಕೆ ಸಂಪುಟ ಸಭೆಯಲ್ಲಿ ಒಕ್ಕೊರಲಿನಿಂದ ಸಮ್ಮತಿ ಸೂಚಿಸಲಾಗಿದೆ.
ಸಚಿವ ಸಂಪುಟದ ನಿರ್ಣಯ ಹಾಗೂ ಸಂಬಂಧಪಟ್ಟ ಕಾನೂನು ತಿದ್ದುಪಡಿಗಾಗಿ ಇದನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಕೇಂದ್ರ ಸಚಿವಾಲಯದಿಂದ ಒಪ್ಪಿಗೆ ದೊರೆತ ಬಳಿಕ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಯೋಗಿ ಆದಿತ್ಯನಾಥ ಸರಕಾರ ಸಿದ್ದತೆ ನಡೆಸಿದೆ.
ಒಪ್ಪಿಗೆ ದೊರೆತ ನಂತರ ಅಯೋಧ್ಯೆ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್ ವಿಮಾನ ನಿಲ್ದಾಣವೆಂದು ಬದಲಾಯಿಸಲಾಗುತ್ತದೆ.
ಆಗಷ್ಟ್ 5ರಂದು ಶ್ರೀರಾಮ ಮಂದಿರಕ್ಕೆ ಶಂಕು ಸ್ಥಾಪನೆಯಾದ ಬಳಿಕ ಅಯೋಧ್ಯೆಯಲ್ಲಿ ಮೂಲ ಸೌಕರ್ಯ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಯೋಗಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಈ ಮೂಲಕ ಪ್ರಮುಖ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಯೋಧ್ಯೆಯ ಹೆಸರು ಸೇರಿಸುವತ್ತ ಯೋಗಿ ಸರ್ಕಾರ ಕೆಲಸ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್