ಮಮತೆಯ ತೊಟ್ಟಿಲು ತೂಗಿದ ನ್ಯಾಯಾಧೀಶೆ

ಪರಿತ್ಯಕ್ತ ಮಗುವಿನ ನಾಮಕರಣ

Team Udayavani, Nov 25, 2020, 7:06 PM IST

Udupiಮಮತೆಯ ತೊಟ್ಟಿಲು ತೂಗಿದ ನ್ಯಾಯಾಧೀಶೆ

ಉಡುಪಿ: ಹೆತ್ತಮ್ಮನಿಗೆ ಬೇಡವಾದ ಮಗುವನ್ನು ಹಾದಿ ಬೀದಿಯಲ್ಲಿ ಬಿಟ್ಟು ಹೋಗುವುದಕ್ಕಿಂತ ಮಮತೆಯ ತೊಟ್ಟಿಲಲ್ಲಿ ಹಾಕುವುದು ಉತ್ತಮ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ನ್ಯಾಯಾಧೀಶೆ ಕಾವೇರಿ ತಿಳಿಸಿದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಪೊಲೀಸ್‌ ಠಾಣೆ, ನಾಗರಿಕ ಸಮಿತಿ ಟ್ರಸ್ಟ್‌ ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಬುಧವಾರ ಸಂತೆಕಟ್ಟೆ ಶ್ರೀ ಕೃಷ್ಣಾನುಗೃಹದಲ್ಲಿ ಆಯೋಜಿಸಿದ್ದ “ಮಡಿಲ ಬೆಳಗು’- ದತ್ತು ಹಾಗೂ ನಗರದಲ್ಲಿ ಪತ್ತೆಯಾದ ಪರಿತ್ಯಕ್ತ ನವಜಾತ ಶಿಶುವಿನ ನಾಮಕರಣದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾಯಿಗೆ ಬೇಡವಾದ ಶಿಶುವನ್ನು ಮಮತೆಯ ತೊಟ್ಟಿಲಲ್ಲಿ ಹಾಕಿದರೆ, ಅವರನ್ನು ಯಾರೊಬ್ಬರೂ ಪ್ರಶ್ನಿಸುವು ದಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬಂದಿಯೇ ಆ ಮಗುವನ್ನು ಆರೈಕೆ ಮಾಡುವ ಜತೆಗೆ ನಾಮಕರಣ ಕೂಡ ಮಾಡುತ್ತಾರೆ. ಮಕ್ಕಳಿಲ್ಲದ ದಂಪತಿಗೆ ಮಗುವನ್ನು ದತ್ತು ನೀಡಿ, ಆಸ್ತಿ ಹಕ್ಕಿನ ಜತೆಗೆ ಕುಟುಂಬದ ವಾತಾವರಣ ಕಲ್ಪಿಸುವ ಕೆಲಸ ಮಾಡು ತ್ತಾರೆ. ಪ್ರಾಣಿ- ಪಕ್ಷಿಗಳು ತಮ್ಮ ಮರಿ ಗಳು ತಾವೇ ಆಹಾರ ಹುಡುಕುವ ತನಕ ನೋಡಿಕೊಳ್ಳುತ್ತದೆ. ಮನುಷ್ಯರು ಈ ಗುಣವನ್ನು ಮರೆತಿದ್ದಾರೆ ಎಂದು ವಿಷಾದ ವ್ಯಕ್ತ ಪಡಿಸಿದರು.

ಮಗುವಿನ ನಾಮಕರಣ
ನಗರದ ಕಸದ ಡಬ್ಬಿಯಲ್ಲಿ ಆ.10 ರಂದು ಪತ್ತೆಯಾದ ಪರಿತ್ಯಕ್ತ ನವಜಾತ ಹೆಣ್ಣು ಮಗುವಿಗೆ ಕೃಷ್ಣಾನುಗ್ರಹದಲ್ಲಿ “ಪ್ರಜ್ವಲಾ’ ಎಂದು ನಾಮಕರಣ ಮಾಡಲಾಯಿತು. ಸಾಮಾನ್ಯ ಮಕ್ಕಳಂತೆ ನಾಮಕರಣದ ಧಾರ್ಮಿಕ ವಿಧಿಗಳನ್ನು ನಡೆಸಿಕೊಡಲಾಯಿತು.

ಪರಿತ್ಯಕ್ತ ಶಿಶುಗಳಿಗೆ ಬದುಕು ಕಲ್ಪಿಸಿಕೊಡುವ ಉದಾತ್ತ ಆಶಯದಿಂದ ರಾಜ್ಯ ಸರಕಾರ “ಮಮತೆಯ ತೊಟ್ಟಿಲು’ ಪ್ರಾರಂಭಿಸಿದೆ. ಜಿಲ್ಲೆಯಲ್ಲಿ ಈ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ಕಾನೂನು ಪರಿವೀಕ್ಷಕ ಪ್ರಭಾಕರ್‌ ತಿಳಿದರು.

ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ, ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್‌, ಮಹಿಳಾ ಪೊಲೀಸ್‌ ಠಾಣಾಧಿಕಾರಿ ಫಿಲೋಮಿನಾ, ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್‌ನ ನಿತ್ಯಾನಂದ ಒಳಕಾಡು ಮತ್ತಿತರರು ಉಪಸ್ಥಿತರಿದ್ದರು.

ದತ್ತು ಕಾರ್ಯಕ್ರಮದ ಮಾಹಿತಿ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಂಸ್ಥೆಯ ಆಡಳಿತಾಧಿಕಾರಿ ಉದಯ ಕುಮಾರ್‌ ಸ್ವಾಗತಿಸಿದರು. ಸಂಯೋಜಕಿ ಮರೀನಾ ವಂದಿಸಿದರು.

ಕರ್ತವ್ಯಪ್ರಜ್ಞೆ ಮೂಡಿಸಿದ ಎಸ್‌ಐ
ಕಾರ್ಯಕ್ರಮದ ಉದ್ಘಾಟನೆ ಸಂದರ್ಭ ಮಹಿಳಾ ಪೊಲೀಸ್‌ ಠಾಣಾ ಉಪನಿರೀಕ್ಷಕಿ ವೈಲೆಟ್‌ ಫಿಲೋಮಿನಾ ಅವರು ಮಗುವನ್ನು ಎತ್ತಿಕೊಂಡು ಮುದ್ದಾಡಿದ ದೃಶ್ಯ ನೆರೆದಿರುವವರಲ್ಲಿ ಕರ್ತವ್ಯಪ್ರಜ್ಞೆಯನ್ನು ಮೂಡಿಸಿತು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.