ಅಕ್ರಮ ಮರದ ದಿಮ್ಮಿ ಸಾಗಾಟ : 5ಲಕ್ಷ ಮೌಲ್ಯದ ಸೊತ್ತು ವಶಪಡಿಸಿದ ಬಂಟ್ವಾಳ ಅರಣ್ಯ ಅಧಿಕಾರಿಗಳು
Team Udayavani, Nov 25, 2020, 7:38 PM IST
ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದ ಬುಡೋಳಿಯಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಕಾಳಬೈರವ ಗಸ್ತಿನ ತಂಡ ನ. 24ರ ರಾತ್ರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳು ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ವಶಪಡಿಸಿಕೊಂಡ ಸೊತ್ತುಗಳು ಹಾಗೂ ವಾಹನದ ಮೌಲ್ಯ 5 ಲಕ್ಷ ರೂ. ಅಂದಾಜಿಸಲಾಗಿದೆ. ಕಾರ್ಯಾಚರಣೆಯಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್, ಯಶೋಧರ, ಅರಣ್ಯ ರಕ್ಷಕರಾದ ಲಕ್ಷ್ಮೀನಾರಾಯಣ, ಜಿತೇಶ್ ವಿ, ಸಿಬ್ಬಂದಿ ಪ್ರವೀಣ್ ಕಲ್ಮಲೆ, ಭಾಸ್ಕರ ಡಿ, ಜಯರಾಮ್ ಪಾಲ್ಗೊಂಡಿದ್ದರು.
ಡಿಸಿಎಫ್ ಡಾ| ಕರಿಕಾಲನ್ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಸುಬ್ರಹ್ಮಣ್ಯ ರಾವ್ ಅವರು ಪ್ರಕರಣದ ಮುಂದಿನ ತನಿಖೆ ನಡೆಸಲಿದ್ದಾರೆ. ಕಾರ್ಯಾಚರಣೆಯ ವೇಳೆ ಪುತ್ತೂರು ವಲಯ ಅರಣ್ಯಾಧಿಕಾರಿ ಕಚೇರಿ ಸಿಬಂದಿ ಸಹಕರಿಸಿದ್ದರು.
ಇದನ್ನೂ ಓದಿ:ಹುಬ್ಬಳ್ಳಿ : ಕೊಲೆ ನಡೆದ 24 ತಾಸಿನೊಳಗೆ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Muslim ಆ್ಯಮಿಮೇಟೆಡ್ ವೀಡಿಯೋ ತೆಗದುಹಾಕಲು ಎಕ್ಸ್ಗೆ ಆಯೋಗ ಸೂಚನೆ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ