ನಿವಾರ್ ಅಬ್ಬರ-ಜನಜೀವನ ತತ್ತರ: ತ. ನಾಡು, ಪುದುಚೇರಿಯಲ್ಲಿ ಭಾರೀ ವರ್ಷಧಾರೆ !


Team Udayavani, Nov 26, 2020, 8:05 AM IST

nivar

ಚೆನ್ನೈ: ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿವಾರ್  ಚಂಡಮಾರುತ ಅಬ್ಬರಿಸಿದ್ದು ಭಾರೀ ವರ್ಷಧಾರೆಯಾಗುತ್ತಿದೆ. ಮಧ್ಯರಾತ್ರಿ 1  ರಿಂದ 2:30 ರ ನಡುವೆ ಅಪ್ಪಳಿಸಿದ ಸೈಕ್ಲೋನ್  ಬಳಿಕ ದುರ್ಬಲವಾಗಿದೆ.

ಚಂಡಮಾರುತ ಅಪ್ಪಳಿಸಿದ ಸಮಯದಲ್ಲಿ ಗಂಟೆಗೆ 100-130 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, ಚೆನ್ನೈ ನಗರದಿಂದ 115 ಕಿ.ಮೀ ದಕ್ಷಿಣಕ್ಕೆ ಹಾಗೂ ಪುದುಚೇರಿಯಿಂದ 30 ಕಿಮೀ ಉತ್ತರಕ್ಕೆ ಇರುವ ಮರಕ್ಕಣಮ್ ಸಮೀಪ ಚಂಡಮಾರುತ ಅಪ್ಪಳಿಸಿದೆ. ಚೆನ್ನೈ ನಗರದಲ್ಲೂ ಭಾರೀ ಮಳೆಯಾಗುತ್ತಿದ್ದು ಹಲವೆಡೆ ಭೂಕುಸಿತಗೊಂಡಿದೆ. ಚಂಡಮಾರುತದ ಪರಿಣಾಮವಾಗಿ ಇವತ್ತು ಮಧ್ಯಾಹ್ನದವರೆಗೂ ತಮಿಳುನಾಡಿನ ಕೆಲವೆಡೆ ದೊಡ್ಡ ಪ್ರಮಾಣದಲ್ಲಿ ಮಳೆ ಗಾಳಿ ಇರಲಿದೆ. ನಾಳೆ ಶುಕ್ರವಾರದವರೆಗೂ ಮಳೆ ಮುಂದುವರಿಯಲಿದೆ  ಎನ್ನಲಾಗಿದೆ.

ಧಾರಾಕಾರ ಮಳೆಯಿಂದ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಚೆನ್ನೈನ ಚೆಂಬರಂಬಕ್ಕಂ ಸರೋವರದ ಗೇಟ್‌ಗಳನ್ನು 2015ರ ನಂತರ ಇದೇ ಮೊದಲ ಬಾರಿಗೆ ತೆರೆಯಲಾಗಿದೆ. ತೀವ್ರ ಚಂಡಮಾರುತ  ನಿವಾರ್, ಬಂಗಾಳಕೊಲ್ಲಿಯಲ್ಲಿಯಿಂದ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿದೆ.

ಈಗಾಗಲೇ ತಗ್ಗು ಪ್ರದೇಶಗಳು ಅಸುರಕ್ಷಿತ ಕಟ್ಟಡಗಳಿಂದ ಜನರನ್ನು ತೆರವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದೆ. 13 ಲಕ್ಷ ಜನರಿಗೆ ಸುರಕ್ಷತೆ ಕಲ್ಪಿಸಬಲ್ಲ 4,733 ಪರಿಹಾರ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೆ 28 ಸಾವಿರ ಮಕ್ಕಳು ಸೇರಿ 1.38 ಲಕ್ಷ ಜನರನ್ನ ಈ ಕೇಂದ್ರಗಳಿಗೆ ಕಳುಹಿಸಲಾಗಿದೆ. 13 ಜಿಲ್ಲೆಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ರಕ್ಷಣಾ ಕಾರ್ಯಕ್ಕಾಗಿ ಭಾರತೀಯ ಸೇನೆಯಿಂದ ಎಂಟು ತಂಡಗಳು ಇವತ್ತು ಚೆನ್ನೈಗೆ ಬಂದಿಳಿಯುತ್ತಿದ್ದು, ಒಂದೊಂದು ತಂಡದಲ್ಲಿ 10 ಮಂದಿ ಇದ್ದಾರೆ. ಇದರ ಜೊತೆಗೆ ಇನ್ನೂ ಆರು ತಂಡಗಳು ತಿರುಚ್ಚಿಗೆ ಹೋಗುತ್ತಿವೆ. ಹಾಗೆಯೇ, ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆಗಳೂ ಕೂಡ ತಮ್ಮ ಹಲವು ತಂಡಗಳನ್ನ ರಕ್ಷಣಾ ಕಾರ್ಯಕ್ಕಾಗಿ ತಮಿಳುನಾಡಿನಲ್ಲಿ ನಿಯೋಜಿಸಿವೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.