ಭೂಪರಿವರ್ತನೆ ಪ್ರಕ್ರಿಯೆ; ಆನ್‌ಲೈನ್‌ನಲ್ಲೂ ಮಧ್ಯವರ್ತಿಗಳದ್ದೇ ಆಟ


Team Udayavani, Nov 27, 2020, 6:12 AM IST

ಭೂಪರಿವರ್ತನೆ ಪ್ರಕ್ರಿಯೆ; ಆನ್‌ಲೈನ್‌ನಲ್ಲೂ ಮಧ್ಯವರ್ತಿಗಳದ್ದೇ ಆಟ

ಸಾಂದರ್ಭಿಕ ಚಿತ್ರ

ಉಡುಪಿ: ಭೂಪರಿವರ್ತನೆ ಪ್ರಕ್ರಿಯೆ; ಆನ್‌ಲೈನ್‌ನಲ್ಲೂ ಮಧ್ಯವರ್ತಿಗಳದ್ದೇ ಆಟರಾಜ್ಯಾದ್ಯಂತ ಭೂ ಪರಿವರ್ತನೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಜಾರಿಗೊಳಿಸಿದ್ದ ಆನ್‌ಲೈನ್‌ ವ್ಯವಸ್ಥೆ ಸಮರ್ಪಕವಾಗಿ ಜಾರಿಯಾಗದೆ ಕಗ್ಗಂಟಾಗಿಯೇ ಮುಂದುವರಿದಿದೆ. ಇದರಿಂದ ಜನ ಸಾಮಾನ್ಯರು ಭೂಪರಿ ವರ್ತನೆಗೆ ಹರಸಾಹಸ ಪಡುತ್ತಿದ್ದಾರೆ.

ಈ ಹಿಂದೆ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಪರಿವರ್ತಿಸಲು 25ಕ್ಕೂ ಅಧಿಕ ದಾಖಲೆಗಳನ್ನು ಸಲ್ಲಿಸ ಬೇಕಿತ್ತು. ಮಾತ್ರವಲ್ಲದೇ ಪ್ರತಿ ಹಂತ ದಲ್ಲೂ ಲಂಚ ನೀಡದಿದ್ದರೆ ಕಡತ ಮುಂದುವರಿಯುತ್ತಿರಲಿಲ್ಲ. ಇಂತಹ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಳೆದ ವರ್ಷ ಭೂ ಪರಿವರ್ತನೆಗೆ ಆನ್‌ಲೈನ್‌ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಇಲ್ಲಿಯೂ ದಲ್ಲಾಳಿಗಳು ಕಮಿಷನ್‌ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಆದೇಶ ಏನು ಹೇಳುತ್ತದೆ?
ಲ್ಯಾಂಡ್‌ ರೆಕಾರ್ಡ್ಸ್‌ (landrecords.karnataka.gov.in) ವೆಬ್‌ಸೈಟ್‌ನಲ್ಲಿ ಲಾಗ್‌ ಇನ್‌ ಐಡಿ ಸೃಷ್ಟಿಸಿ ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿ ಚಾಲ್ತಿ ವರ್ಷದ ಪಹಣಿ ಪತ್ರಿಕೆ, ಭೂಮಿಯ ಹಕ್ಕು ವರ್ಗಾವಣೆ ದಾಖಲೆ ಪತ್ರ ಅಪ್‌ಲೋಡ್‌ ಮಾಡಬೇಕು. ಇನ್ನು ಸರ್ವೇ ಸಂಖ್ಯೆಯೊಂದರಲ್ಲಿ ಭಾಗಶಃ ಭೂ ಪರಿ ವರ್ತನೆಗೆ ಬಯಸಿದ್ದರೆ 11-ಇ ನಕ್ಷೆಯ ಪ್ರತಿ ಸಲ್ಲಿಸಬೇಕಾಗುತ್ತದೆ. ಮುಂದಿನ ಎಲ್ಲ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ನಡೆಯುತ್ತದೆ. ಈ ಬಗ್ಗೆ ತಹಶೀಲ್ದಾರ್‌ ಕಚೇರಿ ಸೇರಿ ಸಂಬಂಧಿಸಿದ ಪ್ರಾಧಿ ಕಾರಗಳು 30 ದಿನದೊಳಗೆ ಆನ್‌ಲೈನ್‌ನಲ್ಲಿಯೇ ಅಭಿಪ್ರಾಯ ಹಾಗೂ ಆಕ್ಷೇಪಣೆ ಸಲ್ಲಿಸಬೇಕು. ಈ ಅವಧಿಯಲ್ಲಿ ಅಭಿಪ್ರಾಯ ನೀಡದಿದ್ದರೆ ಮುಂದಾಗುವ ಅನಾಹುತಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ. ಒಟ್ಟಾರೆ ಅರ್ಜಿ ಸಲ್ಲಿಕೆಯಾದ 60 ದಿನದೊಳಗೆ ಭೂ ಪರಿವರ್ತನೆ ಪೂರ್ಣಗೊಳಿಸಬೇಕು ಎನ್ನುವುದು ಕಂದಾಯ ಇಲಾಖೆ ಆದೇಶ.

ದಲ್ಲಾಳಿಗಳದ್ದೇ ಕೈ
ರಿಯಲ್‌ ಎಸ್ಟೇಟ್‌ ಕಂಪೆನಿಗಳನ್ನು ಹೊರತು ಪಡಿಸಿದರೆ ಸಾಮಾನ್ಯ ಭೂಮಾಲಕರಿಗೆ ಈ ಆನ್‌ಲೈನ್‌ ವ್ಯವಸ್ಥೆ ಬಗ್ಗೆ ತಿಳುವಳಿಕೆ ಇಲ್ಲ. ಹಾಗಾಗಿ ಇಂಥವರಿಗೆ ನೆರವು ನೀಡಲು ಮಧ್ಯವರ್ತಿಗಳು ಸಂಪರ್ಕಿಸುತ್ತಾರೆ. ಅವರು ನಿಗದಿಪಡಿಸಿದ್ದೇ ಅಂತಿಮ ದರ. ಹಣದಾಸೆಗೆ ಬೀಳುವ ಮಧ್ಯವರ್ತಿಗಳು ಇದರ ಮುಂದಿನ ಪ್ರಕ್ರಿಯೆಗೆ ಕಂದಾಯ ಇಲಾಖೆ ಕೇಸ್‌ ವರ್ಕರ್‌ಗಳು ಹಾಗೂ ಇನ್ನಿತರ ಸಿಬಂದಿಗೆ ಹಣ ನೀಡುವಂತೆ ರೈತರಿಗೆ ಸೂಚಿಸುತ್ತಾರೆ. ಈ ರೀತಿ ಭೂಮಾಲಕರು ಹಾಗೂ ಕಂದಾಯ ಅಧಿಕಾರಿಗಳ ನಡುವೆ ದಲ್ಲಾಳಿಗಳು ಕೊಂಡಿಯಂತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಅರ್ಜಿ ಸಲ್ಲಿಕೆಯಲ್ಲೂ ಲೋಪ
ಸರ್ವೇ ನಂಬರ್‌ ಒಂದರ ಭಾಗಶಃ ಭೂ ಪರಿವರ್ತನೆ ಆಗಬೇಕಿದ್ದರೆ 11-ಇ ನಕ್ಷೆ ಕಡ್ಡಾಯ. ನಿರ್ದಿಷ್ಟ ಸರ್ವೇ ನಂಬರ್‌ನ ಪೂರ್ತಿ ಜಾಗ ಪರಿವರ್ತನೆಗೆ ಈ ನಕ್ಷೆ ಕೊಡಬೇಕಾಗಿಲ್ಲ. ಆದರೆ ಅರ್ಜಿ ಸಲ್ಲಿಸುವವರು ಭಾಗಶಃ ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದ್ದರೂ 11-ಇ ನಕ್ಷೆ ಅಪ್‌ಲೋಡ್‌ ಮಾಡಿಸುತ್ತಿಲ್ಲ. ಇದರಿಂದ ಅರ್ಜಿ ತಿರಸ್ಕೃತವಾಗುತ್ತಿದೆ. ಆನ್‌ಲೈನ್‌ನಲ್ಲಿ ಸುಲಭವಾಗಿ ಭೂ ಪರಿವರ್ತನೆ ಆಗುತ್ತದೆ ಎಂದು ಭಾವಿಸಿ ಪೂರಕ ದಾಖಲೆಗಳನ್ನು ಒದಗಿಸದೆ ಅರ್ಜಿ ಸಲ್ಲಿಸುವವರೂ ಇದ್ದಾರೆ ಎನ್ನುತ್ತಾರೆ ಅಧಿಕಾರಿಗಳು.

ಮಧ್ಯವರ್ತಿಗಳ ಸಂಪರ್ಕ ಬೇಡ
ಸಾರ್ವಜನಿಕರ ಕೆಲಸಗಳನ್ನು ಸುಲಭಗೊಳಿಸುವ ಉದ್ದೇಶದಿಂದ ಸರಕಾರ ಭೂಪರಿವರ್ತನೆಗೆ ಆನ್‌ಲೈನ್‌ ಸೌಲಭ್ಯ ಕಲ್ಪಿಸಿದೆ. ಸೇವಾಸಿಂಧು ಕೇಂದ್ರಗಳಲ್ಲಿಯೂ ಇದನ್ನು ಮಾಡಬಹುದು. ಯಾರು ಕೂಡ ಮಧ್ಯವರ್ತಿಗಳನ್ನು ಸಂಪರ್ಕಿಸುವ ಅಗತ್ಯವಿಲ್ಲ. ಅರ್ಜಿ ಸಲ್ಲಿಕೆ ಸಂದರ್ಭ ಪೂರಕ ದಾಖಲೆಗಳನ್ನೆಲ್ಲ ಒದಗಿಸಿದರಾಯಿತು. ಭೂಪರಿವರ್ತನೆಗೆ ದುಬಾರಿ ಶುಲ್ಕ ಕೇಳಿದರೆ ನೇರವಾಗಿ ನನ್ನನ್ನು ಅಥವಾ ಸ್ಥಳೀಯ ತಹಶೀಲ್ದಾರ್‌ಗಳನ್ನು ಸಂಪರ್ಕಿಸಬಹುದು. ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. – ಜಿ. ಜಗದೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.