ದೇವರಾಜ್ ಅರಸ್ ಹೆಸರಿನಲ್ಲಿ ಹುಣಸೂರು ಪ್ರತ್ಯೇಕ ಜಿಲ್ಲೆಗೆ ಎಚ್. ವಿಶ್ವನಾಥ್ ಬೇಡಿಕೆ
Team Udayavani, Nov 27, 2020, 1:50 PM IST
ಬೆಂಗಳೂರು: ವಿಜಯನಗರ ನೂತನ ಜಿಲ್ಲೆ ರಚನೆ ಬೆನ್ನಲ್ಲೇ ಹುಣಸೂರು ಪ್ರತ್ಯೇಕ ಜಿಲ್ಲೆಗೆ ಬೇಡಿಕೆ ಆರಂಭವಾಗಿದ್ದು, ದೇವರಾಜ್ ಅರಸ್ ಹೆಸರಿನಲ್ಲಿ ಹುಣಸೂರನ್ನು ಜಿಲ್ಲೆಯನ್ನಾಗಿ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ ಹುಣಸೂರು ಜಿಲ್ಲೆ ಮಾಡಿ ಎಂದು ಬೇಡಿಕೆ ಇಟ್ಟಿದ್ದೆವು. ಆರು ತಾಲ್ಲೂಕು ಸೇರಿ ದೇವರಾಜ್ ಅರಸ್ ಹೆಸರಿನಲ್ಲಿ ಜಿಲ್ಲೆ ಮಾಡಿ ಎಂದು ಬೇಡಿಕೆ ಇರಿಸಿದ್ದೆವು ಎಂದಿದ್ದಾರೆ.
ಮೈಸೂರು ನಗರದ ಒತ್ತಡ ಕಾರಣದಿಂದ ಜಿಲ್ಲಾಧಿಕಾರಿ ಹುಣಸೂರು ಭಾಗಕ್ಕೆ ಅಪರೂಪಕ್ಕೆ ಬರುತ್ತಾರೆ. ಹೀಗಾಗಿ ಹುಣಸೂರನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂದು ವಿಶ್ವನಾಥ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ನೂತನ ವಿಜಯನಗರ ಜಿಲ್ಲೆಗೆ ಆರು ತಾಲೂಕುಗಳು ಸೇರ್ಪಡೆ: ಹೊಸಪೇಟೆ ಜಿಲ್ಲಾಕೇಂದ್ರ
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ದೆಹಲಿ ಮಟ್ಟದ ಪಕ್ಷಗಳು. ಯಾವಾಗ ಅಲ್ಲಿಂದ ಅನುಮತಿ ಸಿಗುತ್ತದೆ ಅವಗ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದರು.
ಕುರುಬ ಸಮುದಾಯದ ಸ್ವಾಮೀಜಿಗಳು, ಜನಪ್ರತಿನಿಧಿಗಳು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮೂರು ಪ್ರಮುಖ ಬೇಡಿಕೆ ಇಟ್ಟಿದ್ದಾರೆ. ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಿ ಎಂದು ಮನವಿ ಮಾಡಲಾಗಿದೆ. ಕುರುಬ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ 500 ಕೋಟಿ ನೀಡಬೇಕು ಮತ್ತು ಕುರುಬ ಸಮುದಾಯದ ಬೈರತಿ ಬಸವರಾಜುಗೆ ಸಚಿವ ಸ್ಥಾನ ನೀಡಿದ್ದಾರೆ, ಉಳಿದ ಮೂವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆಯಿದೆ ಎಂದು ವಿಶ್ವನಾಥ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ