ಕುರಿ-ಮೇಕೆ ಸಾಕಾಣಿಕೆದಾರರ ಸಂಘಗಳ ಪ್ರತಿಭಟನೆ
Team Udayavani, Nov 27, 2020, 3:56 PM IST
ಬಾಗಲಕೋಟೆ: ಮರಣ ಹೊಂದಿದ ಕುರಿಗೆ ನೀಡುತ್ತಿರುವ ಪರಿಹಾರವನ್ನು ಕೂಡಲೇ ಮುಂದುವರಿಸಬೇಕು ಎಂದುಒತ್ತಾಯಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾಮಂಡಳದಿಂದ ಗುರುವಾರ ಪ್ರತಿಭಟನೆ ನಡೆಸಿಜಿಲ್ಲಾ ಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘದ ರಾಜ್ಯಾಧ್ಯಕ್ಷ ಪಂಡಿತರಾವ್ ಚಿದ್ರಿ ಮಾತನಾಡಿ, ರಾಜ್ಯದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಉತ್ತೇಜಿಸಲು ಕುರಿಗಾರರಿಗೆ ಅವಶ್ಯವಿರುವ ಆರ್ಥಿಕನೆರವು, ಮೇವಿನ ಸಮರ್ಪಕ ಬಳಕೆ, ಪಾಲನೆ, ರೋಗನಿವಾರಣೆ ವಿವಿಧ ರೀತಿಯ ನಿರ್ವಹಣೆಗೆ ಅವಶ್ಯವಿರುವ ಮಾರ್ಗದರ್ಶನ ಹಾಗೂ ವೈದ್ಯಕೀಯ ಸೇವೆಗಾಗಿ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆಗಳ ಸಾಕಾಣಿಕೆದಾರರ ಸಂಘಗಳು ಸ್ಥಾಪನೆಯಾಗಿವೆ.
ಹಿಂದಿನ ಸರ್ಕಾರ ಇದಕ್ಕಾಗಿ ಮೃತಪಟ್ಟ ಕುರಿಗೆ 5 ಸಾವಿರ ರೂ. ಪರಿಹಾರ ನೀಡುತಿತ್ತು. ಆದರೆ, ಈಗಿನ ಸರ್ಕಾರ ಅದನ್ನು ರದ್ದು ಮಾಡಿದೆ. ಇದರಿಂದ ಕುರಿ ಸಾಕಾಣಿಕೆದಾರರಿಗೆ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ಮತ್ತೇ ಪರಿಹಾರವನ್ನು ನೀಡಲು ಸಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಕುರಿಗಾರರ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಕುರಿಗಳನ್ನು ಮೇಯಿಸಲು ಸ್ವಂತ ಜಮೀಜು ಇಲ್ಲದಿರುವುದರಿಂದ ಅರಣ್ಯ ಪ್ರದೇಶ ಅವಲಂಬಿತರಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಯಾವುದೇ ಗಿಡಮರಗಳಿಗೆ ಹಾನಿಯಾಗದಂತೆ ಹಾಗೂ ಅರಣ್ಯ ನಾಶವಾಗದಂತೆ ಕುರಿಗಳನ್ನು ಮೇಯಿಸಲು ಅನುಮತಿ ನೀಡಬೇಕು.
ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಕುರಿ ಮೇಕೆಗಳಿಗೆ ಜಂತುನಾಶಕ ಔಷಧಿ ನೀಡಲಾಗುತ್ತಿತ್ತು. ಈಗ ಪಶು ಆಸ್ಪತ್ರೆ ಮೂಲಕ ವಿತರಿಸುತ್ತಿದ್ದು, ಇದರಿಂದ ಸರಿಯಾದ ಸಮಯದಲ್ಲಿ ಕುರಿಗಾರರಿಗೆ ಔಷ ಧಿಯನ್ನು ತಲುಪಿಸಲು ಸಾಧ್ಯವಾಗುತ್ತಿಲ್ಲ. ಔಷ ಧಿಗಳು ಕುರಿ ಸಂಘದಿಂದಲೇ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕುರಿಗಾರರಿಗೂ ಪತ್ತಿನ ಸಹಕಾರ ಸಂಸ್ಥೆಗಳಿಂದ ಶ್ಯನ್ಯ ಬಡ್ಡಿ ದರದಲ್ಲಿ ಸಾಲ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು. ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘದ ಮಹಾಮಂಡಳದ ನಿರ್ದೇಶಕರಾದ ಬಿ.ಎಸ್. ಮೊಕಾಶಿ, ಸಂಗಮೇಶ ವಾಲಿಕಾರ, ಕಮತಗಿಯ ದುರ್ಗಾ ಕುರಿ ಸಂಗೋಪನೆ ಭೀಮಪ್ಪ ಕೆಂಗಾರ, ಹೆರಕಲ್ ಸಿದ್ದೇಶ್ವರ ಕುರಿ ಸಂಗೋಪನೆ ಅಧ್ಯಕ್ಷ ಮಲ್ಲಪ್ಪ ವಾಲಿಕಾರ, ಆನಂದ ಮೊಕಾಶಿ, ಪರಪ್ಪ ವಗ್ಗ, ಪರಶುರಾಮ ಧರೆಗೊಂಡ, ಸಿದ್ದಪ್ಪ ಕಟಗಿ, ಮುನಿಯಪ್ಪ ಹುಣಶಿಕಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು
Pen Drive Case ಪ್ರಜ್ವಲ್ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ
MUST WATCH
ಹೊಸ ಸೇರ್ಪಡೆ
Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್ ಅಂಡರ್ಪಾಸ್
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!