ಚುಂಚನಗಿರಿ ಏತ ನೀರಾವರಿ ಯೋಜನೆಗೆ ಚಾಲನೆ


Team Udayavani, Nov 27, 2020, 4:28 PM IST

ಚುಂಚನಗಿರಿ ಏತ ನೀರಾವರಿ ಯೋಜನೆಗೆ ಚಾಲನೆ

ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ತಪ್ಪಲಲ್ಲಿರುವ ಹಲವುಕೆರೆಗಳಿಗೆ ಚುಂಚನಗಿರಿ ಶಾಖಾ ಕಾಲುವೆ ಮೂಲಕ ಹೇಮಾವತಿ ನೀರುಣಿಸುವ ಏತ ನೀರಾವರಿ ಯೋಜನೆಗೆ ಆದಿ ಚುಂಚನಗಿರಿಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.

ಉಸ್ತುವಾರಿ ಸಚಿವಕೆ.ಸಿ.ನಾರಾಯಣಗೌಡ, ಶಾಸಕ ಸುರೇಶ್‌ಗೌಡ ಸಾಥ್‌ ನೀಡಿದರು. ಬುಧವಾರ ರಾತ್ರಿಯೇ ಮಠಕ್ಕೆ ಆಗಮಿಸಿದ್ದ ಸಚಿವರು ಬಿ.ಜಿ.ನಗರದ ವಿಜ್ಞಾತಂ ಭವನದಲ್ಲಿವಾಸ್ತವ್ಯ ಹೂಡಿದ್ದರು. ಬೆಳಗ್ಗೆ ಮಠಕ್ಕೆ ಭೇಟಿ ನೀಡಿ ಕಾಲಭೈರವನಿಗೆ ಪೂಜೆ ಸಲ್ಲಿಸಿದ ಸಚಿವರು ನಂತರ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನ ಭೇಟಿಯಾಗಿ ಆಶೀರ್ವಾದ ಪಡೆದರು.

ತದನಂತರ ಭಕ್ತಾದಿಗಳ ಅನುಕೂಲಕ್ಕಾಗಿ ಬೆಟ್ಟದ ಸುತ್ತಲೂ ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಸಚಿವರು ಭೂಮಿ ಪೂಜೆ ನೆರವೇರಿಸಿದರು. ಬೀದರ್‌- ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹರಿಯುವ ಹೇಮಾವತಿಯ ಚುಂಚನಗಿರಿ ಶಾಖಾ ಕಾಲುವೆ ಬಳಿ ನಿರ್ಮಿಸಲಾಗಿರುವ ಏತ ನೀರಾವರಿ ಯಂತ್ರಾಗಾರದ ಕೊಠಡಿಯಲ್ಲಿ ನೀರೆತ್ತುವಯಂತ್ರದ ಸ್ವೀಚ್‌ ಒತ್ತುವ ಮೂಲಕ 2.65ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಲಾಯಿತು.ಬೆಟ್ಟದ ತಪ್ಪಲಲ್ಲಿರುವ ತಪೋವನ ಸೇರಿದಂತೆಹಲವು ಕೆರೆ- ಕಟ್ಟೆಗಳಿಗೆ ನೀರುಣಿಸುವ ಯೋಜನೆಇದಾಗಿದ್ದು. ಇದರಿಂದ ಕ್ಷೇತ್ರಕ್ಕೆ ಪ್ರಯೋಜನವಾಗಲಿದೆ. ಶ್ರೀಕ್ಷೇತ್ರದ ಮತ್ತೂಂದು ಭಾಗದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಪ್ರಗತಿಯಲ್ಲಿರುವಅಯ್ಯನಕೆರೆ ಕಾಮಗಾರಿ ಯನ್ನು ಸಚಿವರು ಮತ್ತು ಶಾಸಕರೊಂದಿಗೆ ಸ್ವಾಮೀಜಿ ವೀಕ್ಷಿಸಿದರು. ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಕಾವೇರಿ ನೀರಾವರಿ ನಿಗಮದ ತುರುವೇಕೆರೆ ವಲಯದಅಧೀಕ್ಷಕಎಂಜಿನಿಯರ್‌ವರದಯ್ಯ,ಎಡೆಯೂರು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜೇಶ್‌ ಗೌಡ, ಬೆಳ್ಳೂರು ಉಪ ವಿಭಾಗದ ಎಇಇ ರುದ್ದೇಶ್‌, ಗುತ್ತಿಗೆದಾರ ಗೌರೀಶ್‌, ಜೆಡಿಎಸ್‌ ಎಸ್ಸಿ,ಎಸ್ಟಿ ಯುವ ಘಟಕದ ತಾಲೂಕು ಅಧ್ಯಕ್ಷ ಲೋಹಿತ್‌ ಇತರರಿದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.