ಧವನ್, ಪಾಂಡ್ಯ ಅಬ್ಬರದ ಹೊರತಾಗಿಯೂ ಆಸೀಸ್ ವಿರುದ್ದ ಮುಗ್ಗರಿಸಿದ ಭಾರತ !


Team Udayavani, Nov 27, 2020, 5:48 PM IST

WEBSITE-SIZE

ಸಿಡ್ನಿ: ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿದೆ. ಆಸೀಸ್ ನೀಡದ 374 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಬ್ಲೂ ಬಾಯ್ಸ್ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 66 ರನ್ ಗಳಿಂದ ಸೋಲುಂಡಿದೆ.

ಹಾರ್ದಿಕ್ ಪಾಂಡ್ಯ ಅಬ್ಬರ ಮತ್ತು ಶಿಖರ್ ಧವನ್ ಮನಮೋಹಕ ಆಟದ ಹೊರತಾಗಿಯೂ ಕೊಹ್ಲಿ ಪಡೆ  ಆಸ್ಟ್ರೇಲಿಯಾ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟುವಲ್ಲಿ ವಿಫಲವಾಯಿತು.

374 ರನ್ ಗಳ ಗುರಿ ಬೆನ್ನತ್ತಿದ್ದ ಭಾರತಕ್ಕೆ ಉತ್ತಮ ಆರಂಭ ದೊರಕಿತು. ಓಪನರ್ ಗಳಾದ ಮಾಯಾಂಕ್ ಅಗರವಾಲ್ ಮತ್ತು ಶಿಖರ್ ಧವನ್ ಉತ್ತಮ ಅಡಿಪಾಯ ಹಾಕಿದರು. ಈ ಜೋಡಿ ಮೊದಲ ವಿಕೆಟ್ ಗೆ ಅರ್ಧಶತಕದ ಜೊತೆಯಾಟ ನಡೆಸಿತು. ಈ ವೇಳೆ 1 ಸಿಕ್ಸ್ ಹಾಗೂ 4 ಬೌಂಡರಿಗಳ ನೆರವಿನಿಂದ ಆಕರ್ಷಕವಾಗಿ ಆಡುತ್ತಿದ್ದ ಮಯಾಂಕ್, ಹೆಜಲ್ ವುಡ್ ಎಸೆತದಲ್ಲಿ ಮ್ಯಾಕ್ಸ್ ವೆಲ್ ಗೆ ಕ್ಯಾಚಿತ್ತರು.

ನಂತರ ಧವನ್ ಜೊತೆಯಾದ ನಾಯಕ ವಿರಾಟ್ ಕೊಹ್ಲಿ ಕೂಡ ಭರವಸೆಯ ಆಟವಾಡಿದರು. 1 ಸಿಕ್ಸ್ ಹಾಗೂ 2 ಫೋರ್ ಗಳ ಮೂಲಕ 21 ರನ್ ಸಿಡಿಸಿದ್ದ ವೇಳೆ ವಿರಾಟ್, ಹೆಜಲ್ ವುಡ್ ಎಸೆತದಲ್ಲಿ ಫಿಂಚ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು.

ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಸಂಪೂರ್ಣ ವಿಫಲವಾಗಿತ್ತು. ಶ್ರೇಯಸ್ ಅಯ್ಯರ್ ಕೇವಲ ಎರಡು ರನ್ ಗಳಿಸಿ ಬಂದ ದಾರಿಯಲ್ಲೇ ಹಿಂದಿರುಗಿದರು. ಭರವಸೆಯ ಆಟಗಾರ ಕೆ.ಎಲ್ ರಾಹುಲ್ 12 ರನ್ ಗಳಿಸಿದರೇ, ಜಡೇಜಾ 25 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಇದನ್ನೂ ಓದಿ: ಕೋವಿಡ್ 19ಗೆ ಲಸಿಕೆ ಲಭ್ಯವಾಗುವವರೆಗೆ ಕಠಿಣ ಕಾನೂನು ಜಾರಿಗೊಳಿಸಿ: ಕೇಂದ್ರಕ್ಕೆ ಸುಪ್ರೀಂ

ಈ ವೇಳೆ ಧವನ್ ಜೊತೆಯಾದ ಹಾರ್ದಿಕ್ ಪಾಂಡ್ಯ ತಾಳ್ಮೆಯ ಆಟವಾಡಿ ಪಂದ್ಯದ ಮೊತ್ತವನ್ನು 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಧವನ್ ಹಾಗೂ ಪಾಂಡ್ಯ ಇಬ್ಬರು ಕೂಡ ಅರ್ಧಶತಕ ಸಿಡಿಸಿ ಮಿಂಚಿದರು.  10 ಬೌಂಡರಿಗಳ ಮೂಲಕ 74 ರನ್ ಸಿಡಿಸಿದ್ದ ಧವನ್, ಜಾಂಪಾ ಬೌಲಿಂಗ್ ನಲ್ಲಿ ಸ್ಟಾರ್ಕ್ ಗೆ ಕ್ಯಾಚ್ ನೀಡಿದರು. ಶತಕದ ಸನಿಹದಲ್ಲಿದ್ದ ಪಾಂಡ್ಯ(90) ಕೂಡ  ಜಾಂಪಾ ಎಸೆತದಲ್ಲಿ ಸ್ಟಾರ್ಕ್ ಗೆ ಕ್ಯಾಚ್ ನೀಡಿ ಹೊರನಡೆದರು.

ಅಂತಿಮವಾಗಿ ನವದೀಪ್ ಸೈನಿ (29) ಹಾಗೂ ಮೊಹಮ್ಮದ ಶಮಿ (13) ತಂಡದ ಮೊತ್ತವನ್ನು 300ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಭಾರತ ನಿಗದಿತ 50  ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಲಷ್ಟೇ ಶಕ್ತವಾಯಿತು.

ಆಸೀಸ್ ಪರ  ಆ್ಯಡಂ ಜಾಂಪಾ 4 ವಿಕೆಟ್ ಪಡೆದು ಮಿಂಚಿದರೇ, ಹೆಜಲ್ ವುಡ್ 3 ವಿಕೆಟ್ ಉರುಳಿಸಿದರು. ಸ್ಟಾರ್ಕ್ 1 ವಿಕೆಟ್ ಪಡೆದರು.

ಇದನ್ನೂ ಓದಿ: ನಮ್ಮ ಸರಕಾರಕ್ಕೆ ಮಹಾರಾಷ್ಟ್ರ ಜನತೆಯ ಆಶೀರ್ವಾದವಿದೆ! ED, CBIನಿಂದ ಬೆದರಿಸಲಾಗದು: ಉದ್ಧವ್‌

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.