2ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರ ಶೇ.7.5ರಷ್ಟು ಕುಸಿತ; ಆರ್ಥಿಕ ಹಿಂಜರಿತ?
ಜಿಡಿಪಿಯ ಪ್ರಸ್ತುತ ಮೌಲ್ಯ 47.22 ಲಕ್ಷ ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
Team Udayavani, Nov 27, 2020, 6:46 PM IST
Representative Image
ನವದೆಹಲಿ:ಭಾರತ ತಾಂತ್ರಿಕವಾಗಿ ಆರ್ಥಿಕ ಹಿಂಜರಿತದಲ್ಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನ ಆರ್ಥಿಕ ತಜ್ಞ ತಂಡ ಹೇಳಿದ್ದ ಎರಡು ವಾರಗಳ ನಂತರ ಇದೀಗ ಶುಕ್ರವಾರ(ನವೆಂಬರ್ 27, 2020) ಬಿಡುಗಡೆಗೊಂಡಿರುವ ಜಿಡಿಪಿ ಅಂಕಿಅಂಶ ಈ ಮಾತನ್ನು ಪುಷ್ಟೀಕರಿಸಿದೆ. 2020-21ನೇ ಸಾಲಿನ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದ ಜಿಡಿಪಿ ಶೇ.7.5ಕ್ಕೆ ಕುಸಿತ ಕಂಡಿದೆ.
ತಾಂತ್ರಿಕವಾಗಿ ದೇಶದ ಜಿಡಿಪಿ ದರವು ಸತತ ಎರಡು ತ್ರೈಮಾಸಿಕದಲ್ಲಿ ಕುಸಿತ ಕಂಡರೆ ದೇಶ ಆರ್ಥಿಕ ಹಿಂಜರಿತ ಕಾಣಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ದರ ಶೇ.23.9ಕ್ಕೆ ಇಳಿಕೆಯಾಗಿತ್ತು.
ಭಾರತದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ.7.5ಕ್ಕೆ ಕುಸಿದಿದೆ ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆಗೊಳಿಸಿದ ಅಂಕಿಅಂಶದಲ್ಲಿ ತಿಳಿಸಿದೆ.
ಜಿಡಿಪಿಯ ಪ್ರಸ್ತುತ ಮೌಲ್ಯ 47.22 ಲಕ್ಷ ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.8.2ರಷ್ಟಿರಲಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದರು.
ಇದನ್ನೂ ಓದಿ:ಅಂದು ಭಿಕ್ಷೆ ಬೇಡುತ್ತಿದ್ದವಳು ಈಗ ನ್ಯಾಯವಾದಿ! 50ಕ್ಕೂ ಅಧಿಕ ಕೇಸು ಗೆದ್ದ ಹಿರಿಮೆ ಈಕೆಯದ್ದು
2ನೇ ತ್ರೈಮಾಸಿಕದ ಜಿಡಿಪಿ ಅಂಕಿಅಂಶದ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯ ಆರ್ಥಿಕ ಸಲಹೆಗಾರ ಸುಬ್ರಮಣಿಯನ್, ನಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿದೆ. ಕೋವಿಡ್ 19 ಸೋಂಕು ಭಾರತಕ್ಕೆ ಕಾಲಿಟ್ಟಿದ್ದು 2020ರ ಮಾರ್ಚ್ ನಲ್ಲಿ ಹೀಗಾಗಿ ಒಂದನೇ ತ್ರೈಮಾಸಿಕದಲ್ಲಿ ಜಿಡಿಪಿ ದರ ಮೈನಸ್ 23.9 ಇಳಿಕೆಯಾಗಿತ್ತು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ