ಮುಂಬಯಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ


Team Udayavani, Nov 27, 2020, 6:58 PM IST

ಮುಂಬಯಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ  ಭಾರೀ ಇಳಿಕೆ

ಮುಂಬಯಿ, ನ. 26: ಮುಂಬಯಿಯಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ರಸ್ತೆ ಅಪಘಾತ ಗಳಿಂದ ಸಾವನ್ನಪ್ಪುವವರ ಸಂಖ್ಯೆ ಕಡಿಮೆ ಯಾಗುತ್ತಿದ್ದು, ಇದು ಮುಂಬಯಿ ನಗರ ಟ್ರಾಫಿಕ್‌ ಇಲಾಖೆಯ ಪೊಲೀಸರ ಕಠಿನ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ.

ಜಾಗತಿಕ ರಸ್ತೆ ಸುರಕ್ಷತೆಗಾಗಿ ಬ್ಲೂಮ್ಬರ್ಗ್‌ ಲೋಕೋಪಕಾರ ಉಪಕ್ರಮ ಮತ್ತು ಮುಂಬಯಿ ಟ್ರಾಫಿಕ್‌ ಪೊಲೀಸರು ಸಹಿತ ಅದರ ಪಾಲುದಾರರು ಮುಂಬಯಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಸಾವಿನ ಸಂಖ್ಯೆ ಮತ್ತು ಗಾಯದ ಅಂಕಿಂಶವನ್ನು ವಿಶ್ಲೇಷಿಸಿ ವರದಿ ಬಿಡುಗಡೆ ಮಾಡಿದ್ದಾರೆ. ಮುಂಬಯಿಯಲ್ಲಿ 184 ಕಿ.ಮೀ. ರಸ್ತೆ ವಿಶ್ಲೇಷಿಸಿದ ಅನಂತರ, ಕ್ರ್ಯಾಶ್‌ ಅನಾಲಿಸಿಸ್‌ ತಂಡವು 2015 ಮತ್ತು 2019ರ ನಡುವೆ ರಸ್ತೆ ಅಪಘಾತಗಳ ಸಾವುಗಳಲ್ಲಿ  ಇಳಿಕೆ ಕಂಡುಬಂದಿದೆ ಎಂದು ತಿಳಿಸಿದೆ.

ಕಳೆದ ಸಾಲಿನಲ್ಲಿ 447 ಮಂದಿ ಸಾವು :

2019ರಲ್ಲಿ ಮುಂಬಯಿ ರಸ್ತೆ ಅಪ ಘಾತದಲ್ಲಿ 447 ಜನರು ಪ್ರಾಣ ಕಳೆದು ಕೊಂಡಿದ್ದು, 2018ಕ್ಕೆ ಹೋಲಿಸಿದರೆ ಶೇ.3 ರಷ್ಟು ಕುಸಿತ ಕಂಡುಬಂದಿದೆ. 2015ರ ಅಂಕಿಅಂಶಗಳಿಗೆ ಹೋಲಿಸಿದರೆ ಶೇ. 47ರಷ್ಟು ಕುಸಿತ ಕಂಡು ಬಂದಿದ್ದು, ಸಾವನ್ನಪ್ಪಿದವರಲ್ಲಿ ಶೇ. 80ರಷ್ಟು ಪುರುಷರು ಮತ್ತು ಮಾರಣಾಂತಿಕ ಗಾಯಗೊಂಡವರಲ್ಲೂ ಶೇ. 99ರಷ್ಟು ಪುರುಷರು ಎಂದು ವರದಿ ತಿಳಿಸಿದೆ. 2019ರಲ್ಲಿ ಗಾಯಗೊಂಡ ಹೆಚ್ಚಿನ ಚಾಲಕರು 20ರಿಂದ 24 ವರ್ಷದೊಳಗಿನ ವಯಸ್ಸಿನವರು ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು 30ರಿಂದ 59 ವರ್ಷ ವಯಸ್ಸಿನವರಾಗಿದ್ದಾರೆ. 2019ರಲ್ಲಿ ನಗರದ ಒಟ್ಟು ಸಾವುಗಳಲ್ಲಿ ಶೇ. 90ರಷ್ಟು ಪಾದಚಾರಿಗಳು, ಸೈಕ್ಲಿಸ್ಟ್‌ಗಳು ಮತ್ತು ಮೋಟಾರ್‌ ಸೈಕಲ್‌ ಸವಾರರು ಎಂದು ವರದಿ ಹೇಳಿದೆ.

ಘಾಟ್‌ಕೋಪರ್‌ ಫ್ಲೈಓವರ್‌ ಹಾಟ್‌ಸ್ಪಾಟ್‌ :

ಘಾಟ್‌ಕೋಪರ್‌ನ ಮಾಹುಲ್‌ ರಸ್ತೆ ಮತ್ತು ಬಾಳಾಸಾಹೇಬ್‌ ಠಾಕ್ರೆ ಫ್ಲೈ ಓವರ್‌ನಲ್ಲಿ ಗರಿಷ್ಠ ಸಾವುನೋವುಗಳು ದಾಖಲಾಗಿವೆ. ಅಮರ್‌ ಮಹಲ್‌ ಮತ್ತು ಗೋದ್ರೇಜ್‌ ಜಂಕ್ಷನ್‌ಗಳು ಅಪಘಾತ ವಲಯಗಳಾಗಿವೆ. 2017 ಮತ್ತು 2019ರ ನಡುವೆ ಅಮರ್‌ ಮಹಲ್‌ ಜಂಕ್ಷನ್‌ನಲ್ಲಿ 25 ಮಂದಿ ಮತ್ತು ಗೋದ್ರೇಜ್‌ ಜಂಕ್ಷನ್‌ನಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ವಾರದ ದಿನಗಳಲ್ಲಿ ರಾತ್ರಿ 7ರಿಂದ 9ರ ಅವಧಿಯಲ್ಲಿ ಸಂಭವಿಸಿದ ಅಪಘಾತಗಳು ಸಂಭವಿಸಿ ಹೆಚ್ಚಿನ ಸಾವುನೋವುಗಳಾಗಿವೆ. ವಾರಾಂತ್ಯದಲ್ಲಿ  ರಾತ್ರಿ 10ರಿಂದ 11ರ ವರೆಗೆ ಹೆಚ್ಚಿನ ಅಪಘಾತಗಳು ಸಂಭವಿಸಿವೆ.

ಪ್ರಸ್ತುತ ವರ್ಷ 172 ಮಂದಿ ಸಾವು :

ಮುಂಬಯಿ ಟ್ರಾಫಿಕ್‌ ಕಂಟ್ರೋಲ್‌ ಬ್ರಾಂಚ್‌ ಈ ವರ್ಷ ಜನವರಿಯಿಂದ ಆಗಸ್ಟ್‌ವರೆಗೆ ನಗರದಲ್ಲಿ ರಸ್ತೆ ಅಪಘಾತ ಸಾವುಗಳ ಬಗ್ಗೆ ತನ್ನ ವರದಿಯನ್ನು ಬಿಡುಗಡೆ ಮಾಡಿದೆ. ಈ ಅವಧಿಯಲ್ಲಿ ಒಟ್ಟು 172 ಸಾವುನೋವುಗಳನ್ನು ದಾಖಲಿಸಿದೆ, ಅದರಲ್ಲಿ ಶೇ. 47ರಷ್ಟು ಪಾದಚಾರಿಗಳು ಎಂದು ತಿಳಿಸಲಾಗಿದೆ. ಕಳೆದ ಆರೇಳು ತಿಂಗಳುಗಳಿಂದ ಕೋವಿಡ್  ಲಾಕ್‌ಡೌನ್‌ನಿಂದಾಗಿ ಅಪಘಾತಗಳ  ಸಂಖ್ಯೆ ಕಡಿಮೆಯಾಗಿದೆ ಎಂದು  ಮೂಲಗಳು ತಿಳಿಸಿವೆ.

ಸುರಕ್ಷಿತ ವೇಗದಲ್ಲಿ ಓಡಿಸಲು, ಹೆಲ್ಮೆಟ್‌ ಮತ್ತು ಸೀಟ್‌ ಬೆಲ್ಟ್ ಧರಿಸಲು ಮುಂಬಯಿ ಜನರಲ್ಲಿ ಮನವಿ ಮಾಡುತ್ತಿದ್ದೇವೆ. ಪಾನಮತ್ತರಾಗಿ ವಾಹನ ಚಲಾಯಿಸಬಾರದು ಎಂದು ಒತ್ತಾಯಿಸುತ್ತೇವೆ. ಸಂಚಾರವನ್ನು ನಿಯಂತ್ರಿಸಲು ಮತ್ತು ಮುಂದಿನ ದಿನಗಳಲ್ಲಿ ಅಪಘಾತಗಳನ್ನು ಕಡಿಮೆ ಮಾಡಲು ವಿವಿಧ ಯೋಜನೆಗಳನ್ನು ತರುವ ಯೋಚನೆಯಿದೆ. ಯಶಸ್ವಿ ಯಾದವ್‌, ಜಂಟಿ ಪೊಲೀಸ್‌ ಆಯುಕ್ತರು, ಸಂಚಾರ ವಿಭಾಗ, ಮುಂಬಯಿ.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.