ಬಿಜೆಪಿ ವಲಸಿಗ ಶಾಸಕರಲ್ಲೇ ಭಿನ್ನರಾಗ: ತಡರಾತ್ರಿ ಮೀಟಿಂಗ್, ‘ನಾಯಕ’ರ ವಿರುದ್ಧ ಆಕ್ರೋಶ
Team Udayavani, Nov 28, 2020, 8:27 AM IST
ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಶಾಸಕರಲ್ಲಿ ಇದೀಗ ಭಿನ್ನಮತ ಆರಂಭವಾಗಿದೆ. ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಲಾಬಿ, ಪರ ವಿರೋಧಗಳು ಈ ಹೊಸ ಬೆಳವಣಿಗೆಗೆ ಕಾರಣವಾಗಿದೆ.
ಶುಕ್ರವಾರ ರಾತ್ರಿ ಈ ವಲಸಿಗ ತಂಡ ಸಭೆ ಸೇರಿ ಚರ್ಚೆ ನಡೆಸಿದೆ. ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ರಿಗೆ ಸಚಿವ ಸ್ಥಾನ ನೀಡಲು ಲಾಬಿಮಾಡುತ್ತಿರುವ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಮೇಶ್ ಜಾರಕಿಹೊಳಿ ಅವರು ತಮ್ಮನ್ನು ತಾವು ವಲಸಿಗರ ನಾಯಕನಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮೈತ್ರಿ ತಂಡ ಕಿಡಿಕಾರಿದೆ.
ಇದನ್ನೂ ಓದಿ:ಆನ್ಲೈನ್ ತರಗತಿಗಿಲ್ಲ ತಡೆ : 15 ದಿನಗಳಲ್ಲಿ ಸಮಸ್ಯೆ ಪರಿಹಾರಕ್ಕೆ ಮನವಿ
ನಾವೆಲ್ಲಾ ಒಗ್ಗಟ್ಟಾಗಿರಬೇಕು. ಯಡಿಯೂರಪ್ಪ ನಾಯಕತ್ವ ಕ್ಕೆ ಬೆಂಬಲವಾಗಿರಬೇಕು. ನಮ್ಮೊಂದಿಗೆ ಬಂದವರನ್ನು ಮಂತ್ರಿ ಮಾಡಲು ಪ್ರಯತ್ನಿಸಬೇಕೆಂದು ನಿರ್ಧಾರ ಸಭೆಯಲ್ಲಿ ನಿರ್ಧಾರ ಮಾಡಲಾಯಿತು.
ಸದ್ಯ ಹೈದರಾಬಾದ್ ನಲ್ಲಿರುವ ಆರೋಗ್ಯ ಸಚಿವ ಕೆ ಸುಧಾಕರ್ ಸಭೆಗೆ ಗೈರಾಗಿದ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ರಾಜೀನಾಮೆ ನೀಡಿದ್ದ 17 ಶಾಸಕರಲ್ಲಿ 16 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಮೇಶ್ ಜಾರಕಿಹೊಳಿ, ಎಚ್ ವಿಶ್ವನಾಥ್, ಪ್ರತಾಪ್ ಗೌಡ ಪಾಟೀಲ್, ಶಿವರಾಂ ಹೆಬ್ಬಾರ್, ಬಿಸಿ ಪಾಟೀಲ್, ಮಹೇಶ್ ಕುಮಟಳ್ಳಿ, ಆನಂದ್ ಸಿಂಗ್, ಕೆ ಸುಧಾಕರ್, ಬೈರತಿ ಬಸವರಾಜ್, ಎಸ್ ಟಿ ಸೋಮಶೇಖರ್, ಮುನಿರತ್ನ, ಗೋಪಾಲಯ್ಯ, ನಾರಾಯಣ ಗೌಡ, ಆರ್. ಶಂಕರ್, ಶ್ರೀಮಂತ್ ಪಾಟೀಲ್ ಮತ್ತು ಎಂಟಿಬಿ ನಾಗರಾಜ್ ಬಿಜೆಪಿಗೆ ಸೇರ್ಪಡೆಯಾದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ