ಅಂತೂರ-ಬೆಂತೂರಲ್ಲಿ ಬಸಿ ನೀರಿನದ್ದೇ ಸಮಸ್ಯೆ!

ಮನೆಯಂಗಳದಲ್ಲಿ ಜಿನುಗುತ್ತಿದೆ ನೀರು,ಗ್ರಾಮದ ಕೆರೆ ನೀರು ಖಾಲಿ ಮಾಡಲು ತಹಸೀಲ್ದಾರ್‌ಗೆ ಪತ್ರ

Team Udayavani, Nov 28, 2020, 2:54 PM IST

ಅಂತೂರ-ಬೆಂತೂರಲ್ಲಿ ಬಸಿ ನೀರಿನದ್ದೇ ಸಮಸ್ಯೆ!

ಗದಗ: ಇತ್ತೀಚೆಗೆ ಸುರಿದ ಸತತ ಮಳೆಯಿಂದ ಈ ಊರಿನ ಕೆರೆ ಮೈದುಂಬಿದೆ. ಆದರೆ ಈ ಊರಿನ ಜನರಿಗೆ ಈ ವಿಷಯ ಸಂಭ್ರಮಕ್ಕಿಂತ ಸಮಸ್ಯೆಯಾಗಿಯೇ ಪರಿಣಮಿಸಿದೆ.

ಹೌದು. ತಾಲೂಕಿನ ಅಂತೂರ-ಬೆಂತೂರ ಗ್ರಾಮದ ಬೃಹತ್‌ ಕೆರೆ ಜೀವ ಜಲದಿಂದ ಮೈದುಂಬಿದೆ. ಸುಮಾರು 350 ಅಡಿ ಬೋರ್‌ವೆಲ್‌ ಕೊರೆದರೂ ಬಾರದ ನೀರು ಈಗ ಮನೆಯಂಗಳದಲ್ಲೇ ಜಿನುಗುತ್ತಿದ್ದು, ಸಮಸ್ಯೆ ತಂದೊಡ್ಡಿದೆ, ಹೀಗಾಗಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಕೆರೆ ನೀರು ಖಾಲಿ ಮಾಡುವಂತೆ ಗ್ರಾಪಂ ಆಡಳಿತ ಜಿಲ್ಲಾಡಳಿತಕ್ಕೆ ಪತ್ರ ಬರೆದಿದೆ.

ಬಸಿ ನೀರಿನ ಸಮಸ್ಯೆ: ಹಲವು ದಶಕಗಳ ಬಳಿಕ ಕೆರೆ ತುಂಬಿದ್ದರೂ ಗ್ರಾಮಸ್ಥರಿಗೆ ಸಂಭ್ರಮವಿಲ್ಲ. ಕಳೆದ ಆಗಸ್ಟ್‌ನಲ್ಲಿ ಉಂಟಾಗಿರುವ ಅತಿವೃಷ್ಟಿಯೊಂದಿಗೆ ಕೆರೆ ಭರ್ತಿಯಾಗಿದ್ದರಿಂದ ಭೂಮಿಯಲ್ಲಿ ತೇವಾಂಶ ವಿಪರೀತ ಹೆಚ್ಚಾಗಿದ್ದರಿಂದ ಉಭಯ ಗ್ರಾಮಗಳಲ್ಲಿ ಅಂತರ್ಜಲಮಟ್ಟ ಹೆಚ್ಚಿದ್ದರಿಂದ ವಿವಿಧ ಓಣಿಗಳ ತಗ್ಗು ಪ್ರದೇಶದ ಮನೆಗಳಲ್ಲಿ ಬಸಿ ನೀರಿನ ಸಮಸ್ಯೆ ಶುರುವಾಗಿದೆ. ಮಳೆಗಾಲ ಬಳಿಕವೂ ಬಸಿ ನೀರಿನ ಸಮಸ್ಯೆ ಮುಂದುವರಿದಿದೆ. ಮನೆ ಹಾಗೂ ದನದ ಕೊಟ್ಟಿಗೆಯ ಗುನ್ನೇವುಗಳಲ್ಲಿ ಹೆಚ್ಚಿನ ನೀರು ಜಿನುಗುತ್ತದೆ. ಬಸಿ ನೀರು ಖಾಲಿ ಮಾಡಿದ ಕೆಲವೇ ಸಮಯದಲ್ಲಿ ಮತ್ತೆ ಅಷ್ಟೇ ಪ್ರಮಾಣದ ನೀರು ಸಂಗ್ರಹವಾಗುತ್ತಿರುವುದು ಜನರ ನಿದ್ದೆಗೆಡಿಸಿದೆ.

ಬೋರ್‌ವೆಲ್‌ ಬೀಳದ ಊರು: ಜಿಲ್ಲೆಯಲ್ಲಿ ಎಲ್ಲ ಹಳ್ಳಿಗಳಿಗೆ ನದಿ ನೀರು ಪೂರೈಸುವ ಡಿಬಿಒಟಿ ಯೋಜನೆ ಅನುಷ್ಠಾನಕ್ಕೂ ಮುನ್ನ ಅಂತೂರ-ಬೆಂತೂರ ಗ್ರಾಮದಕುಡಿಯುವ ನೀರಿನ ಸಮಸ್ಯೆ ಹೇಳತೀರದಾಗಿತ್ತು. ಅದರಲ್ಲೂ ಬೇಸಿಗೆಯಲ್ಲಿ ಸುಮಾರು ನಾಲ್ಕೈದು ಕಿ.ಮೀ. ದೂರದ ಅಕ್ಕಪಕ್ಕದ ಊರುಗಳಿಂದ ಸೈಕಲ್‌, ದ್ವಿಚಕ್ರ ವಾಹನಗಳ ಮೇಲೆ ನೀರು ತರುವುದು ಅನಿವಾರ್ಯವಾಗಿತ್ತು. ಗ್ರಾಮದಲ್ಲಿ 350 ಅಡಿ ಕೊಳವೆ ಬಾವಿ ಕೊರೆದರೂ ನೀರು ಸಿಗುತ್ತಿರಲಿಲ್ಲ. ಗ್ರಾಪಂಆಡಳಿತ ಹಾಗೂ ಖಾಸಗಿ ವ್ಯಕ್ತಿಗಳು ಹಲವೆಡೆ ಬೋರ್‌ ಕೊರೆಯುವ ಪ್ರಯತ್ನ ನಡೆಸಿದ್ದರೂ ಫಲಿಸಿರಲಿಲ್ಲ. ಹೀಗಾಗಿ, ಅಂತೂರ್‌ ಗ್ರಾಪಂ ವತಿಯಿಂದ ಸುಮಾರು 3 ಕಿ.ಮೀ. ದೂರದ ನೀಲಗುಂದ ಸರಹದ್ದಿನಲ್ಲಿ ಬೋರ್‌ ವೆಲ್‌ ಕೊರೆಯಿಸಿ ಅಂತೂರ-ಬೆಂತೂರ ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿತ್ತು. ಆದರೆ, ಇತ್ತೀಚೆಗೆ ಉಂಟಾದ ಅತಿವೃಷ್ಟಿ ಮತ್ತು ಕೆರೆ ತುಂಬಿದ್ದರಿಂದ ಗ್ರಾಮದಲ್ಲಿ ಅಂತರ್ಜಲ ಗಣನೀಯವಾಗಿ ಹೆಚ್ಚಿದೆ.

ಗ್ರಾಮದಲ್ಲಿ ಮೂರ್‍ನಾಲ್ಕು ಅಡಿ ತಗ್ಗು ತೋಡಿದರೂ ನೀರು ಜಿನುಗುತ್ತಿದೆ. ಕೆರೆ ಸುತ್ತಲಿನ ಸುಮಾರು 15ಕ್ಕೂ ಹೆಚ್ಚು ಕುಟುಂಬಗಳು ಸ್ವಂತ ಮನೆ ತೊರೆದು ಬೇರೆಡೆ ಬಾಡಿಗೆ ಪಡೆದಿದ್ದಾರೆ. ಇನ್ನು ಕೆಲ ಮನೆಗಳು ಬಿರುಕು ಬಿಟ್ಟಿವೆ. ಕೆರೆ ಖಾಲಿ ಮಾಡದ ಹೊರತು ಬೇರೆ ದಾರಿಯಿಲ್ಲ ಎಂಬುದು ಗ್ರಾಮಸ್ಥರ ಮಾತು.

ಗ್ರಾಮದ ಕೆರೆಯಿಂದ ಸಮಸ್ಯೆ ಉಂಟಾಗುತ್ತಿದ್ದು, ಕೆರೆ ಖಾಲಿ ಮಾಡಬೇಕೆಂದು ಗ್ರಾಮಸ್ಥರ ಮನವಿ ಮೇರೆಗೆ ಕಂದಾಯ ಇಲಾಖೆ, ಜಿಪಂ ಹಾಗೂ ಡಿಸಿಗೆ ಗ್ರಾಪಂ ವತಿ ಯಿಂದ ಪತ್ರ ಬರೆಯಲಾಗಿದೆ. ಅದನ್ನು ಆಧರಿಸಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ನಿರ್ಧಾರ ಕೈಗೊಂಡಿಲ್ಲ. ಖೇಮಸಿಂಗ್‌ ಡಿ.ರಾಠೊಡ್‌, ಅಂತೂರ್‌ ಗ್ರಾಪಂ ಆಡಳಿತಾಧಿಕಾರಿ

ಮಳೆಗಾಲ ಮುಗಿದು ಎರಡ್ಮೂರು ತಿಂಗಳು ಕಳೆದರೂ ಗ್ರಾಮದಲ್ಲಿ ಬಸಿ ನೀರಿನ ಸಮಸ್ಯೆ ಕಡಿಮೆಯಾಗುತ್ತಿಲ್ಲ. ಇದರಿಂದ ಮುಂದೆ ಸಾಂಕ್ರಾಮಿಕ ಕಾಯಿಲೆಗಳು ಎದುರಾಗಬಹುದು. ಕೆರೆ ನೀರು ಹೊರಗೆ ಹರಿಸುವಂತೆ ಕೋರಿ ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಅಮಾಗಿ, ಗ್ರಾಮದ ಹಿರಿಯರು

 

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.