ಜಮ್ಮು-ಕಾಶ್ಮೀರ: ಮೊದಲ ಹಂತದ ಡಿಡಿಸಿ, ಪಂಚಾಯತ್ ಉಪಚುನಾವಣೆ ಮತದಾನ ಅಂತ್ಯ
ಮೊದಲ ಹಂತದ ಚುನಾವಣೆಗಾಗಿ 2,146 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು
Team Udayavani, Nov 28, 2020, 2:57 PM IST
ನವದೆಹಲಿ: ಕೇಂದ್ರಾಡಳಿತ ಜಮ್ಮು ಮತ್ತು ಕಾಶ್ಮೀರದ ಮೊದಲ ಹಂತದ ಡಿಡಿಸಿ(ಜಿಲ್ಲಾ ಅಭಿವೃದ್ಧಿ ಮಂಡಳಿ) ಮತ್ತು ಪಂಚಾಯತ್ ಉಪ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿರುವುದಾಗಿ ವರದಿ ತಿಳಿಸಿದೆ. ವಿವಿಧ ಮತಗಟ್ಟೆಯಲ್ಲಿ ಬೆಳಗ್ಗೆ 7ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 2ಗಂಟೆಗೆ ಮುಕ್ತಾಯವಾಗಿರುವುದಾಗಿ ಚುನಾವಣಾ ಆಯೋಗದ ಮೂಲಗಳು ಹೇಳಿದೆ.
ಕೇಂದ್ರಾಡಳಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದಿನಿಂದ ಎಂಟು ಹಂತಗಳ ಜಿಲ್ಲಾ ಅಭಿವೃದ್ಧಿ ಸಂಸ್ಥೆಗಳ (ಡಿಡಿಸಿ) ಚುನಾವಣೆ ನಡೆಯಲಿದ್ದು, 2019 ಆ.5ರಂದು ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಮತ್ತು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿದೆ.
ಡಿಡಿಸಿ(ಜಿಲ್ಲಾ ಅಭಿವೃದ್ಧಿ ಸಂಸ್ಥೆಗಳ) ಮೊದಲ ಹಂತದ ಚುನಾವಣೆಗಾಗಿ 2,146 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು ಎಂದು ರಾಜ್ಯ ಚುನಾವಣಾಧಿಕಾರಿ ಕೆಕೆ ಶರ್ಮಾ ತಿಳಿಸಿದ್ದಾರೆ.
ಚುನಾವಣೆಯಿಂದ ಕೆಲವು ಅಭಿವೃದ್ಧಿ ಕಾರ್ಯ ನಡೆಯಲಿದೆ ಎಂಬ ವಿಶ್ವಾಸ ಜನರದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ಪ್ರಾಮುಖ್ಯತೆ ಪಡೆದಿದೆ. ಈ ಕಾರಣದಿಂದಾಗಿಯೇ ನಾನು ಬೆಳಗ್ಗೆಯೇ ಮತ ಚಲಾಯಿಸಿರುವುದಾಗಿ ಬಂಡಿಪೋರಾ ಜಿಲ್ಲೆಯ ಮತದಾರರೊಬ್ಬರು ಇಂಡಿಯಾ ಟುಡೆ ಟಿವಿ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಅಧಿಕೃತ ಮಾಹಿತಿ ಪ್ರಕಾರ, ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರದಲ್ಲಿ 280 ಕ್ಷೇತ್ರಗಳಿದ್ದು, ಇದರಲ್ಲಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 2ಗಂಟೆವರೆಗೆ ಮತದಾನ ನಡೆದಿದೆ. ಮೊದಲ ಹಂತದ ಡಿಡಿಸಿ ಚುನಾವಣೆಯಲ್ಲಿ ಒಟ್ಟು 296 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಲ್ಲಿ 207 ಮಂದಿ ಪುರುಷರು, 89 ಮಹಿಳೆಯರು ಸೇರಿದ್ದಾರೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ