ಅರಣ್ಯ ಇಲಾಖೆಯಿಂದ ಕಾಫಿ ಗಿಡ ನಾಶ; ಸೂಕ್ತ ಪರಿಹಾರಕ್ಕೆ ಆಗ್ರಹ

ಗುಡ್ಡ ಪ್ರದೇಶದಲ್ಲಿ ನೀರಿನ ಕೊರತೆಯ ನಡುವೆ ಕಷ್ಟಪಟ್ಟು ಬೆಳೆಯಲಾಗಿದ್ದ ಗಿಡಗಳನ್ನು ಕುತ್ತು ಹಾಕಲಾಗಿದೆ.

Team Udayavani, Nov 27, 2020, 11:25 AM IST

ಅರಣ್ಯ ಇಲಾಖೆಯಿಂದ ಕಾಫಿ ಗಿಡ ನಾಶ; ಸೂಕ್ತ ಪರಿಹಾರಕ್ಕೆ ಆಗ್ರಹ

ಮಡಿಕೇರಿ: ಕಳೆದ ಕೆಲವು ವರ್ಷಗಳಿಂದ ‌ ಕಾಫಿ ಸೇರಿದಂತೆ ವಿವಿಧ ‌ ಬೆಳೆಗಳನ್ನು ಬೆಳೆಯಲಾಗುತ್ತಿದ್ದ ಜಮೀನಿಗೆ ಏಕಾಏಕಿ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಫ‌ಸಲು ನೀಡುತ್ತಿರುವ ಗಿಡಗಳನ್ನು ನಾಶ ‌ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕೆ. ನಿಡುಗಣೆ ಗ್ರಾ.ಪಂ ವ್ಯಾಪ್ತಿಯ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.

ಗಾಳೀಬೀಡು ಸಮೀಪದ ಹಹೆಬ್ಬೆಟ್ಟಗೇರಿಯ ‌ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತಬ್ರ ಕಾಲೋನಿಯಲ್ಲಿರುವ ಸುಮಾರು 40ಕ್ಕೂ ಅಧಿಕ ‌ ಕುಟುಂಬಗಳು ಕಳೆದ ಹಲವು ವರ್ಷಗಳಿಂದ ವಾಸವಾಗಿವೆ. ಕೆಲವು ಕುಟುಂಬಗಳು ಸ‌ರ್ಕಾರಿ ಜಮೀನಿನಲ್ಲಿ ಸಣ್ಣ ಪ್ರಮಾಣದಲ್ಲಿ ಕಾಫಿ ಕೃಷಿ  ಮಾಡಿಕೊಂಡು ಜೀವನಸಾಗಿಸುತ್ತಿದ್ದರೆ, ಹಲವು ಕುಟುಂಬಗಳು ಹಕ್ಕುಪತ್ರ ಪಡೆದು ವಾಸವಾಗಿದ್ದಾರೆ.

ಯಾವುದೇ ಮಾಹಿತಿ ನೀಡದೆ ಇಲ್ಲಿನ 4-5 ಕ ಕುಟುಂಬಗಳ ತೋಟಕ್ಕೆ ನುಗ್ಗಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಾಏಕಿ ಕಾಫಿಗಿಡಗಳನ್ನು ನಾಶ ಮಾಡಿದ್ದಾರೆ. ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮಂಗಳವಾರ ಇಲ್ಲಿನ ಕೆಲವು ನಿವಾಸಿಗಳ ಬಳಿ ಬಂದ ಅರಣ್ಯ ಇಲಾಖೆ ಸಿಬ್ಬಂದಿತೋಟಕ್ಕೆ ಸಂಬಂಧಂತೆ ಇಲಾಖೆಗೆ ಕೆಲವು ಸೂಕ್ತ ದಾಖಲೆ ಒದಗಿಸುವಂತೆ ಸೂಚಿಸಿದ್ದರು. ಆದರೆ ಬುಧವಾರ ಬೆಳಗ್ಗೆಯೇ ದಾಳಿ ಮಾಡಿದ ಸಿಬ್ಬಂದಿಗಳು ಕಾಫಿ, ಕರಿಮೆಣಸು, ವಿವಿಧ ಹಣ್ಣುಗಳ ಗಿಡವನ್ನು ನಾಶ ಮಾಡಿದ್ದಾರೆ. ಗುಡ್ಡ ಪ್ರದೇಶದಲ್ಲಿ ನೀರಿನ ಕೊರತೆಯ ನಡುವೆ ಕಷ್ಟಪಟ್ಟು ಬೆಳೆಯಲಾಗಿದ್ದ ಗಿಡಗಳನ್ನು ಕುತ್ತು ಹಾಕಲಾಗಿದೆ.

ಗುರುವಾರ ಮತ್ತೆ ಎಸಿಎಫ್ ಸ್ಥಳಕ್ಕೆ ಭೇಟಿ ನೀಡಿದ್ದು, ಈ ಸಂದರ್ಭ ಗ್ರಾಮಸ್ಥರು ಅರಣ್ಯ ಇಲಾಖೆಯ ಕ್ರಮವನ್ನು ಖಂಡಿಸಿದ್ದಾರೆ. ತಹಶೀಲ್ದಾರ್ ಅವರನ್ನು ಕರೆಸಿ ಪರಿಶೀಲನೆ ನಡೆಸಲಾಗುವುದು ಎಂದು ಎಸಿಎಫ್ ಪ್ರತಿಕ್ರಿಯಿಸಿದ್ದು, ಇದ್ದ ಗಿಡಗಳನ್ನೂ ನಾಶ ಮಾಡಿದ ಮೇಲೆ ಪರಿಶೀಲನೆ ಮಾಡುವುದು ಯಾಕೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ನಮಗೆ ನ್ಯಾಯ ದೊರೆಯಬೇಕಿದ್ದು, ಇಲ್ಲಿಯವರೆಗೆ ಕಷ್ಟಪಟ್ಟು ಬೆಳೆಸಿದ ಕಾಫಿ ಗಿಡಗಳನ್ನು ನಾಶ ಮಾಡಿದ್ದಕ್ಕೆ ಸೂಕ್ತ ಪರಿಹಾರವನ್ನು ಅರಣ್ಯ ಇಲಾಖೆಯೇ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.